Home / ಕಥೆ / ಕಿರು ಕಥೆ / ನಾವೆಲ್ಲಾ ಒಂದೇ

ನಾವೆಲ್ಲಾ ಒಂದೇ

ಕೆಲವು ಪರಿವಾಳಗಳು ಮಡಿಗೆ ಶ್ರೇಷ್ಠ ಜಾಗವೆಂದು ಗುಡಿ ಗೋಪುರದಲ್ಲಿ ವಾಸವಾಗಿದ್ದವು. ಮತ್ತೆ ಕೆಲವು ಪಾರಿವಾಳಗಳು ಅಲ್ಲೇ ಅನತಿ ದೂರದಲ್ಲಿದ್ದ ಪಾಳು ಕೋಟೆಯಲ್ಲಿ ನೆಲೆಗೊಂಡಿದ್ದವು. ಎರಡು ಗುಂಪೂ ತಪ್ಪದೇ ದಿನವೂ ಗದ್ದೆ, ಹೊಲ, ಬಯಲು, ಹಸಿರಿನಲ್ಲಿ, ತೋಟಗಳಲ್ಲಿ ಆಹಾರ ಆರಿಸುವಾಗ ಒಂದಾಗುತ್ತಿದ್ದವು. ಗುಡಿಯಲ್ಲಿ ಬೀಡು ಬಿಟ್ಟ ಪಾರಿವಾಳಗಳು ಹೆಚ್ಚಳಿಕೆಯಿಂದ ತಮ್ಮ ಮಡಿವಂತಿಕೆಯನ್ನು ತೋರಿಸಿಕೊಂಡು ಪಾಳು ಕೋಟೆಯ ಪಾರಿವಾಳಗಳನ್ನು ದೂರ ಮಾಡುತಿದ್ದವು. ಒಮ್ಮೊಮ್ಮೆ ದಬ್ಬಾಳಿಕೆಯನ್ನೂ ಮಾಡುತ್ತಿದ್ದವು. ಒಂದು ಸಾರಿ ಎರಡು ಗುಂಪುಗಳ ನಡುವೆ ಘರ್‍ಷಣೆಯಾಯಿತು. ಅದರಲ್ಲಿ ಕೆಲವು ರೆಕ್ಕೆ ಪುಕ್ಕ ಕಡಿದು ಬಿದ್ದು ಜೀವವನ್ನೂ ತೆರಬೇಕಾಯಿತು. ಅಷ್ಟರಲ್ಲಿ ಒಂದು ಮುದಿ ಪಾರಿವಾಳ ಘರ್‍ಷಣೆ ನೋಡಿ ದಿಗ್ಭ್ರಾಂತವಾಗಿ ಮುಂದೆ ಬಂದು ಹೇಳಿತು.

“ಗುಡಿ ಗೋಪುರ, ಕೋಟೆ, ಅರಮನೆ, ಎಲ್ಲಿ ವಾಸವಾದರೇನು, ನಾವೆಲ್ಲ ಹಾರುವುದು ಒಂದೇ ಆಕಾಶದಲ್ಲಿ, ನೀವೆಲ್ಲಾ ಇರುವುದು ಒಂದೇ ಭೂಮಿಯಲ್ಲಿ” ಎಂದಾಗ, ಎಲ್ಲಾ ಪಾರಿವಾಳಗಳು ತಲೆ ತೂಗಿದವು.

“ಭೂಮಿ ಬಾನಿನ ಸ್ನೇಹಕ್ಕೆ ಅಂಟಿಕೊಂಡಿವೆ ನಮ್ಮ ಜಂಟಿ ರೆಕ್ಕೆಗಳು” ಎಂದು ಸ್ನೇಹ ಸೂತ್ರದಲ್ಲಿ ಒಂದಾದವು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...