ಸತ್ಯಸಂಕಲ್ಪ

ಜನ್ಮ ಜನ್ಮಾಂತರದ ಸತ್ಯ ಸಂಕಲ್ಪವೇ,
ಫಲಹೊಂದು ಕಾಲ ಬಂದಾಗ. ಒಗರಿಳೆದು ಹುಳಿ
ಹೋಗಿ, ಸವಿ ಹವಣುಗೋಳುತಿರೆ, ಬಣ್ಣ ಹೊಂಬಣ್ಣ-
ಕೇರುತಿರೆ, ಬಳುಕಿ ಗಾಳಿಗೆ, ಬೆಂದು ಬಿಸಿಲಿನಲಿ,
ನಾನು ಕಾಯುವೆ; ಹಸಿವ ಎಸರೇರಿ ಕುದಿಬಂದು
ಉಕ್ಕಿ ಹೋಗಲಿ, ಉರುವಲಿಲ್ಲದಲೆ ಉರಿಯುತಿದೆ
ಕಿಚ್ಚು. ಕಡೆಯುತ್ತಲಿದೆ ಸೀರು ಸೆಲೆಯಂತೆ, ಬಂ-
ದಂದು ನೀನಮೃತಫಲ. ಹುಸಿಯೆ ಅಸಿವಸಿ ಸಾಕು.

ಇಂದೆ ಬರುವೆಯೊ ಏನೊ ಎಂದು ತವಕದ ಬಯಕೆ,
ನೋಂತು ನೀರೆಯು ನಲ್ಲನೆಲ್ಲಿ ಬರುವನೊ, ಸಕಲ
ಸಿಂಗಾರ ಸಲಕರಣೆ ಸರಿಯಿರಲಿ ಎನುತ, ದಿನ-
ದಿನವು, ಹಗಲಿರುಳು ಅಣಿಗೊಳ್ಳುವಂತೆ, ಹಸಿಯಾಸೆ
ತೊಳೆಯುತಿದೆ; ಹುಸಿಮುನಿಸ ಕಳೆಯುತಿದೆ; ಬಗೆಯ ಹಿ-
ಗ್ಗಲಿಸುತಿದೆ; ತನ್ನ ಒಳಹೊರಗೆ ಬೆಳಗುತ್ತಲಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವೆಲ್ಲಾ ಒಂದೇ
Next post ನಂ ಮುನಿಯಂದು ಜರ್‍ಬು

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

cheap jordans|wholesale air max|wholesale jordans|wholesale jewelry|wholesale jerseys