ಓ ಪ್ರೇಮ ಯುಗ ಶಿಲ್ಪಿ

ತಾಯ ಪ್ರೀತಿಯ ಹಸ್ತ ನೀಚಾಚಿ ಬಾರಯ್ಯಾ
ಓ ಪ್ರೇಮ ಯುಗಶಿಲ್ಪಿ ದೇವದೇವಾ
ನೀನೆ ನವಯುಗ ಶಿಲ್ಪಿ ಕಲ್ಪ ಕಲ್ಪದ ಶಕ್ತಿ
ಕೇಳು ಮಕ್ಕಳ ಕೂಗು ವಿಶ್ವದೇವಾ

ತಾಯಿಯೆಂದರು ನೀನೆ ತಂದೆಯೆಂದರು ನೀನೆ
ನೀನಿಲ್ಲದಿನ್ನಾರು ಇಲ್ಲವಯ್ಯಾ
ನೀನೆ ಮೌನದ ಮೌನ ನೀನೆ ಭುವನದ ಗಾನ
ನೀ ಬರದೆ ಹೊಸಯುಗವು ಬಾರದಯ್ಯಾ

ದೇವರಾ ಹೆಸರಿಂದ ರಕ್ತದೋಕುಳಿ ನೋಡು
ಧಗಧಗನೆ ಈ ಧರಣಿ ಉರಿಯುತ್ತಿದೆ
ಮನುಕುಲದ ಉಡಿಯಲ್ಲಿ ಭೂತಬೆಂತರ ಆಟ
ನೀ ಬರದೆ ಉಳಿಗಾಲ ಇನ್ನೆಲ್ಲಿದೆ

ಕಲ್ಪವೃಕ್ಷದ ಗಿಳಿಯು ಕೂಗಿ ಕರೆದಿಹುದಯ್ಯ
ನವಯುಗದ ಬಾಗಿಲವ ತೆರೆಯಬಾರಾ
ಸಾಕು ಕತ್ತಲೆಯುಗವು ಬೇಕು ಬೆಳಕಿನ ಜಗವು
ಪ್ರೇಮ ಪೌರ್‍ಣಿಮೆಯಾಗಿ ಬೆಳಗುಬಾರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀತ್ವದ ನೆಲೆ ಬೆಲೆ
Next post ಕೊಳಲು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…