Home / ಲೇಖನ / ಇತರೆ / ಮೂರ್‍ಖರಾಗದೇ ಉಳಿವೆವೇ ?

ಮೂರ್‍ಖರಾಗದೇ ಉಳಿವೆವೇ ?

ಪ್ರಿಯ ಸಖಿ,

ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಲೇಖಕ ಯು. ಆರ್. ಅನಂತಮೂರ್‍ತಿಯವರು ಸಂವಾದಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ನಮ್ಮ ದೇಶದ ದುರಂತವೆಂದರೆ ಜನರಿಗೆ ಮೊದಲು ದೂರದರ್‍ಶನವನ್ನು ನೀಡಿದ್ದು! ಮೊದಲು ನಾವು ಜನರಿಗೆ ವೈಚಾರಿಕ ಪ್ರಜ್ಞೆಯನ್ನು, ವಿವೇಚನೆಯನ್ನು ಮೂಡಿಸುವಂತಹ ಉತ್ತಮ ಶಿಕ್ಷಣವನ್ನು ನೀಡಬೇಕಿತ್ತು. ಆದರೆ ಯೋಚನೆ ಮಾಡದೇ ಅಂಧರಾಗಿ ಮೂರ್‍ಖರ ಪೆಟ್ಟಿಗೆಯನ್ನು ನೀಡಿಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ದೂರದರ್‍ಶನ ಹಾವಳಿಯಿಂದ ಇಂದು ಮನೆಗಳಲ್ಲಿ ಆರೋಗ್ಯ ಪೂರ್‍ಣ ಮಾತುಕತೆ, ಚರ್‍ಚೆ, ನಗುಹರಟೆಗಳು ಹೆಚ್ಚು ಕಡಿಮೆ ನಿಂತೇ ಹೋಗಿವೆ. ಕಿರಿಯರಲ್ಲಿ ಬುದ್ಧಿ ಕೌಶಲ್ಯವನ್ನು ಹೆಚ್ಚಿಸುತ್ತಿದ್ದ ನಮ್ಮ ಅನೇಕ ಒಳಾಂಗಣ ಆಟಗಳಾದ ಚೌಕಾಬಾರ, ಪಗಡೆ, ಅಳುಗುಳಿ ಮನೆ, ಹುಲಿ ಕುರಿ, ಇತ್ಯಾದಿ ಆಟಗಳು ಎಂದೋ ಮೂಲೆ ಸೇರಿವೆ. ಇಂದಿನ ಪೀಳಿಗೆಯ ಮಕ್ಕಳು ಬಹುಶಃ ಈ ಆಟಗಳ ಹೆಸರನ್ನೂ ಕೇಳಲಿಲ್ಲವೇನೋ? ಜೊತೆಗೆ ದೂರದರ್‍ಶನ ಈ ಪೀಳಿಗೆಯವರಿಂದ ಅತ್ಯಂತ ಮಹತ್ವದ ಓದಿನ ಹವ್ಯಾಸವನ್ನೇ ನುಂಗಿಬಿಟ್ಟಿದೆ. ಅಗಾಧ ಸಾಹಿತ್ಯ ಭಂಡಾರವನ್ನು ಹೊಂದಿರುವ ಕನ್ನಡ ಸಾಹಿತ್ಯ ಕ್ಷೇತ್ರ, ಓದುವವರು ಕಡಿಮೆಯಾಗಿ ದಿನದಿಂದ ದಿನಕ್ಕೆ ಸೊರಗುತ್ತಿದೆ. ನಮ್ಮ ಸಂಸ್ಕೃತಿಯ ಒಂದು ಭಾಗವಾಗಿರುವ ಜನಪದರಿಂದ ಬಳುವಳಿ ಬಂದ ಒಗಟು, ಗಾದೆ, ನುಡಿಗಟ್ಟು, ಒಡಪಿನ ಹಾಡುಗಳು ಮಕ್ಕಳಿಗಿರಲಿ ದೊಡ್ಡವರಿಗೇ ಬೇಡವಾಗುತ್ತಿದೆ.

ಕ್ರೌರ್‍ಯ, ಹಿಂಸೆ, ಅನೈತಿಕ ಸಂಬಂಧಗಳನ್ನು ವೈಭವೀಕರಿಸುವ ಚಲನಚಿತ್ರ, ದೂರದರ್‍ಶನ ಧಾರಾವಾಹಿಗಳು ನೂರೆಂಟು ಚಾನೆಲ್ಗಳಲ್ಲಿ ಹರಿದು ಬರುವ ಹಾಡು ಕುಣಿತಗಳು ನಮ್ಮ ಸಂಸ್ಕೃತಿಯ ಔನ್ನತ್ಯವನ್ನು ಕ್ರಮೇಣ ನುಂಗಿಹಾಕುತ್ತಿವೆ. ಒಂದಾದ ನಂತರ ಒಂದು ಹರಿದು ಬರುವ ಧಾರಾವಾಹಿಗಳನ್ನು ನೋಡುತ್ತಾ ಅಮೂಲ್ಯ ಸಮಯ, ಕಲೆಗಾರಿಕೆ, ಹವ್ಯಾಸಗಳು, ಹೊಸದನ್ನು ಆವಿಷ್ಕರಿಸುವ ಮನೋಭಾವವನ್ನು ನಮ್ಮ ಪೀಳಿಗೆಯವರು ಕಳೆದುಕೊಳ್ಳುತ್ತಿರುವುದು ಅರಿವಿಗೆ ಬರುವುದು ಯಾವಾಗ ? ಧಾರಾವಾಹಿಗಳು ಬರುತ್ತಿರುವಾಗ ಮನೆಗೆ ಬಂದ ಅತಿಥಿ, ಸ್ನೇಹಿತರನ್ನು ಮಾತನಾಡಿಸುವ ತಾಳ್ಮೆ, ವ್ಯವಧಾನವೂ ಮನೆಯವರಿಗೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಯೋಚಿಸಿದಾಗ ಸಾಮಾಜಿಕ ಸಮ್ಮಿಲನದ ಮೂಲ ಕೊಂಡಿಯೂ ಈ ಮೂಲಕ ಕಳೆದುಕೊಳ್ಳುತ್ತಿರುವುದು ತಿಳಿಯುತ್ತದೆ. ದೂರದರ್‍ಶನದ ನಿರಂತರ ನೋಡುವಿಕೆಯಿಂದ ಇತ್ತೀಚಿನ ದಿನಗಳಲ್ಲಿ ನೇತ್ರ ಸಂಬಂಧಿ ರೋಗಗಳು ಹೆಚ್ಚಿರುವುದನ್ನು, ಅವರ ಮುಂದೆ ಕುಳಿತು ಏಕಾಗ್ರತೆಯಿಲ್ಲದೆ ಊಟ, ತಿಂಡಿ ಮಾಡುವುದರಿಂದ ಜೀರ್‍ಣ ಕ್ರಿಯೆಗೆ ಸಂಬಂಧಿಸಿದ ರೋಗಗಳು ಹೆಚ್ಚಾಗುತ್ತಿರುವುದನ್ನು ಸಂಶೋಧನೆಗಳು ದೃಢಪಡಿಸಿವೆ.

ಸಖಿ, ದೂರದರ್‍ಶನದ ಕಪಿಮುಷ್ಠಿಗೆ ಸಿಲುಕಿರುವ ನಮ್ಮ ಸಮುದಾಯ ನಾವು ಊಹಿಸಲೂ ಸಾಧ್ಯವಿಲ್ಲದಂತಹ ಮಾನಸಿಕ ದಾಸ್ಯಕ್ಕೆ ಒಳಗಾಗಿಬಿಟ್ಟಿದೆ. ಇಂದು ಕಣ್ಣಿಗೆ ಕಾಣದಂತಹ ಆದರೆ ನಾಳೆ ನಮ್ಮ ಸುಂದರ ಭವಿಷ್ಯವನ್ನು ಸದ್ದಿಲ್ಲದಂತೆ ನಿರ್‍ನಾಮ ಮಾಡಬಲ್ಲ ಶಕ್ತಿ ದೂರದರ್‍ಶನಕ್ಕಿದೆ. ಹಾಗೆಂದು ಅದರಲ್ಲಿ ಬರುತ್ತಿರುವ ಒಳಿತು, ಮಾಹಿತಿ, ತಿಳುವಳಿಕೆ, ಅವಶ್ಯವಿರುವಷ್ಟು ಆರೋಗ್ಯ ಪೂರ್‍ಣವಾದ ಮನರಂಜನೆಯನ್ನಷ್ಟೇ ತೆಗೆದುಕೊಂಡು ಮಿಕ್ಕಿದ್ದನ್ನು ಬಿಟ್ಟು ಬಿಡುವ ವಿವೇಚನೆ ನಮ್ಮಲ್ಲಿದೆಯೇ ಎಂಬುದೇ ಮುಖ್ಯ ಪ್ರಶ್ನೆ. ಸಖಿ, ಮೂರ್‍ಖರ ಪೆಟ್ಟಿಗೆಯನ್ನು ನೋಡುತ್ತಾ ಮೂರ್‍ಖರೂ ಆಗಬಹುದು, ಅದರಲ್ಲಿ ಬೇಕಷ್ಟನ್ನು ನೋಡಿ ಜಾಣರೂ ಆಗಬಹುದು. ಆಯ್ಕೆ ನಮ್ಮ ಮುಂದಿದೆ. ಮೂರ್‍ಖರಾಗದೇ ಉಳಿಯೋಣ ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...