ಸುಹೃದ

ಎಲೆ ಸುಹೃದ, ಸರ್‍ವ ಭೂತಾಂತರಸ್ಥನೆ, ನರನ
ನಾರಾಯಣನೆ, ನಿನ್ನ ಮೈತ್ರಿಯ ಉಗಾಭೋಗ
ಉಸಿರು ಈ ಹಕ್ಕಿಯಲಿ; ತುಂಬು ಜೀವವ ದೇವ.
ಯುಗಜುಗದ ಪರಿಪಾಕದಿಂದ ಬರಲಿರುವಂಥ
ಸ್ನೇಹಸಾರದ ಹದವನರಿವೆವೇ? ಕ್ಷಣಜೀವಿ-
ಗಳು ನಾವು, ಕಣ್ಣ ಆಚೆಗೆ ಕಾಣದಿರುವ ಕುರು-
ಡರು. ತನ್ನದಲ್ಲದುದು ತಲೆಯೆತ್ತಿತೆಂದು ತಲೆ-
ಕೆಡಿಸಿಕೊಳ್ಳುವ ಮೂಢ-ಜಡ-ಮಂದ ಪ್ರಾಣಿಗಳು.

ನಾಳೆ ಬರುವದು ಬರಲಿ, ಹೃದಯ ಪುಷ್ಕರಣಿಯಲಿ
ಮಳೆ ನೀರು, ಹೊಳೆ ನೀರು, ಕೊಳೆ ನೀರು, ಕೊಚ್ಚಿ ಬರ-
ದಿರಲಿಂದು, ನಾಡಾಡಿ ಹಕ್ಕಿಗಳ ಕೂಡಿ ಕಲೆ
ಬೆರೆತಿರಲು, ಕುಡಿದುದೇ ತೀರ್‍ಥವೆನದಿರುವಂತೆ
ಕರುಣಿಸೆಲೆ ಉತ್ತರೋತ್ತರವನು. ಹಿಮಾಲಯದ
ಮಾನಸ ಸರೋವರದ ಗಂಗೆ ಕಲಕಿದುದುಂಟೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೈವಕ್ಕೆ ಯಾವ ಬಣ್ಣ?
Next post ತ್ರುಪ್ತಿ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys