Home / ಕವನ / ಕವಿತೆ / ಎದೆಯೆಂಬ

ಎದೆಯೆಂಬ

ಎದೆಯೆಂಬ ಹೊಲವನ್ನ ಹದವಾಗಿ ಹರಗೀನಿ
ಬೆದೆ ಮಳೆ ಬಂದಂಗೆ ಮಿದು ಮಾಡು ಬಾರೆ
ಮಿದುವಾದ ಹೊಲದಾಗ ಬೀಜಾನ ಬಿತ್ತೀನಿ
ಬೇರಿಗೆ ಕಸುವಾಗೊ ಸತುವನ್ನು ತಾರೆ  ||೧||

ಎದೆಯೆಂಬ ಮರುಭೂಮಿ ಬರಬಾರಾ ಒಣಗಿದೆ
ಹನಿಹನಿ ಸುರಿಸುತ್ತ ಹಸರಿಸು ಬಾರೆ
ಬಾಯೊಣಗಿ ಬೋರ್ಯಾಡಿ ಪ್ರಾಣಾ ಓಡಾಡ್ಯಾವೆ
ಜೀವಾನ ಉಳಿಸಾಕೆ ಮೇಲಿಂದ ಬಾರೆ  ||೨||

ಎದೆಯೆಂಬ ಪೀಠಾನ ಝಾಡಿಸಿ ಜಪ್ಪಿಸಿ
ಕಾದೀನಿ ನಿನಗಾಗಿ ಕುಂತುಗೊ ಬಾರೆ
ಸಭೆ ತುಂಬಿ ಕಾದೈತೆ ಕಣ್ಕಣ್ಣು ಬಿಡತೈತೆ
ಹಡದೀಯ ಹಾಸ್ಯೈತೆ ನಡಕೊಂತ ಬಾರೆ  ||೩||

ಎದೆಯೆಂಬ ನೆಲದಾಗೆ ಗಿಡಮರ ನರನರಾ
ಒಣಗ್ಯಾವೆ ಹಿಡಿದಾವೆ ಒಳಗೆಲ್ಲೋ ಜೀವಾ
ಈ ನೆಲಾ ಬಾಯ್ಬಿಟ್ಟು ಬಿರುಕೀನ ಮಕವಿಟ್ಟು
ನೀರೆ ಬಾರೇ ಬಾರೆ ಕೂಗ್ಯೈತೆ ಜೀವಾ  ||೪||

ಎದೆಯೆಂಬ ಗುಡಿಯಾಕೆ ಬಣಬಣ ಬರಿಗಂಟೆ
ಉರದೈತೆ ಇರುಳೆಲ್ಲಾ ದೀಪಾಧೂಪಾ
ಗರ್ಭಾಗುಡಿಯಾಗೆ ನೀ ಮನಿದೇವ್ತೆ ಇರದಾಗ
ಯಾರೀಗೆ ಈ ಗುಡಿ ಈಪೂಜಿ ಪಾಪಾ ||೫||

ಎದೆಯೆಂಬ ಪಂಜರದೊಳಗೊಂದು ಗಿಣಿರಾಮಾ
ಸಂಗಾತಿ ಬೇಕಂತಾ ಕರದೈತೆ ಬಾರೆ
ಹಣ್ಣನ್ನ ತಿನವಲ್ದು ಕಣ್ಣನ್ನ ಮುಚುವಲ್ದು
ಸೆಳ್ಳನ್ನೆ ಕುಕತೈತೆ ಅರಗಿಣಿ ಬಾರೆ  ||೬||

ಎದೆಯೆಂಬ ಬಾವ್ಯಾಗೆ ಬರಿತಳ ಕಂಡೈತೆ
ಬರಿಕೊಡ ಜೋತಾಡಿ ನೇತಾಡುತಾವೆ
ಬಾವೇನು ಜೀವಿಲ್ದ ಹೆಣಬಾಯಿಯಾಗ್ಯೈತೆ
ಅಂತಾರಾಗಂಗೀಬಾ ತುಳುಕಲಿ ಒಲವೇ ||೭||

ಎದೆಯೆಂಬ ಗಿಡದಾಗೆ ಎಲಿಯಿಲ್ಲ ಚಿಗುರಿಲ್ಲ
ಬರಲಾಗಿ ನಿಂತೈತೆ ರಸವಿಲ್ದ ಜೀವಾ
ಹಸಿರಿನ ಸೀರ್ಯುಟ್ಟು ಹೂಮುಡಿದು ಕಾಯಾಗಿ
ಹಣ್ಣಾಗಿ ಗಿಡತುಂಬು ಬಾರೆನ್ನ ಸತುವಾ  ||೮||

ಎದೆಯೆಂಬ ಹೊನ್ನಾಡು ರತ್ನ ಮುತ್ತಿನ ನಾಡು
ಹಾಳಾಗಿ ಹಂಪ್ಯಾಗಿ ಕೂಗ್ಯಾವೆ ಗೂಗಿ
ನಿನ್ನ ಗೆಜ್ಜಿ ಪಾದ ಸೋಕಿದರೆ ಈ ಕೊಂಪಿ
ನಂದಾನವಾದೀತು ಕೋಗಿಲೆ ಕೂಗಿ  ||೯||

ಎದೆಯೆಂಬ ಈ ಮನಿ ಕಸಕಾಗಿ ತೌರ್ಮನಿ
ಧೂಳು ದುಮ್ಮು ಮೂಲಿಮೂಲಿಗೆಲ್ಲ
ವಾರಣ ಸಾರಣಿ ಮಾಡಿ ಈ ಮನಿಯಾಗೆ
ಹಣತೆಯ ಹಚ್ಚು ಬಾ ಕಳೆಯಲಿ ಕತ್ಲಾ  ||೧೦||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...