ಬನತುಂಬ ಮಳೆಬಿಲ್ಲು ಅತ್ತಿ ಬಾರ

ಮ್ಯಾಲ ತುಂತುರ ಹನಿಯು ತಂತಿ ವಾದ್ಯದ ಮುಗುಲು
ಬನತುಂಬ ಮಳೆಬಿಲ್ಲು ಬಿತ್ತಿಬಾರ
ಹನಿಹನಿಯು ಬಿದ್ದಲ್ಲಿ ಸವಿಮುದ್ದು ಇದ್ದಲ್ಲಿ
ಭೂರಮಣಿ ಮೈಬಿಚ್ಚಿ ಹೂವು ತಾರ

ಏಳು ಬಣ್ಣದ ಮುಗುಲು ಸಂಜಿ ಶೀತಲ ನವಿಲು
ಗಗನ ಮಲ್ಲಿಗಿ ಸುರಿದು ಕೈಯತಾರ
ಬಾಳಿ ತೋಳನು ಚಾಚ ಬಳ್ಳಿಗೂದಲ ಹೊಚ್ಚ
ಭೂಮಿ ಸುಂದರಿ ಮಳ್ಳಗೊಳಿಸಿ ಬಾರ

ಮುಗಿಯಲಾರದ ಮುಗುಲು ತಡೆಯಲಾರದ ಹಗಲು
ಚಂದ್ರ ಚುಂಬನಕಾಗಿ ಕಾದು ಬಂತ
ನಗಿಯ ಬೆಟ್ಟವ ದಾಟಿ ಮೌನ ಗಟ್ಟವ ದಾಟಿ
ಹಸಿರ ಮಂಚಕ ಹೂವು ಸುರಿದು ನಿಂತ

ದೂರ ದಾರಿಯ ಕಂಡೆ ಮಾರ ನಾರಿಯ ಕಂಡೆ
ದೂರಾದ ಸುಂದರಿಯ ಪಡೆದುಕೊಂಡೆ
ಆತ್ಮ ರಾಮನ ಕಂಡೆ ದೇವರಾಯನ ಕಂಡೆ
ಹರುಷ ರಾಯನ ಮನವ ಗೆದ್ದುಕೊಂಡೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀ ಶೋಷಣೆ- ವಿಕೃತಿಯ ನಾನಾ ಮುಖಗಳು
Next post ರಾಮಲಿಂಗ ದೇವಾಲಯ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…