Home / ಕವನ / ಕವಿತೆ / ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ
ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ
ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ
ಉಂಡುಂಡು ಮಲಗಯ್ಯ ನಂಜುಂಡ ಅಯ್ಯ
ನೀ ದುಂಡಾಗೆ ಮಲಗೊ

ತಿಂದು ಮಲಗೋ ನಂಜುಂಡ ಅಯ್ಯ
ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ
ಎಳ್ಳುಂಡೆ ಗುಳ್ಳುಂಡೆ ಹಂಡೇಲಿ ತಂದೇವೊ
ತಿಂದು ಮಲಗಯ್ಯ ನಂಜುಂಡ ಅಯ್ಯ
ನೀ ಚಂದಾಗೆ ಮಲಗೊ

ಹೊದ್ದು ಮಲಗೋ ನಂಜುಂಡ ಅಯ್ಯ
ಚಡ್ಡರ ತಂದೇವೊ ಕೌದಿ ತಂದೇವೊ
ಕೊಲ್ಲಾಪುರದಿಂದ ಕಂಬಳಿ ತಂದೇವೊ
ಯಲ್ಲಾಪುರದಿಂದ ಮಖಮಲ್ಲು ತಂದೇವೊ
ಹೊದ್ದು ಮಲಗಯ್ಯ ನಂಜುಂಡ ಅಯ್ಯ
ನೀ ಮುದ್ದಾಗೆ ಮಲಗೊ

ಆಲಿಸಿ ಮಲಗೋ ನಂಜುಂಡ ಅಯ್ಯ
ವಾಲಗ ತಂದೇವೊ ವಾದ್ಯ ತಂದೇವೊ
ಹಲಗೆ ಜಾಗಟೆ ಶಂಖ ತಂದೇವೊ
ಆಲಿಸಿ ಮಲಗಯ್ಯ ನಂಜುಂಡ ಅಯ್ಯ
ನೀ ಲಾಲಿಸಿ ಮಲಗೊ

ಮುಂಗೋಳಿ ಕೂಗೀತು
ಪಲ್ಲಕಿ ಬಂದೀತು
ಜಳಕಕ್ಕೆ ಸ್ವಾಮಿ ನಿನ್ನ ಒಯ್ದೇವೊ
ಜಳಕ ಮಾಡಿಸಿ ತಂದೇವೊ ಸ್ವಾಮೀ ನಿನ್ನ
ಮಲ್ಲಿಗೆ ಹರಡಿ ಹಾದಿಯಲಿ

ಮಲಗೊ ಚೆನ್ನಿಗರಾಯ
ಮಲಗೋ ಕನಸಿಗರಾಯ
ಮೆಲ್ಲನೆ ನಿದ್ದೆಗೆ ತೆರಳೊ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...