Home / ಕವನ / ಕವಿತೆ / ಹಿಡಿಯಿರೋ ಅವನ

ಹಿಡಿಯಿರೋ ಅವನ

ಹಿಡಿಯಿರೋ ಅವನ
ಮಾತು ಬಲ್ಲವರೆಲ್ಲರೂ ಹಿಡಿಯಿರೋ!
ಮಾತುಮಾತಿನಲಿ ಅವನಿಗಾಗಿ ಗುಂಪು ಕೂಡಿದ ನೀವು
ಅವ ನಮ್ಮವ ಅವ ನಮ್ಮವನೆಂದು ಗುಂಪು ಗುಂಪಾಗಿ ಗುದ್ದಾಡುತ್ತೀರಿ

ಆ ಬ್ರಾಹ್ಮಣ್ಯ ಶಿಖಿಗೆ ಅತಿ ಆಚಾರಿಗಳಿಗೆ
ಮತಾಂಧ ಅಭಿಮಾನಿಗಳಿಗೆ ಜನಿವಾರ ಶಿವದಾರಗಳಿಗೆ
ನಾಮ ವಿಭೂತಿಗಳಿಗೆ ಗಂಟೆ ಜಾಗಟೆ ಹೂ ಪತ್ರೆ ಜಾತ್ರೆ ಪರಿಷೆಗಳಿಗೆ
ಸಿಗದ ರೀತಿಯಲ್ಲಿ ಅವನು

ಈ ನಿಮ್ಮ ಶೂದ್ರ ಪ್ರಜ್ಞೆಗೆ ದಲಿತ ಧೋರಣೆಗೆ
ಕಪ್ಪು ಮಾತುಗಳಿಗೆ ಎಡಗೈ ಬಲಗೈ ಕುಸ್ತಿಗಳಿಗೆ ಸಿಗಲಿಲ್ಲ
ಸಮಕಾಲೀನ ಪ್ರಜ್ಞೆಯ ಕಾಲಿಗೂ ಸಿಗದ
ಮಣ್ಣ ವಾಸನೆಯ ಮೂಗಿಗೂ ಹತ್ತದೆ
ಲಿಂಗಭಕ್ತಿಯ ಅನಂಗನಂಗಕ್ಕೂ ದಕ್ಕದೆ

ವರಕವಿ ಗಿರಿಕವಿ ಪಟ್ಟಭದ್ರ ಬಿರುದು ಬಾವಲಿಗಳಿಗು ಮರುಳಾಗದೆ
ಹೆಸರಾಂತ ಕೀರ್ತಿ ಕನ್ನೆಗೂ ಒಲಿಯದೆ
ನುಡಿಗಡಣದೊಡವೆಗಳಿಗಂತೂ ಮೈಗೊಡದೆ
ನಿಮ್ಮ ಪ್ರತಿಮೆಗಳಲ್ಲಿ ಮೂರ್ತೀಭವಿಸದೆ
ನಿಮ್ಮ ಸಂಕೇತಗಳ ಕಣ್ಸನ್ನೆಗಳಿಗೆ ಮೋಹಗೊಳ್ಳದೆ

ನಿಮ್ಮ ನಾದದ ಮೋಡಿಗೆ ತಲೆದೂಗದೆ ವಾದಕ್ಕಂತೂ ಎಂದೂ ಜಗ್ಗದೆ
ನಿಮ್ಮ ಸಮಯಸ್ಪೂರ್ತಿಯ ವೇಳೆಯನರಿಯದೆ
ಓಡುತ್ತಿದ್ದಾನೆ ತಪ್ಪಿಸಿಕೊಂಡು
ಹಿಡಿಯಿರಿ ಮಾತು ಬಲ್ಲವರೆಲ್ಲರೂ
ಹಿಡಿಯರೋ ಹಿಡಿಯಿರಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...