Home / ಕವನ / ಕವಿತೆ / ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ
ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ
ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ
ಉಂಡುಂಡು ಮಲಗಯ್ಯ ನಂಜುಂಡ ಅಯ್ಯ
ನೀ ದುಂಡಾಗೆ ಮಲಗೊ

ತಿಂದು ಮಲಗೋ ನಂಜುಂಡ ಅಯ್ಯ
ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ
ಎಳ್ಳುಂಡೆ ಗುಳ್ಳುಂಡೆ ಹಂಡೇಲಿ ತಂದೇವೊ
ತಿಂದು ಮಲಗಯ್ಯ ನಂಜುಂಡ ಅಯ್ಯ
ನೀ ಚಂದಾಗೆ ಮಲಗೊ

ಹೊದ್ದು ಮಲಗೋ ನಂಜುಂಡ ಅಯ್ಯ
ಚಡ್ಡರ ತಂದೇವೊ ಕೌದಿ ತಂದೇವೊ
ಕೊಲ್ಲಾಪುರದಿಂದ ಕಂಬಳಿ ತಂದೇವೊ
ಯಲ್ಲಾಪುರದಿಂದ ಮಖಮಲ್ಲು ತಂದೇವೊ
ಹೊದ್ದು ಮಲಗಯ್ಯ ನಂಜುಂಡ ಅಯ್ಯ
ನೀ ಮುದ್ದಾಗೆ ಮಲಗೊ

ಆಲಿಸಿ ಮಲಗೋ ನಂಜುಂಡ ಅಯ್ಯ
ವಾಲಗ ತಂದೇವೊ ವಾದ್ಯ ತಂದೇವೊ
ಹಲಗೆ ಜಾಗಟೆ ಶಂಖ ತಂದೇವೊ
ಆಲಿಸಿ ಮಲಗಯ್ಯ ನಂಜುಂಡ ಅಯ್ಯ
ನೀ ಲಾಲಿಸಿ ಮಲಗೊ

ಮುಂಗೋಳಿ ಕೂಗೀತು
ಪಲ್ಲಕಿ ಬಂದೀತು
ಜಳಕಕ್ಕೆ ಸ್ವಾಮಿ ನಿನ್ನ ಒಯ್ದೇವೊ
ಜಳಕ ಮಾಡಿಸಿ ತಂದೇವೊ ಸ್ವಾಮೀ ನಿನ್ನ
ಮಲ್ಲಿಗೆ ಹರಡಿ ಹಾದಿಯಲಿ

ಮಲಗೊ ಚೆನ್ನಿಗರಾಯ
ಮಲಗೋ ಕನಸಿಗರಾಯ
ಮೆಲ್ಲನೆ ನಿದ್ದೆಗೆ ತೆರಳೊ
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...