ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ನನ್ನ ಮನೆಯ ನೆತ್ತಿಯ ಮೇಲೆ
ಸೂರ್ಯ ಇನ್ನೂ ಹುಟ್ಟಿರಲಿಲ್ಲ.
ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ
ಚಳಿಯಲ್ಲಿ ನಡುಗುತ್ತ ಮಲಗಿದ್ದ
ಹಸಿವಿನಿಂದ ಚಡಪಡಿಸುತ್ತಿರುವ
ಮಕ್ಕಳಿಗೆ ಹೇಗೆ ಹೇಳಲಿ ನಾನು
ನಮ್ಮ ರಂಜಾನಿನ ಉಪವಾಸ
ಇನ್ನೂ ಮುಗಿದಿಲ್ಲ ಎಂದು.
ಹಾಳಾದ ಚಳಿಗೆ ಮತ್ತಷ್ಟು ಹಸಿವು
ಅಳಬೇಡ ಕಂದ ಇಂದು ಪವಿತ್ರಹಬ್ಬ
ರಂಜಾನಿನ ಪುಣ್ಯದಿನ ನಮಾಜಿಗೆ ಹೋಗು
ಅಲ್ಲಾಹ್ ಬಡವರ ಕೈ ಬಿಡಲಾರ.

ಪುಟ್ಟ ಮಕ್ಕಳು ಪ್ರಾರ್ಥನೆ ಮಾಡಿದರೆ
ಕರುಣಾಮಯನಿಗೆ ಬೇಗ ಮುಟ್ಟುತ್ತದೆ
ಅಳಬಾರದು ಬೇಟಾ ಇಂದು ಪುಣ್ಯದಿನ
ಎದ್ದು ನಮಾಜಿಗೆ ಹೋಗು ಮಸೀದಿಗೆ
ಅಮ್ಮಿ ಹೇಳುವ ಮಾತುಗಳು,
ಕಿವಿಗಪ್ಪಳಿಸಿ ಹಿಂತಿರುಗಿ ಹೋದವು.
ದೇವರು ನಮಗೆ ಬಡವರಾಗಿ
ಹುಟ್ಟಿಸಿದ ಸಿಟ್ಟಿಗೆ ಮುಷ್ಟಿ ಬಿಗಿಯಾದವು.

ತಿಂಗಳುಪವಾಸದ ನಂತರ ಪವಿತ್ರ ಹಬ್ಬ
ಪಕ್ಕದ ಶ್ರೀಮಂತರ ಮನೆಯಿಂದ
ಕರಿದ ಮೀನು, ಚಿಕನ್ನು, ಮಟನ್ನು
ಭಕ್ಷಾನ್ನಗಳ ಘಮಘಮ ವಾಸನೆಗೆ
ಮಕ್ಕಳ ಹಸಿವಿನ ಕಿಚ್ಚು ಹೆಚ್ಚಾಗದಿರಲಿ ರಬ್ಬೆ.
ಗುಡಿಸಲ ಬಾಗಿಲು ಭದ್ರ ಮುಚ್ಚಿದಳು
ದೇವರಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದಳು.
ನನ್ನ ಮಕ್ಕಳು ನೊಂದಾರು ಪ್ರಭುವೇ!
ಪಕ್ಕದ ಮಕ್ಕಳ ಹೊಸ ಬಟ್ಟೆಗಳು
ಅವರ ಕಣ್ಣಿಗೆ ಬೀಳದಿರಲಿ ರಬ್ಬೇ!

ಯಾಕಾದರೂ ನೀನು ಹಬ್ಬಗಳ ಮಾಡಿದೆ?
ಮಾಡಿದರೂ ಮಾಡಿದೆ ಬಿಡು
ನಮ್ಮನ್ನು ಬಡವರಾಗೇಕೆ ಹುಟ್ಟಿಸಿದೆ?
ಸರ್ವಶಕ್ತ ನೀನಂತೆ, ಒಂದು ಸಲ ನೀನು
ಲೋಕದ ಬಡತನದ ಬೇರುಗಳ ಸಹಿತ
ಬುಡದಿಂದ ಕಿತ್ತೆಸೆಯಬಾರದೇ?
`ನೆರೆಮನೆಯವರು ಹಸಿದಿರುವಾಗ
ಬೀರಿಯುವಂತೆ ತಿನ್ನುವುದು ಪಾಪ’
ಎಂದು ಪೈಗಂಬರರು ಹೇಳುತ್ತಿದ್ದರಲ್ಲವೇ

ಮನುಜ ಮನುಜರ ನಡುವಿನ
ಅಸಮತೆಯ ಗೋಡೆ ಕೆಡವಬಾರದೇ?
ನೋವಿನ ಉಸಿರು ಭಾರವಾದಾಗ
ಬದುಕು ಅಸಹನೀಯವಾದಾಗ
ಆ ಸೃಷ್ಟಿಕರ್ತನಿಗೇ ಕೇಳುತ್ತೇನೆ
ಜಗದಲಿ ಹಬ್ಬಗಳನ್ನೇಕೆ ಮಾಡಿದೆ?
ನೀನು ಹೇಳದಿದ್ದರೆ ನಿನ್ನ ದೇವಲೋಕದಲಿ
ನ್ಯಾಯಕ್ಕಾಗಿ ಜಿಹಾದ್‌ ಹೂಡುತ್ತೇನೆ
ಹೇಳು ಹಬ್ಬಗಳನ್ನೇಕೆ ಮಾಡಿದೆ
ಬಡತನವನ್ನೇಕೆ ಹುಟ್ಟು ಹಾಕಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ
Next post ಸಂಜೆಗಾಳಿಗೆ ಜಳಕ ಮಾಡಿಸೆ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…