ಕೌರವನೆದೆಯಲಿ ಕಮಲವು ಅರಳಲಿ

ಕೌರವನೆದೆಯಲಿ ಕಮಲವು ಅರಳಲಿ
ರಾವಣನಾಗಲಿ ಗಿಳಿಹಕ್ಕಿ
ಭುವನದ ಮನುಜರು ಜೇಂಗೊಡವಾಗಲಿ
ಮೂಡಲಿ ಮಿನುಗಿನ ಹೊಸ ಚುಕ್ಕಿ

ಮಂದರ ಗಿರಿಯಲ್ಲಿ ಮಧುಮಯ ಸಿರಿಯಲಿ
ವಧುವಾಗಿರುವಳು ಋಷಿಕನ್ಯೆ
ನವೋದ್ಯಾನದ ತೂಗುಯ್ಯಾಲೆಗೆ
ಬಾಗುತ ಬಂದಳು ರಸಕನ್ಯೆ

ಪಡೆಯುವದೇನಿದೆ ಎಲ್ಲಾ ಪಡೆದೆನು
ಸಾಧನೆ ಸಿದ್ದಿಯ ಶ್ರೀಕಾರಾ
ಜೇನಿನ ಮಧುರಾ ಹೂವಿನ ಹಗುರಾ
ಖುಶಿಗುಣ ಋಷಿಮನ ಝೇಂಕಾರಾ

ಪ್ರೀತಿಯು ಸತ್ಯಾ ನೀತಿಯು ನಿತ್ಯಾ
ಚಿಮ್ಮಿದೆ ಬೆಳಗಿನ ಚಿತ್ಸೂರ್‍ಯಾ
ಅಂತರ್‍ಮನದಲ್ಲಿ ತೂರ್‍ಯಾರವದಲಿ
ಹಾಡಿದೆ ಕುಣಿಸಿದೆ ಆಂತರ್‍ಯಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಧವೆಯೂ ಮತ್ತು ಘಟಶ್ರಾದ್ಧವೆಂಬ ಸಂಸ್ಕಾರವೂ
Next post ಕನ್ನಡಿಗನ ಹೃದಯರಾಗ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…