ನಾನೆ ಗೋಪಿಕೆ ಬಾರೊ ಗೋಪನೆ

ನಾನೆ ಗೋಪಿಕೆ ಬಾರೊ ಗೋಪನೆ
ನೋಡು ಚಂದನ ಜಾರಿವೆ
ಗುಡ್ಡ ಬೆಟ್ಟದ ಗಾನ ಹಕ್ಕಿಯ
ಕಂಠ ಕೊರಗಿ ಸೊರಗಿದೆ

ಮಳೆಯ ನೀರಿಗೆ ಹಸಿರು ಹಸಿದಿದೆ
ಹನಿಯ ರೂಪದಿ ಚುಂಬಿಸು
ಮಂದ ಗಾಳಿಯು ಸೋತು ನಿಂದಿದೆ
ಗಂಧ ರೂಪದಿ ನಂಬಿಸು

ನೋಡು ಕಡಲಿನ ಕನ್ಯೆ ಬಂದಳು
ಗೆಜ್ಜೆ ಜಾರಿ ನಿಂದಳು
ನೆಲದ ದೇವತೆ ವನ ಮಯೂರಿಕೆ
ಕೂಗಿ ಕರೆದು ನೊಂದಳು

ನನ್ನ ಸುತ್ತಮುತ್ತ ನೋಡು
ಕಾಯ ಕಾಂಚನ ಕಾಡಿದೆ
ಕಾಮ ಮೋಹದ ಮಾಯ ಗೂಳಿಯು
ದಾಳಿ ಮಾಡಿ ತುಳಿದಿದೆ

ಗೋಪಿವಲ್ಲಭ ಗೋಪಿನಾಥನೆ
ಕುಣಿದು ಬಾರೊ ಮೆಲ್ಲನೆ
ಮಳೆಯು ಹೊಳೆಯು ಬೆಳೆಯ ರೂಪದಿ
ಚಿಮ್ಮಿ ಬಾರೊ ಝಲ್ಲನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರಾವಣ
Next post ಶಿಲಾವೃಕ್ಷ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…