ಚಿಂತೆ ಜಾರಲಿ

ಚಿಂತೆ ಜಾರಲಿ ಚಿತೆಯು ಹೋಗಲಿ
ಒಲವು ಮಾತ್ರವೇ ಉಳಿಯಲಿ
ಸುಖದ ಸಾಗರ ಶಿವನ ಮಿಲನಕೆ
ಪ್ರೀತಿ ಮಾತ್ರವೆ ಬೆಳೆಯಲಿ

ಪ್ರಭುವಿಗೆಲ್ಲವ ಕೊಟ್ಟ ಮೇಲಕೆ
ಒಳಗೆ ಚಿಂತೆಯು ಯಾತಕೆ
ಪ್ರೀತಿ ತಂದೆಗೆ ಸಕಲ ಅರ್‍ಪಿಸಿ
ಮತ್ತೆ ಯೋಚನೆ ಯಾತಕೆ

ನಿನ್ನ ಬಳಿಗೆ ಇರುವದೆಲ್ಲವು
ಅವನ ಆಸ್ತಿಯು ನೀ ತಿಳಿ
ತ್ಯಾಗದಲ್ಲಿಯೆ ಭಾಗ್ಯ ಉಂಟು
ಅವನದೆಲ್ಲವ ನೀ ಪಡಿ

ಗಗನದೆತ್ತರ ನಿನ್ನ ಬಿತ್ತರ
ಎತ್ತರೆತ್ತರ ನೀ ಬೆಳಿ
ಶಿವನ ಹತ್ತಿರ ಎಲ್ಲ ಉತ್ತರ
ಸುರಿಸು ಶಾಂತಿಯ ಹೊಸಮಳಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಹನೆಯೇ ಸ್ತ್ರಿ ಅರಿವು

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…