Home / ಕವನ / ಕವಿತೆ / ಶಾಂತಿ ಮಳೆ

ಶಾಂತಿ ಮಳೆ

ಬರೀ ಮಾತುಗಳು ಇವು
ಕೇವಲ ಅರ್ಥಕಳಕೊಂಡ ಶಬ್ದಗಳು
ಬೀಜ ನೆಲದಲ್ಲಿ ಹೂತು ಪಸೆಯೊಡೆದು
ಮೊಳಕೆ ಕಟ್ಟಿ ಬೇರು ಬಿಡುವತನಕ
ಇವು ಅರ್ಥವಿಲ್ಲದ ಕೇವಲ ಮಾತುಗಳು.

ಬರೀ ಮಾತುಗಳು ಇವು
ಉಗುಳಿನ ವಿಷಕ್ಕೆ ನಂಜೇರಿದ
ಮಹಾತ್ಮನ ಶಾಂತಿ ಮಂತ್ರದ ಬೀಜ
ಮೊಳಕೆಯೊಡೆಯಲಿಲ್ಲ ಇಲ್ಲಿ
ಬೇರು ಬಿಟ್ಟು ಬೆಳೆದು ಮರವಾಗಲಿಲ್ಲ.

ಬರೀ ಮಾತುಗಳು ಇವು
ಆರಿತು ನಾಲಿಗೆಯ ಪಸೆ
ಬಂಜೆಯಾಯಿತು ನೆಲದ ಒಡಲು
ಉರಿದಾಯ್ತು ಬೋಳು ಹಾಳುಹಾಳು
ಪಸೆಯಿಲ್ಲ, ತಂಪಿಲ್ಲ, ಬರೀ ಧೂಳು.

ಬರೀ ಮಾತುಗಳು ಇವು
ಅರ್ಥಕಳಕೊಂಡ ಶಾಂತಿಮಂತ್ರ
ಅವಿರತ ಹತ್ಯೆ, ಕೋಮುಲಗಲಭೆಗಳು
ಗಲ್ಲಿ ಗಲ್ಲಿಗಳಲ್ಲಿ ಕೊಲೆಗಳು
ಬೀದಿ ಬೀದಿಗಳಲ್ಲಿ ಅತ್ಯಾಚಾರಗಳು
ಅಮಾಯಕರ ಮೃತ್ಯುಕೂಪಗಳು.

ಶಾಂತಿ…. ಶಾಂತಿ…. ಶಾಂತಿ
ಕಳಿಂಗದಿಂದ – ಕಲ್ಯಾಣದತನಕ
ಏಸುವಿನಿಂದ – ಪೈಗಂಬರತನಕ
ಬುದ್ಧನಿಂದ – ಬಸವನತನಕ
ಧೋ ಎಂದು ಸುರಿಯಲಿ ಶಾಂತಿ ಮಳೆ
ಬೆಳೆಯಲಿ ಸಮೃದ್ಧ ಶಾಂತಿ ಮಳೆ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...