Home / ಕವನ / ಕವಿತೆ / ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ನನ್ನ ಮನೆಯ ನೆತ್ತಿಯ ಮೇಲೆ
ಸೂರ್ಯ ಇನ್ನೂ ಹುಟ್ಟಿರಲಿಲ್ಲ.
ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ
ಚಳಿಯಲ್ಲಿ ನಡುಗುತ್ತ ಮಲಗಿದ್ದ
ಹಸಿವಿನಿಂದ ಚಡಪಡಿಸುತ್ತಿರುವ
ಮಕ್ಕಳಿಗೆ ಹೇಗೆ ಹೇಳಲಿ ನಾನು
ನಮ್ಮ ರಂಜಾನಿನ ಉಪವಾಸ
ಇನ್ನೂ ಮುಗಿದಿಲ್ಲ ಎಂದು.
ಹಾಳಾದ ಚಳಿಗೆ ಮತ್ತಷ್ಟು ಹಸಿವು
ಅಳಬೇಡ ಕಂದ ಇಂದು ಪವಿತ್ರಹಬ್ಬ
ರಂಜಾನಿನ ಪುಣ್ಯದಿನ ನಮಾಜಿಗೆ ಹೋಗು
ಅಲ್ಲಾಹ್ ಬಡವರ ಕೈ ಬಿಡಲಾರ.

ಪುಟ್ಟ ಮಕ್ಕಳು ಪ್ರಾರ್ಥನೆ ಮಾಡಿದರೆ
ಕರುಣಾಮಯನಿಗೆ ಬೇಗ ಮುಟ್ಟುತ್ತದೆ
ಅಳಬಾರದು ಬೇಟಾ ಇಂದು ಪುಣ್ಯದಿನ
ಎದ್ದು ನಮಾಜಿಗೆ ಹೋಗು ಮಸೀದಿಗೆ
ಅಮ್ಮಿ ಹೇಳುವ ಮಾತುಗಳು,
ಕಿವಿಗಪ್ಪಳಿಸಿ ಹಿಂತಿರುಗಿ ಹೋದವು.
ದೇವರು ನಮಗೆ ಬಡವರಾಗಿ
ಹುಟ್ಟಿಸಿದ ಸಿಟ್ಟಿಗೆ ಮುಷ್ಟಿ ಬಿಗಿಯಾದವು.

ತಿಂಗಳುಪವಾಸದ ನಂತರ ಪವಿತ್ರ ಹಬ್ಬ
ಪಕ್ಕದ ಶ್ರೀಮಂತರ ಮನೆಯಿಂದ
ಕರಿದ ಮೀನು, ಚಿಕನ್ನು, ಮಟನ್ನು
ಭಕ್ಷಾನ್ನಗಳ ಘಮಘಮ ವಾಸನೆಗೆ
ಮಕ್ಕಳ ಹಸಿವಿನ ಕಿಚ್ಚು ಹೆಚ್ಚಾಗದಿರಲಿ ರಬ್ಬೆ.
ಗುಡಿಸಲ ಬಾಗಿಲು ಭದ್ರ ಮುಚ್ಚಿದಳು
ದೇವರಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದಳು.
ನನ್ನ ಮಕ್ಕಳು ನೊಂದಾರು ಪ್ರಭುವೇ!
ಪಕ್ಕದ ಮಕ್ಕಳ ಹೊಸ ಬಟ್ಟೆಗಳು
ಅವರ ಕಣ್ಣಿಗೆ ಬೀಳದಿರಲಿ ರಬ್ಬೇ!

ಯಾಕಾದರೂ ನೀನು ಹಬ್ಬಗಳ ಮಾಡಿದೆ?
ಮಾಡಿದರೂ ಮಾಡಿದೆ ಬಿಡು
ನಮ್ಮನ್ನು ಬಡವರಾಗೇಕೆ ಹುಟ್ಟಿಸಿದೆ?
ಸರ್ವಶಕ್ತ ನೀನಂತೆ, ಒಂದು ಸಲ ನೀನು
ಲೋಕದ ಬಡತನದ ಬೇರುಗಳ ಸಹಿತ
ಬುಡದಿಂದ ಕಿತ್ತೆಸೆಯಬಾರದೇ?
`ನೆರೆಮನೆಯವರು ಹಸಿದಿರುವಾಗ
ಬೀರಿಯುವಂತೆ ತಿನ್ನುವುದು ಪಾಪ’
ಎಂದು ಪೈಗಂಬರರು ಹೇಳುತ್ತಿದ್ದರಲ್ಲವೇ

ಮನುಜ ಮನುಜರ ನಡುವಿನ
ಅಸಮತೆಯ ಗೋಡೆ ಕೆಡವಬಾರದೇ?
ನೋವಿನ ಉಸಿರು ಭಾರವಾದಾಗ
ಬದುಕು ಅಸಹನೀಯವಾದಾಗ
ಆ ಸೃಷ್ಟಿಕರ್ತನಿಗೇ ಕೇಳುತ್ತೇನೆ
ಜಗದಲಿ ಹಬ್ಬಗಳನ್ನೇಕೆ ಮಾಡಿದೆ?
ನೀನು ಹೇಳದಿದ್ದರೆ ನಿನ್ನ ದೇವಲೋಕದಲಿ
ನ್ಯಾಯಕ್ಕಾಗಿ ಜಿಹಾದ್‌ ಹೂಡುತ್ತೇನೆ
ಹೇಳು ಹಬ್ಬಗಳನ್ನೇಕೆ ಮಾಡಿದೆ
ಬಡತನವನ್ನೇಕೆ ಹುಟ್ಟು ಹಾಕಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...