ಒಡನುಡಿ

ದುಃಸಾಧ್ಯಸಂಭಾವ್ಯವೆಂಬ ಸೊಲ್ಲಿನ ಗುಲ್ಲು
ಗುಡುಗಾಡುತಿದೆ. ಕನ್ನಡದ ಕನ್ನಡಿಯು ಒಡೆದು
ಬೆಸೆಯ ಬರದಂತೆ ದೆಸೆದೆಸೆಗೆ ಬಿದ್ದಿದೆ. ಹಿಡಿದು
ಕಟ್ಟಬಲ್ಲಾ ಕೈಯೆ ಕಾಣದಿದೆ. ಒಡಹುಲ್ಲು
ಬೆಳೆಯೆ, ಹೂದೋಟ ಹುದುಗಿದೆ ನೆಲದೊಳೆಲ್ಲೆಲ್ಲು.
ದನದ ಜಂಗುಳಿಯಂತೆ ಹಿಂಡಾಗಿ, ಮನ ತಡೆದು
ನಿಂತಿದೆ, ನಿರಾಯಾಸ ಮೆಲಕು ಹಾಕುತ. ಸಿಡಿದು
ಪೂರ್‍ವ ವೈಭವವು ಉಃಶಾಪ ಕೋರುವ ಕಲ್ಲು.

“ಶ್ರೀ ಕನ್ನಡದ ಧೂಳಿ ಬಾಂದೆರೆಯೊಳೋಕುಳಿಯ
ನಾಡೀತು. ಸೂರ್‍ಯ ಮಾಲೆಯ ರಾಸಲೀಲೆಯದು
ಕನ್ನಡದಿ ಒಣ್ಣನೆಯ ಪಡೆದೀತು, ಪರಿಶುದ್ಧ
ಕನ್ನಡರ ಕೀರ್‍ತಿ ನಾಡಿಗೆ ಪ್ರಭಾವಳಿಯ ಕುಡಿ-
ಯೊಡೆಸೀತು. ಓಂ ಸ್ವಸ್ತಿ”- ಯೋಗನಿದ್ರೆಯೊಳಿದ್ದ
ರತ್ನ ಸಿಂಹಾಸನವು ಎದೆಯೊಳೊಡನುಡಿಯುವದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌನದಲ್ಲಿ ಉತ್ತರ
Next post ಮನಕ್ಕ್ ಒಪ್ಪೊ ಮಾತು

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…