ಸತ್ತವನು ಶಿವಯೋಗಿ ಆಗಲಾರ

ನರಸತ್ತ ಶಿವಧರ್‍ಮ ಬ್ಯಾಡ ಬ್ಯಾಡೋ ಯಪ್ಪ
ಸತ್ತವನು ಶಿವಯೋಗಿ ಆಗಲಾರ
ಇದ್ದವನು ಬಿದ್ದವನು ಎದ್ದೋಡಿ ಹೋದವನು
ಶಿವಶಿವಾ ಶಿವಯೋಗಿ ಆಗಲಾರ

ಪಟ್ಟೆ ಭಸಿತವ ಇಟ್ಟು ಲಿಂಗಬೆಟ್ಟವ ಕಟ್ಟಿ
ಕಟ್ಟೀಯ ವಾಚಾಳಿ ಶರಣನಲ್ಲ
ಹಗಲೊಂದು ಪರಿನಿದ್ರಿ ಇರುಳೊಂದು ಪರಿನಿದ್ರಿ
ತೂಕಡಿಪ ತಕ್ಕಡಿಯು ಶರಣನಲ್ಲ

ಲಾಂಛನದ ಗೊಂಗಡಿಯು ಸಾಕುಸಾಕೊ ಯಪ್ಪ
ಶಿವನ ಹಸಿವಿಯ ಹಾಡು ಕೇಳದಾದೆ
ಜಾತಿಯಾಚೆಯ ತಂದಿ ಕೋತಿಯಾಚೆಯ ತಂದಿ
ಜ್ಯೋತಿ ಜಂಗಮ ತಂದಿ ಕಾಣದಾದೆ

ಮಿಂಚಾಗಿ ಮಿನುಗಾಗಿ ಖಡ್ಗದಾ ಮೊನಚಾಗಿ
ನುಡಿಲಿಂಗ ನಡಿಲಿಂಗ ತೇರು ತೋರೊ
ಹೆಣಕೊಳ್ಳ ಧರಣೀಯ ಶಿವಕೊಳ್ಳ ಮಾಡೂವ
ಜೀವಂತ ಶರಣರ ಹಾದಿತೋರೊ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ – ಗೋಷಾ ಪದ್ಧತಿ
Next post ಚಿಲುಮೆ @ ೧೪

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…