ಶಾಂತಿ ಮಳೆ

ಬರೀ ಮಾತುಗಳು ಇವು
ಕೇವಲ ಅರ್ಥಕಳಕೊಂಡ ಶಬ್ದಗಳು
ಬೀಜ ನೆಲದಲ್ಲಿ ಹೂತು ಪಸೆಯೊಡೆದು
ಮೊಳಕೆ ಕಟ್ಟಿ ಬೇರು ಬಿಡುವತನಕ
ಇವು ಅರ್ಥವಿಲ್ಲದ ಕೇವಲ ಮಾತುಗಳು.

ಬರೀ ಮಾತುಗಳು ಇವು
ಉಗುಳಿನ ವಿಷಕ್ಕೆ ನಂಜೇರಿದ
ಮಹಾತ್ಮನ ಶಾಂತಿ ಮಂತ್ರದ ಬೀಜ
ಮೊಳಕೆಯೊಡೆಯಲಿಲ್ಲ ಇಲ್ಲಿ
ಬೇರು ಬಿಟ್ಟು ಬೆಳೆದು ಮರವಾಗಲಿಲ್ಲ.

ಬರೀ ಮಾತುಗಳು ಇವು
ಆರಿತು ನಾಲಿಗೆಯ ಪಸೆ
ಬಂಜೆಯಾಯಿತು ನೆಲದ ಒಡಲು
ಉರಿದಾಯ್ತು ಬೋಳು ಹಾಳುಹಾಳು
ಪಸೆಯಿಲ್ಲ, ತಂಪಿಲ್ಲ, ಬರೀ ಧೂಳು.

ಬರೀ ಮಾತುಗಳು ಇವು
ಅರ್ಥಕಳಕೊಂಡ ಶಾಂತಿಮಂತ್ರ
ಅವಿರತ ಹತ್ಯೆ, ಕೋಮುಲಗಲಭೆಗಳು
ಗಲ್ಲಿ ಗಲ್ಲಿಗಳಲ್ಲಿ ಕೊಲೆಗಳು
ಬೀದಿ ಬೀದಿಗಳಲ್ಲಿ ಅತ್ಯಾಚಾರಗಳು
ಅಮಾಯಕರ ಮೃತ್ಯುಕೂಪಗಳು.

ಶಾಂತಿ…. ಶಾಂತಿ…. ಶಾಂತಿ
ಕಳಿಂಗದಿಂದ – ಕಲ್ಯಾಣದತನಕ
ಏಸುವಿನಿಂದ – ಪೈಗಂಬರತನಕ
ಬುದ್ಧನಿಂದ – ಬಸವನತನಕ
ಧೋ ಎಂದು ಸುರಿಯಲಿ ಶಾಂತಿ ಮಳೆ
ಬೆಳೆಯಲಿ ಸಮೃದ್ಧ ಶಾಂತಿ ಮಳೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಯಂಕರ ರೋಗ ಸಾರ್‍ಸ್‌ಗೆ ಮದ್ದು
Next post ಮೂಡುತಿಹನದೊ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…