Home / ಕವನ / ಕವಿತೆ / ಎದೆಯೆಂಬ

ಎದೆಯೆಂಬ

ಎದೆಯೆಂಬ ಹೊಲವನ್ನ ಹದವಾಗಿ ಹರಗೀನಿ
ಬೆದೆ ಮಳೆ ಬಂದಂಗೆ ಮಿದು ಮಾಡು ಬಾರೆ
ಮಿದುವಾದ ಹೊಲದಾಗ ಬೀಜಾನ ಬಿತ್ತೀನಿ
ಬೇರಿಗೆ ಕಸುವಾಗೊ ಸತುವನ್ನು ತಾರೆ  ||೧||

ಎದೆಯೆಂಬ ಮರುಭೂಮಿ ಬರಬಾರಾ ಒಣಗಿದೆ
ಹನಿಹನಿ ಸುರಿಸುತ್ತ ಹಸರಿಸು ಬಾರೆ
ಬಾಯೊಣಗಿ ಬೋರ್ಯಾಡಿ ಪ್ರಾಣಾ ಓಡಾಡ್ಯಾವೆ
ಜೀವಾನ ಉಳಿಸಾಕೆ ಮೇಲಿಂದ ಬಾರೆ  ||೨||

ಎದೆಯೆಂಬ ಪೀಠಾನ ಝಾಡಿಸಿ ಜಪ್ಪಿಸಿ
ಕಾದೀನಿ ನಿನಗಾಗಿ ಕುಂತುಗೊ ಬಾರೆ
ಸಭೆ ತುಂಬಿ ಕಾದೈತೆ ಕಣ್ಕಣ್ಣು ಬಿಡತೈತೆ
ಹಡದೀಯ ಹಾಸ್ಯೈತೆ ನಡಕೊಂತ ಬಾರೆ  ||೩||

ಎದೆಯೆಂಬ ನೆಲದಾಗೆ ಗಿಡಮರ ನರನರಾ
ಒಣಗ್ಯಾವೆ ಹಿಡಿದಾವೆ ಒಳಗೆಲ್ಲೋ ಜೀವಾ
ಈ ನೆಲಾ ಬಾಯ್ಬಿಟ್ಟು ಬಿರುಕೀನ ಮಕವಿಟ್ಟು
ನೀರೆ ಬಾರೇ ಬಾರೆ ಕೂಗ್ಯೈತೆ ಜೀವಾ  ||೪||

ಎದೆಯೆಂಬ ಗುಡಿಯಾಕೆ ಬಣಬಣ ಬರಿಗಂಟೆ
ಉರದೈತೆ ಇರುಳೆಲ್ಲಾ ದೀಪಾಧೂಪಾ
ಗರ್ಭಾಗುಡಿಯಾಗೆ ನೀ ಮನಿದೇವ್ತೆ ಇರದಾಗ
ಯಾರೀಗೆ ಈ ಗುಡಿ ಈಪೂಜಿ ಪಾಪಾ ||೫||

ಎದೆಯೆಂಬ ಪಂಜರದೊಳಗೊಂದು ಗಿಣಿರಾಮಾ
ಸಂಗಾತಿ ಬೇಕಂತಾ ಕರದೈತೆ ಬಾರೆ
ಹಣ್ಣನ್ನ ತಿನವಲ್ದು ಕಣ್ಣನ್ನ ಮುಚುವಲ್ದು
ಸೆಳ್ಳನ್ನೆ ಕುಕತೈತೆ ಅರಗಿಣಿ ಬಾರೆ  ||೬||

ಎದೆಯೆಂಬ ಬಾವ್ಯಾಗೆ ಬರಿತಳ ಕಂಡೈತೆ
ಬರಿಕೊಡ ಜೋತಾಡಿ ನೇತಾಡುತಾವೆ
ಬಾವೇನು ಜೀವಿಲ್ದ ಹೆಣಬಾಯಿಯಾಗ್ಯೈತೆ
ಅಂತಾರಾಗಂಗೀಬಾ ತುಳುಕಲಿ ಒಲವೇ ||೭||

ಎದೆಯೆಂಬ ಗಿಡದಾಗೆ ಎಲಿಯಿಲ್ಲ ಚಿಗುರಿಲ್ಲ
ಬರಲಾಗಿ ನಿಂತೈತೆ ರಸವಿಲ್ದ ಜೀವಾ
ಹಸಿರಿನ ಸೀರ್ಯುಟ್ಟು ಹೂಮುಡಿದು ಕಾಯಾಗಿ
ಹಣ್ಣಾಗಿ ಗಿಡತುಂಬು ಬಾರೆನ್ನ ಸತುವಾ  ||೮||

ಎದೆಯೆಂಬ ಹೊನ್ನಾಡು ರತ್ನ ಮುತ್ತಿನ ನಾಡು
ಹಾಳಾಗಿ ಹಂಪ್ಯಾಗಿ ಕೂಗ್ಯಾವೆ ಗೂಗಿ
ನಿನ್ನ ಗೆಜ್ಜಿ ಪಾದ ಸೋಕಿದರೆ ಈ ಕೊಂಪಿ
ನಂದಾನವಾದೀತು ಕೋಗಿಲೆ ಕೂಗಿ  ||೯||

ಎದೆಯೆಂಬ ಈ ಮನಿ ಕಸಕಾಗಿ ತೌರ್ಮನಿ
ಧೂಳು ದುಮ್ಮು ಮೂಲಿಮೂಲಿಗೆಲ್ಲ
ವಾರಣ ಸಾರಣಿ ಮಾಡಿ ಈ ಮನಿಯಾಗೆ
ಹಣತೆಯ ಹಚ್ಚು ಬಾ ಕಳೆಯಲಿ ಕತ್ಲಾ  ||೧೦||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...