Home / ಕವನ / ಕವಿತೆ / ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ

ಉಂಡುಂಡು ಮಲಗೋ ನಂಜುಂಡ ಅಯ್ಯ
ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ
ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ
ಉಂಡುಂಡು ಮಲಗಯ್ಯ ನಂಜುಂಡ ಅಯ್ಯ
ನೀ ದುಂಡಾಗೆ ಮಲಗೊ

ತಿಂದು ಮಲಗೋ ನಂಜುಂಡ ಅಯ್ಯ
ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ
ಎಳ್ಳುಂಡೆ ಗುಳ್ಳುಂಡೆ ಹಂಡೇಲಿ ತಂದೇವೊ
ತಿಂದು ಮಲಗಯ್ಯ ನಂಜುಂಡ ಅಯ್ಯ
ನೀ ಚಂದಾಗೆ ಮಲಗೊ

ಹೊದ್ದು ಮಲಗೋ ನಂಜುಂಡ ಅಯ್ಯ
ಚಡ್ಡರ ತಂದೇವೊ ಕೌದಿ ತಂದೇವೊ
ಕೊಲ್ಲಾಪುರದಿಂದ ಕಂಬಳಿ ತಂದೇವೊ
ಯಲ್ಲಾಪುರದಿಂದ ಮಖಮಲ್ಲು ತಂದೇವೊ
ಹೊದ್ದು ಮಲಗಯ್ಯ ನಂಜುಂಡ ಅಯ್ಯ
ನೀ ಮುದ್ದಾಗೆ ಮಲಗೊ

ಆಲಿಸಿ ಮಲಗೋ ನಂಜುಂಡ ಅಯ್ಯ
ವಾಲಗ ತಂದೇವೊ ವಾದ್ಯ ತಂದೇವೊ
ಹಲಗೆ ಜಾಗಟೆ ಶಂಖ ತಂದೇವೊ
ಆಲಿಸಿ ಮಲಗಯ್ಯ ನಂಜುಂಡ ಅಯ್ಯ
ನೀ ಲಾಲಿಸಿ ಮಲಗೊ

ಮುಂಗೋಳಿ ಕೂಗೀತು
ಪಲ್ಲಕಿ ಬಂದೀತು
ಜಳಕಕ್ಕೆ ಸ್ವಾಮಿ ನಿನ್ನ ಒಯ್ದೇವೊ
ಜಳಕ ಮಾಡಿಸಿ ತಂದೇವೊ ಸ್ವಾಮೀ ನಿನ್ನ
ಮಲ್ಲಿಗೆ ಹರಡಿ ಹಾದಿಯಲಿ

ಮಲಗೊ ಚೆನ್ನಿಗರಾಯ
ಮಲಗೋ ಕನಸಿಗರಾಯ
ಮೆಲ್ಲನೆ ನಿದ್ದೆಗೆ ತೆರಳೊ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...