Home / ಕವನ / ಕವಿತೆ / ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ ಯಾರಿರಬಹುದು?
ಅದೂ ಇಂಥ ಹೊತ್ತು ಬಡ ಬಡ ಸದ್ದು
ಯಾರಿರಬಹುದು?
ಬಾಗಿಲ ತೆರೆಯೋ ಧೈರ್‍ಯವಿಲ್ಲ
ಯಾರಿರಬಹುದು-ಪೊಲೀಸರಿದ್ದಾರು
ಪಾರ್‍ಟಿಯವರಿದ್ದಾರು
ಎಡಪಕ್ಷ ಬಲಪಕ್ಷ ಜಾಸೂಸಿನವರು
ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ
ಬಂದವನೊಬ್ಬನ ನಾಲಿಗೆ ತುಂಡು
ಇನ್ನೊಬ್ಬನ ಕೈತುಂಡು ಮತ್ತೊಬ್ಬನ ಕಾಲ್ತುಂಡು
ಹಲವರಿಗೆ ಕಣ್ಣುಗಳೆ ಇಲ್ಲ
ಅಂಗಾಂಗ ಕತ್ತರಿಸಿ ಬಿಸಾಕುತಾರಂತೆ
ಇಲ್ಲ ತೆರೆಯೋಲ್ಲ ನಾ ಬಾಗ್ಲ ತೆರೆಯೋಲ್ಲ
ದೀಪ ಹಚ್ಚಲ್ಲ ಮಾತಾಡ್ದೆ ಇರ್‍ತೀನಿ
ಸತ್ತಂತೆ ಇರ್‍ತೀನಿ ಮೌನವಾಗಿ
ಹಗಲಾದ್ರೂ ಹೀಗೇನೆ ಇರುಳಾದ್ರೂ ಹೀಗೇನೆ
ಇಲಿಯಂತೆ ಇರಬೇಕು ಯಾರಿಗೂ ಕಾಣಿಸದೆ
ಹೊದ್ದು ಮಲಕೊಳ್ತೀನಿ ಸದ್ದು ಮಾಡದೆ ನಾನು
ಆದ್ರೂ ಬಿಡವಲ್ಲರು ಬಾಗಿಲ ಬಡಿತ
ಬಡೀತಾನೇ ಇದ್ದಾರೆ ಬಡ ಬಡ ಧಡ ಬಡ
ಕೈಲಿ ಬಡೀತಾರೆ ದೊಣ್ಣೆಯಲಿ ಬಡೀತಾರೆ
ಮೊನ್ನೆಯೂ ಹೀಗಿತ್ತು ನಿನ್ನೆಯೂ ಹೀಗಿತ್ತು
ಎಷ್ಟೊತ್ತಿಗೋ ಬಂದು ಬಡೀತಾನೆ ಇರ್‍ತಾರೆ
ನಾಳೇನೂ ಬಡೀತಾರೆ ನಾಡಿದ್ದು ಬಡೀತಾರೆ
ಒಂದಲ್ಲ ಒಂದಿನ ಕೊಂಡೋಗದು ಖಂಡಿತ
ನಾಳೆ ಬರೋದು ಇಂದೇ ಬರ್‍ಲಿ
ತೆರೆದೇ ಬಿಡ್ತೀನಿ ಆಗೋದು ಆಗ್ಲಿ
ನರಕಕ್ಕಿಂತ್ಲು ಅದರ ಭಯವೇ ನರಕಾಂತಾರೆ
ನಾ ಕಾಣದ ನರಕ ಇನ್ನೇನಿದೆ?
ಏನ್ ಬೇಕೋ ಅದು ಮಾಡ್ಳಿ ಏನಾದ್ರೂ ಕಿತ್ಕಳ್ಲಿ
ಕಾಯ ನನ್ದಲ್ಲ ಮನಸು ನನ್ದಲ್ಲ
ಇಂಥ ಭಯಗ್ರಸ್ತ ಊರ್‍ನಲ್ಲಿ
ನಿಲ್ಸಯ್ಯ ನಿನ್ನ ಬಾಗಿಲ ಬಡಿತ
ನಾನಿದೊ ಬಂದೆ ಬಾಗಿಲ ತೆರೆದೆ
ಖಂಡವಿದ ಕೋ ಮಾಂಸವಿದ ಕೊ
ಚಂಡ ವ್ಯಾಘ್ರನೆ ನೀನಿದೆಲ್ಲವನುಂಡು ಸುಖದಿಂದಿರು
ನಾಳೆ ಇನ್ನೊಂದ್ಮನೆ ಹೋಗಿ ನೋಡ್ಕೊ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...