ಅಗಸ್ತ್ಯ

ವಿಂಧ್ಯದ ಅನುಲ್ಲಂಘ್ಯ ಮಸ್ತಕವ ಮೆಟ್ಟಿ, ದ-
ಕ್ಷಿಣದ ದಾರಿಯ ತೆರೆದು ತೋರಿದಿರಿ; ಉತ್ತರಕೆ
ಉತ್ತರೋತ್ತರವಾಯ್ತು. ದಕ್ಷಿಣದ ಏಳ್ತರಕೆ
ಎಡೆಯಾಯ್ತು. ನಿಮ್ಮ ಪಾವನ ಪಾದ ಮೆಟ್ಟಿದ-
ಲ್ಲಲ್ಲಿ ತೀರ್ಥಕ್ಷೇತ್ರ. ಮುಕ್ತಿ ಗಂಗೆಯು ಇಳಿದ
ಭಕ್ತಿ ಭೂಮಿಯು ತಮಿಳದೊಳು ಕನ್ನಡದೆ ಹರಕೆ
ಹೊತ್ತಿತ್ತು, ಒಪ್ಪಿಸಿತು, ವೇದ ಮೊಳಗಿತು. ಗೊರಕೆ
ಹೊಡೆಯುತಂಥಾಸುರನು ಅಡವಿಗವಿಯಲ್ಲುಳಿದ.

ಹೊಂದುಗೂಡಿಕೆಗೆಡುತಲಿದೆ. ಇತ್ತ ಅನಿವಾರ್‍ಯ
ಶಾಸ್ತ್ರಶಸ್ತ್ರದೊಳೆ ಮಾಡಿಹರು ಬೆಳಕಿನ ಕೊಲೆಯ.
ಅತ್ತನಾದಿಯನಾರ್‍ಯ ಕತ್ತಲೆಯು ಕೃತ ಕಾರ್‍ಯ-
ವಾಗಲಿದೆ. ಇವ ಬಿಳಿಯ, ಕರಿಯ; ಹಾರುವ, ಹೊಲೆಯ;
ಎಂದು ಇತ್ತಂಡದೊಳು ಕತ್ತರಿಸಲಿಹರಾರ್‍ಯ!
ಮೂಢ ವಿಂಧ್ಯ-ಪಿಶಾಚ್ಯ ಮನದೊಳೆತ್ತಿದೆ ತಲೆಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರುಣ್ಯ
Next post ಬುದ್ವಾದ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys