Home / ಕವನ / ಅನುವಾದ / ಪುನರಾವತಾರ

ಪುನರಾವತಾರ

ಹಿಗ್ಗುತ್ತಿರುವ ವೃತ್ತದಾಕಾರದಲ್ಲಿ, ಸುತ್ತುತ್ತ ಸುತ್ತುತ್ತ,
ಕೇಳಿಸದು ಡೇಗೆಗೆ ಡೇಗೆಗಾರನ ಕೂಗು;
ಕಳಚಿಕೊಳ್ಳುತ್ತಲಿದೆ ಅಂಗಾಂಗ, ಒಟ್ಟಾಗಿ ಹಿಡಿಯಲಾರದ ಕೇಂದ್ರ,
ಛೂಬಿಟ್ಟ ಹಾಗಿದೆ ಅನಾಯಕತೆಯನ್ನೇ ಇಡಿಯ ಲೋಕದ ತುಂಬ;
ರಕ್ತಮಂದ ಪ್ರವಾಹ ಕಟ್ಟೊಡೆದು ನುಗ್ಗಿದೆ
ಮುಗ್ಧತೆಯ ಉತ್ಸವ ಮುಳುಗಿ ತಳ ಸೇರಿದೆ,
ಉತ್ತಮರಿಗಿಲ್ಲ ದೃಢನಂಬಿಕೆ, ನಿಕೃಷ್ಟರಿಗೆ
ತೀವ್ರ ಭಾವೋನ್ಮಾದಪರತೆ.

ಯಾವುದೋ ದರ್‍ಶನಕ್ಕಿದು ಕಾಲ ಖಂಡಿತ,
ಪುನರಾವತಾರಕ್ಕೆ ಕಾಲ ಇದು ಖಂಡಿತ.
ಪುನರಾವತಾರ! ಪದದುಚ್ಚಾರ ಆಯಿತೋ
ಕಣ್ಣಕುಕ್ಕುತ್ತಿದೆ ಪುರಾಣಸ್ಮೃತಿಯಿಂದೆದ್ದ ಘೋರ ಬೃಹದಾಕಾರ,
ದೂರ ಮರುಭೂಮಿಯಲ್ಲೆಲ್ಲೊ ನರಶಿರವನ್ನು ಹೊತ್ತ ಸಿಂಹಶರೀರ;
ಶೂನ್ಯಕಾರುವ ನೋಟ, ಸೂರ್‍ಯನಂತೇ, ಕ್ರೂರ,
ಭಾರ ತೊಡೆಯೆತ್ತೆತ್ತಿ ನಿಧಾನ ಚಲಿಸುತ್ತಿದೆ,
ಕೆರಳಿರುವ ಮರುಭೂಮಿಹಕ್ಕಿಗಳ ನೆರಳುಗಳು ಅದರ ಸುತ್ತ.
ಕತ್ತಲಿಳಿಯುತ್ತಿದೆ ಮತ್ತೆ ಕೆಳಗೆ. ಈಗ
ಗೊತ್ತಾಗುತ್ತಿದೆ ನನಗೆ ತೂಗುತೊಟ್ಟಿಲದೊಂದು
ಇಪ್ಪತ್ತು ಶತಕಗಳ ಗಾಢನಿದ್ದೆಯ ಕಾಡಿ ದುಃಸಪ್ನ ಬಡಿಸಿದ್ದು.
ತನ್ನ ಜನನದ ಗಳಿಗೆ ಇನ್ನೇನು ಬಂತೆಂದು
ತೂಗಿ ಚಲಿಸುತ್ತಿದೆಯೊ ಹೇಗೆ ಈ ಘೋರಮೃಗ
ಬೆತ್ಲಹಮ್ಮಿನ ಕಡೆಗೆ?
*****
ಎರಡು ಸಾವಿರ ವರ್‍ಷಗಳಿಗೊಮ್ಮೆ ಯುಗ ಬದಲುತ್ತದೆ; ಹೊಸ ಅವತಾರದಿಂದ ಅದರ ಆರಂಭವಾಗುತ್ತದೆ ಎಂದು ಏಟ್ಸ್ ನಂಬಿದ್ದ. ಕ್ರಿಸ್ತ ಜನಿಸಿ ಎರಡು ಸಹಸ್ರ ವರ್‍ಷಗಳಾಗುತ್ತಿವೆ. ಯುಗಜೀವನ ತುಂಬ ಕಲುಷಿತವಾಗಿದೆ. ಆಗಲಿರುವ ಅವತಾರದ ಕಲ್ಪನೆ ಕವನದಲ್ಲಿ ಮೂಡಿದೆ.

ಪುರಾಣ ಸ್ಮೃತಿ: ಮನುಷ್ಯ ಜನಾಂಗಕ್ಕೆಲ್ಲ ಸಾಮಾನ್ಯವಾದ ಸ್ಮೃತಿ, ಪುರಾಣ ಐತಿಹ್ಯಗಳಲ್ಲಿ ಮತ್ತೆಮತ್ತೆ ಪುನರಾವರ್‍ತಿಸುವ ಪ್ರತಿಮೆಗಳ ಸಂಗ್ರಹ. ಇಲ್ಲಿ ಬರುವ ‘ನರಶಿರವನ್ನು ಹೊತ್ತ ಸಿಂಹಶರೀರ’ ಅಂಥ ಒಂದು ಪ್ರತಿಮೆ.

ಬೆತ್ಲೆಹೆಮ್ : ಕ್ರಿಸ್ತನ ಜನ್ಮಸ್ಥಳ.

ಮೂಲ: ವಿಲಿಯಂ ಬಟ್ಲರ್ ಏಟ್ಸ್

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...