ವಿಶ್ವ ಜಂಗಮ ದೀಪ ಬೆಳಗಬೇಕು

ಜಾತಿ ಜಂಗಮ ಸಾಕು ಜ್ಯೋತಿ ಜಂಗಮ ಬೇಕು
ಲಿಂಗ ತತ್ತ್ವದ ಬೆಳಕು ಕಾಣಬೇಕು
ಕೋತಿ ಭಾವನೆ ಸಾಕು ನೀತಿ ಜೀವನ ಬೇಕು
ವಿಶ್ವ ಜಂಗಮ ದೀಪ ಬೆಳಗಬೇಕು

ಶಬ್ದದಾಚೆಗೆ ಸಾಗು ಅರ್‍ಥದಾಚೆಗೆ ಹೋಗು
ಶಬ್ದಾರ್‍ಥ ಗಡಿಯಾಚೆ ಅರುಹು ಚಾಚು
ದೇಹ ಢಂಗುರ ದಾಟು ಆತ್ಮ ಡಿಂಢಿಮ ದಾಟು
ಶಿವನ ಡಮರುಗ ನಾದ ಕೇಳು ಕೇಳು

ಪಿಚ್ಚುಗಣ್ಣಿನ ಹುಚ್ಚು ಹುಳಿನುಚ್ಚು ಯಾಕಪ್ಪ
ಗಪ್ಪಂತ ಅಪ್ಪನ ಕಾಣೊ ಬೆಪ್ಪ
ಶಿಖರದಾಚೆಯ ಶಿಖರ ಶ್ರೀಶೈಲ ಗುರುಶೈಲ
ಗುರುಶಿಖರ ಗುರುತಂದಿ ಬಂದನಪ್ಪ

ಹುಟ್ಟು ದೇವರ ಗುಟ್ಟು ಸಾವು ಕಾಲನ ಕಟ್ಟು
ಮುಟ್ಟಾಟ ದಾಟುತ್ತ ಮ್ಯಾಲ ಹಾರು
ಬಿದ್ದೋರ ಹಿಡಿದೆತ್ತು ಆತ್ತೋರ ಮೇಲೆತ್ತು
ಜಗಕ ಜಂಗಮ ಜ್ಯೋತಿ ದೀಪತೋರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವಾಪುರಕ್ಕೊಂದು ಪ್ರವಾಸ
Next post ತೋಳ

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…