Home / ಕವನ / ಕವಿತೆ / ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ನನ್ನ ಮನೆಯ ನೆತ್ತಿಯ ಮೇಲೆ
ಸೂರ್ಯ ಇನ್ನೂ ಹುಟ್ಟಿರಲಿಲ್ಲ.
ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ
ಚಳಿಯಲ್ಲಿ ನಡುಗುತ್ತ ಮಲಗಿದ್ದ
ಹಸಿವಿನಿಂದ ಚಡಪಡಿಸುತ್ತಿರುವ
ಮಕ್ಕಳಿಗೆ ಹೇಗೆ ಹೇಳಲಿ ನಾನು
ನಮ್ಮ ರಂಜಾನಿನ ಉಪವಾಸ
ಇನ್ನೂ ಮುಗಿದಿಲ್ಲ ಎಂದು.
ಹಾಳಾದ ಚಳಿಗೆ ಮತ್ತಷ್ಟು ಹಸಿವು
ಅಳಬೇಡ ಕಂದ ಇಂದು ಪವಿತ್ರಹಬ್ಬ
ರಂಜಾನಿನ ಪುಣ್ಯದಿನ ನಮಾಜಿಗೆ ಹೋಗು
ಅಲ್ಲಾಹ್ ಬಡವರ ಕೈ ಬಿಡಲಾರ.

ಪುಟ್ಟ ಮಕ್ಕಳು ಪ್ರಾರ್ಥನೆ ಮಾಡಿದರೆ
ಕರುಣಾಮಯನಿಗೆ ಬೇಗ ಮುಟ್ಟುತ್ತದೆ
ಅಳಬಾರದು ಬೇಟಾ ಇಂದು ಪುಣ್ಯದಿನ
ಎದ್ದು ನಮಾಜಿಗೆ ಹೋಗು ಮಸೀದಿಗೆ
ಅಮ್ಮಿ ಹೇಳುವ ಮಾತುಗಳು,
ಕಿವಿಗಪ್ಪಳಿಸಿ ಹಿಂತಿರುಗಿ ಹೋದವು.
ದೇವರು ನಮಗೆ ಬಡವರಾಗಿ
ಹುಟ್ಟಿಸಿದ ಸಿಟ್ಟಿಗೆ ಮುಷ್ಟಿ ಬಿಗಿಯಾದವು.

ತಿಂಗಳುಪವಾಸದ ನಂತರ ಪವಿತ್ರ ಹಬ್ಬ
ಪಕ್ಕದ ಶ್ರೀಮಂತರ ಮನೆಯಿಂದ
ಕರಿದ ಮೀನು, ಚಿಕನ್ನು, ಮಟನ್ನು
ಭಕ್ಷಾನ್ನಗಳ ಘಮಘಮ ವಾಸನೆಗೆ
ಮಕ್ಕಳ ಹಸಿವಿನ ಕಿಚ್ಚು ಹೆಚ್ಚಾಗದಿರಲಿ ರಬ್ಬೆ.
ಗುಡಿಸಲ ಬಾಗಿಲು ಭದ್ರ ಮುಚ್ಚಿದಳು
ದೇವರಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದಳು.
ನನ್ನ ಮಕ್ಕಳು ನೊಂದಾರು ಪ್ರಭುವೇ!
ಪಕ್ಕದ ಮಕ್ಕಳ ಹೊಸ ಬಟ್ಟೆಗಳು
ಅವರ ಕಣ್ಣಿಗೆ ಬೀಳದಿರಲಿ ರಬ್ಬೇ!

ಯಾಕಾದರೂ ನೀನು ಹಬ್ಬಗಳ ಮಾಡಿದೆ?
ಮಾಡಿದರೂ ಮಾಡಿದೆ ಬಿಡು
ನಮ್ಮನ್ನು ಬಡವರಾಗೇಕೆ ಹುಟ್ಟಿಸಿದೆ?
ಸರ್ವಶಕ್ತ ನೀನಂತೆ, ಒಂದು ಸಲ ನೀನು
ಲೋಕದ ಬಡತನದ ಬೇರುಗಳ ಸಹಿತ
ಬುಡದಿಂದ ಕಿತ್ತೆಸೆಯಬಾರದೇ?
`ನೆರೆಮನೆಯವರು ಹಸಿದಿರುವಾಗ
ಬೀರಿಯುವಂತೆ ತಿನ್ನುವುದು ಪಾಪ’
ಎಂದು ಪೈಗಂಬರರು ಹೇಳುತ್ತಿದ್ದರಲ್ಲವೇ

ಮನುಜ ಮನುಜರ ನಡುವಿನ
ಅಸಮತೆಯ ಗೋಡೆ ಕೆಡವಬಾರದೇ?
ನೋವಿನ ಉಸಿರು ಭಾರವಾದಾಗ
ಬದುಕು ಅಸಹನೀಯವಾದಾಗ
ಆ ಸೃಷ್ಟಿಕರ್ತನಿಗೇ ಕೇಳುತ್ತೇನೆ
ಜಗದಲಿ ಹಬ್ಬಗಳನ್ನೇಕೆ ಮಾಡಿದೆ?
ನೀನು ಹೇಳದಿದ್ದರೆ ನಿನ್ನ ದೇವಲೋಕದಲಿ
ನ್ಯಾಯಕ್ಕಾಗಿ ಜಿಹಾದ್‌ ಹೂಡುತ್ತೇನೆ
ಹೇಳು ಹಬ್ಬಗಳನ್ನೇಕೆ ಮಾಡಿದೆ
ಬಡತನವನ್ನೇಕೆ ಹುಟ್ಟು ಹಾಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...