Home / ಕವನ / ಕವಿತೆ / ಶಾಂತಿ ಮಳೆ

ಶಾಂತಿ ಮಳೆ

ಬರೀ ಮಾತುಗಳು ಇವು
ಕೇವಲ ಅರ್ಥಕಳಕೊಂಡ ಶಬ್ದಗಳು
ಬೀಜ ನೆಲದಲ್ಲಿ ಹೂತು ಪಸೆಯೊಡೆದು
ಮೊಳಕೆ ಕಟ್ಟಿ ಬೇರು ಬಿಡುವತನಕ
ಇವು ಅರ್ಥವಿಲ್ಲದ ಕೇವಲ ಮಾತುಗಳು.

ಬರೀ ಮಾತುಗಳು ಇವು
ಉಗುಳಿನ ವಿಷಕ್ಕೆ ನಂಜೇರಿದ
ಮಹಾತ್ಮನ ಶಾಂತಿ ಮಂತ್ರದ ಬೀಜ
ಮೊಳಕೆಯೊಡೆಯಲಿಲ್ಲ ಇಲ್ಲಿ
ಬೇರು ಬಿಟ್ಟು ಬೆಳೆದು ಮರವಾಗಲಿಲ್ಲ.

ಬರೀ ಮಾತುಗಳು ಇವು
ಆರಿತು ನಾಲಿಗೆಯ ಪಸೆ
ಬಂಜೆಯಾಯಿತು ನೆಲದ ಒಡಲು
ಉರಿದಾಯ್ತು ಬೋಳು ಹಾಳುಹಾಳು
ಪಸೆಯಿಲ್ಲ, ತಂಪಿಲ್ಲ, ಬರೀ ಧೂಳು.

ಬರೀ ಮಾತುಗಳು ಇವು
ಅರ್ಥಕಳಕೊಂಡ ಶಾಂತಿಮಂತ್ರ
ಅವಿರತ ಹತ್ಯೆ, ಕೋಮುಲಗಲಭೆಗಳು
ಗಲ್ಲಿ ಗಲ್ಲಿಗಳಲ್ಲಿ ಕೊಲೆಗಳು
ಬೀದಿ ಬೀದಿಗಳಲ್ಲಿ ಅತ್ಯಾಚಾರಗಳು
ಅಮಾಯಕರ ಮೃತ್ಯುಕೂಪಗಳು.

ಶಾಂತಿ…. ಶಾಂತಿ…. ಶಾಂತಿ
ಕಳಿಂಗದಿಂದ – ಕಲ್ಯಾಣದತನಕ
ಏಸುವಿನಿಂದ – ಪೈಗಂಬರತನಕ
ಬುದ್ಧನಿಂದ – ಬಸವನತನಕ
ಧೋ ಎಂದು ಸುರಿಯಲಿ ಶಾಂತಿ ಮಳೆ
ಬೆಳೆಯಲಿ ಸಮೃದ್ಧ ಶಾಂತಿ ಮಳೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...