Home / ಕವನ / ಕವಿತೆ / ನಾವಿಂದು ಮಾತಾಡಬೇಕಾಗಿರುವುದು

ನಾವಿಂದು ಮಾತಾಡಬೇಕಾಗಿರುವುದು

ನಾವಿಂದು ಮಾತಾಡಬೇಕಾಗಿರುವುದು
ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ
ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ
ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ.
ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ ತಂತ್ರಗಳನ್ನಲ್ಲ
ದಂತಗೋಪುರಗಳಲ್ಲಿ ಕುಳಿತು
ಹೂವು-ಜೇನು, ನಾರಿ-ಸೀರೆ, ಇಂದ್ರ-ಚಂದ್ರರ, ಗಾಳಿಬುರುಡೆಯನ್ನಲ್ಲ
ನೆಲಕಿಳಿಯದ ಭೂತ ಬೆಂತರಗಳೊಡನಲ್ಲ
ಮಣ್ಣ ರುಚಿಕಾಣದ ಅಪ್ಸರೆಯರೊಡನಲ್ಲ
ಇಹದಲ್ಲಿಳಿದುಬರದ ಪರದ ಪರದಾಟವನ್ನಲ್ಲ

ಮಾತಾಡಲು ಮಾತೇ ಬೇಕೇನು?

ಬಾಯೆಂಬ ತೂತೇ ಬೇಕೇನು?

ಕರೆವ ಕರಿಭವಿಷ್ಯದೊಡನೆ, ಕಲ್ಲಾದ ಮಣ್ಣಿನೊಡನೆ
ಮಣ್ಣಾದ ಮಾನವತೆಯೊಡನೆ
ಉರಿಬಿಸಿಲು ಮೊರೆಗಾಳಿ ಹರಿನೀರು ಸುರಿಮಳೆ ಬರಿವಾಸ್ತವದೊಡನೆ
ಅಳುಮೊಗ ಕೊಳೆತ ಮತಿ ಎಲುಬುಗೂಡಿನ ಗುಡಿಸಲುಗಳೊಡನೆ
ಬೆವರ ಹನಿ ರಕ್ತ ಬಿಂದುಗಳಿಂದ
ಕೈ ಬೆರಳು, ತೋಳು ಕಾಲುಗಳ ಉಕ್ಕಿನ ಖಂಡಗಳಿಂದ
ಒಡಲ ವೀರ್ಯದಿಂದ ಸಾಹಸದ ತೂರ್ಯದಿಂದ
ಹಾರೆ ಸಲಿಕೆ ಸುತ್ತಿಗೆ ಚಮ್ಮಟಿಗೆಗಳಿಂದ
ಗ್ರಂಥ ದೀಪಗಳಿಂದ ಪ್ರನಾಳ ಭೂತಕನ್ನಡಿಗಳಿಂದ
ಎಲ್ಲಕ್ಕೂ ಒಳಗಿಳಿದು ಮಿದುಳುಬಳ್ಳಿಯಿಂದ ಮನದ ಮಾನದಿಂದ
ಬಿಚ್ಚದೆಯ ಮಿಡಿತದಿಂದ ಮಾನವತೆಯ ಏಕನಾಡಿ ಸೂತ್ರದಿಂದ
ನಾವಿಂದು ಮಾತಾಡಬೇಕು
ಅಂದರೆ ಮಾಡಬೇಕು
ಮಾತು ಮಾಡಿದಂತಿರಬೇಕು
ಮಾಡಿದ್ದೇ ಮಾತಾಗಬೇಕು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...