Home / ಕವನ / ಕವಿತೆ / ಊರಿಗೆ ಬಂದಾರೆ ಚೆಲುವೆಯರು

ಊರಿಗೆ ಬಂದಾರೆ ಚೆಲುವೆಯರು

ಊರಿಗೆ ಬಂದಾರೆ ಚೆಲುವೆಯರು
ಪಲ್ಲಂಗದಲವರ ಕುಳ್ಳಿರಿಸಿ ತನ್ನಿ
ನಾಕು ಜನ ಅವರ ಮುಂದಕ್ಕೆ ಬನ್ನಿ
ನಾಕು ಜನ ಅವರ ಹಿಂದಕ್ಕೆ ಬನ್ನಿ
ಪಲ್ಲಂಗದಲ್ಲವರ ಎತ್ತಿಕೊಂಡು ಬನ್ನಿ

ಊರಿಗೆ ಬಂದಾರ ಚೆಲುವೆಯರು
ಲಾವಂಚದ ಬೀಸಣಿಗೆ ಬೀಳ್ಕೊಂಡು ತನ್ನಿ
ನಾಕು ಜನ ಅವರ ಆಚೆಗೆ ಬನ್ನಿ
ನಾಕು ಮಂದಿ ಅವರ ಈಚೆಗೆ ಬನ್ನಿ
ಬೀಸಣಿಗೆಯಲವರ ಬೀಸ್ಕೊಂಡು ಬನ್ನಿ

ಊರಿಗೆ ಬಂದಾರೆ ಚೆಲುವೆಯರು
ಕಾಲಿಗೆ ಮಣ್ಣಾಗದಂತವರ ತನ್ನಿ
ರನ್ನಗಂಬಳಿ ಅವರ ಆ ಕಡೆ ಹಾಸಿ
ಚೆನ್ನಗಂಬಳಿ ಅವರ ಈ ಕಡೆ ಹಾಸಿ
ಮುಂದಕ್ಕೆ ಸುರುಳಿ ಬಿಚ್ಚಿಕೊಂಡು ಬನ್ನಿ

ಊರಿಗೆ ಬಂದಾರೆ ಚೆಲುವೆಯರು
ಬಿಸಿಲಿಗೆ ಅವರ ಬಾಡಿಸದೆ ತನ್ನಿ
ಛತ್ರಿಯ ತಲೆ ಮೇಲೆ ಹಿಡಿದು ಬನ್ನಿ
ಕುಂಕುಮ ನೀರನು ಎರಕೊಂಡು ಬನ್ನಿ
ಪನ್ನೀರ ನೀರನು ಸಿಂಪಡ್ಸ್ಕೊಂಡು ಬನ್ನಿ
ಮಾವಿನ ಹಣ್ಣನು ಹಚ್ಕೊಂಡು ಬನ್ನಿ
ಗೋವಿನ ಹಾಲನು ಕೇಳ್ಕೊಂಡು ಬನ್ನಿ
ಮಖಮಲು ಬಟ್ಟೆಯ ಹಿಡಕೊಂಡು ಬನ್ನಿ
ಮಲ್ಲಿಗೆ ಹೂವನು ಚೆಲ್ಕೊಂಡು ಬನ್ನಿ

ಊರಿಗೆ ಬಂದಾರೆ ಚೆಲುವೆಯರು
ದೇವಿಯರೆ ಬಂದಂತೆ ಬಂದಾರೆ ಅವರು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...