ಬನ್ನಿ ಗಿಳಿಗಳೆ ಚಲುವ ಹೂಗಳೆ

ಬನ್ನಿ ಗಿಳಿಗಳ ಚಲುವ ಹೂಗಳೆ
ಚಂದ ಲೋಕವ ಕಟ್ಟುವಾ
ಚಿನ್ನ ಲೋಕವ ಚಲುವ ಲೋಕವ
ಜೀವಲೋಕವ ನಗಿಸುವಾ

ಸಾಕು ಕಲಿಯುಗ ಸಾಕು ಕೊಲೆಯುಗ
ಯಾಕೆ ಚಿಂತೆಯ ಸಂತೆಯು
ಸಾಕು ಗೂಳಿಯ ಹಳೆಯ ಕಾಳಗ
ಅಕೋ ಅರಳಿದೆ ಶಾಂತಿಯು

ಮೌನಧಾಮಕೆ ಪ್ರೇಮಧಾಮಕೆ
ಏಳಿರೇಳಿರಿ ಯಾತ್ರೆಗೆ
ಕಳ್ಳಿಕಂಟಿ ಮುಳ್ಳು ಕೀಳಿರಿ
ಮುಂದೆ ಸಾಗಿರಿ ಜಾತ್ರೆಗೆ

ಕಲಿಯ ರಾವಣ ಕೊಲೆಯು ನಿಲ್ಲಲಿ
ಪ್ರೇಮ ಅಮೃತ ಸುರಿಯಲಿ
ತಾಯಿ ಪಾರ್‍ವತಿ ಗಾನ ಸರಸತಿ
ಗೌರಿ ಗಂಗೆಯು ಹಾಡಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಸಂಸ್ಕೃತ ಭಾರತ ಮತ್ತು ಹೆಣ್ಣು ಭ್ರೂಣ ಹತ್ಯೆ
Next post ರಾಜಹಂಸ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…