Home / ಕಥೆ / ಕಾದಂಬರಿ / ಮಲ್ಲಿ – ೩

ಮಲ್ಲಿ – ೩

ಡೆಪ್ಯುಟೀಕಮೀಷನರ್ ಸ್ವಂತವಾಗಿ ಸೈನ್ಮಾಡಿರುವ ಪತ್ರ ಬಂದಿದೆ ಪಟೇಲರಿಗೆ. ಊರಿಗೆ ಊರೇ ಬೆರೆತುಕೊಂಡುಹೋಗಿದೆ. “ರಾಣಿ ಮೊಮ್ಮಗ ಬರುತಾರಂತೆ : ಈಗ ನಮ್ಮ ಬುದ್ದಿಯವರು ಹೋಗಬೇಕಂತೆ” ಎಂದು ಊರಿನವರಿಗೆಲ್ಲಾ ಸಂತೋಷ. “ಏನೇ ಅನ್ನು, ದೊಡ್ಮಬುದ್ಧಿಯವರಂಗಲ್ಲ ಇವರು. ಅವರು ಊರುಬಿಟ್ಟು ಇನ್ನೆಲ್ಲೂ ಹೋಗುತ್ತಲೇ ಇರಲಿಲ್ಲ. ಇರೋವರೆಗೂ ಎಲೇಮರೇ ಕಾಯಂಗೆ ಇದ್ದು ಶಿನನ ಪಾದ ಸೇರಿದರು. ಇವರು ಹಂಗಲ್ಲ. ನೋಡು ಸುಬೇದಾರ್ರು, ಸಬ್ಡಿನಿರ್ಜರು, ದುಪಟೀಕಮೀಷನ್ರವರೆಗೂ ಹತ್ತಿ ಬುಟ್ಟವರೆ. ಈಗ ರಾಣಿ ಮೊಮ್ಮಗನ್ನೇ ನೋಡತಾರೆ ಅಂದಮೇಲೆ ಮಹಾರಾಜರವರೆಗೂ ಹೋಗಲೇಬೇಕೋ? ಹುಟ್ಟಿದರೂ ಇಂತಾ ಮಗ ಹುಟ್ಟಬೇಕು ಮನೇಲಿ. ನೋಡು ಆನೇಕಾಡನೋರ ಮನೆತನ ಎಂಥಾದ್ದು ಅಂತ ಭೂಲೋಕಕ್ಕೆಲ್ಲ ಹಬ್ಬಿ ಬಿಡುತದೋ! ಭಲೇ ಭಲೇ” ಎಂದು ಒಬ್ಬ ಮುದುಕ ಅಂದ.

“ಈ ನಮ್ಮ ಬುದ್ಧಿ ಯೋರಿಗೆ ಇಂಗ್ಲೀಷು ಅಷ್ಟು ಬಂದಿರೋದಲ್ಲಾ ಬೇಕಾದರೆ ರೆವಿನ್ಯೂ ಕಮಿರ್ಷರು, ಕೌನ್ಸಿಲ್ಲರು, ಕೊನೆಗೆ ದಿವಾನ್ಗಿರಿ ಕೂಡ ಮಾಡೇ ಮಾಡೋ ಬುದ್ದಿ. ಏನು ಮಾಡೋದು ; ಕಲೀಲಿಲ್ಲ.”

” ಹಂಗಂತ ಅವರಿಗೇನಾ ಕಮ್ಮಿಯಾಗಿರೋದು ? ಈ ಸುತ್ತ ಮುತ್ತಲಿನಲ್ಲಿ, ಯಳಂದೂರು ಜಹಗೀರುದಾರನ್ನ ಬಿಟ್ಟರೆ, ಈ ಗತ್ತು, ಈ ಗಮ್ಮತ್ತು, ಯಾರಿಗುಂಟು ? ಅವರಿಗೆ ಇಂಗ್ಲೀಷ್ ಬಂದು ಅವರು ಅಧಿಕಾರ ಮಾಡಿದ್ದರೆ, ಅದು ನಮ್ಮ ಪುಣ್ಯಕ್ಕೆ ಆಯಿತಿತ್ತು.”

” ಈಗತಾನೇ ಏನಂತೆ ? ಇನ್ನೂ ಅವರಿಗೆ ಮುವ್ವತ್ತೋ ಮುವ್ವ ತ್ತೈದೋ ? ಈಗಲೂ ಕಲೀಬೇಕು ಅಂದರೆ ಬಹಳ ದೊಡ್ಡದಾ! ಅವರು ಮನಸ್ಸು ಮಾಡಲಿ. ಈ ಠಸ್ ಪುಸ್ ಹ್ಯಾಟ್ ಬೂಟ್ ಎಲ್ಲಾ ಒಂದೇ ವರುಷದಲ್ಲಿ ಕಲೀದಿದ್ದರೆ, ನನ್ನ ಹೆಸರು ಬೇರೆ ಇಡು.”

ಹೀಗೆ ಊರ ಅರಳಿಯ ಕಟ್ಟೆಯಮೇಲೆ ಎಲ್ಲರೂ ಎಳೆ ಬಿಸಿಲು ಕಾಯಿಸಿಕೊಳ್ಳುತ್ತ ಹರಟೆ ಹೊಡೆಯುತ್ತ ಕುಳಿತಿರುವಾಗ, ಕೆಂಪಿಯು ಅತ್ತ ಕಡೆ ನೀರಿಗೆ ಹರವಿ ತಕೊಂಡು ಹೊರಟಿದ್ದಳು. ಊರ ಗೌಡರೆಲ್ಲ ಕೂತಿರುವಾಗ ತಾನು ಬಿರುಬೀಸಾಗಿ ಹೊರಟರೆ ಆದೀತೆ ? ಮುಸುಕು ನೇರವಾಗಿ ತಲೆತುಂಬಾ ಹೊದೆದುಕೊಂಡು, ಸೆರಗು ಎಳೆದು ಕೊಂಡು ಮೈ ತುಂಬಾ ಹೊಡೆದುಕೊಂಡು, ತಲೆ ಬಗ್ಗಿಸಿಕೊಂಡು ಹೊರ ಟಳು. ಅಲ್ಲಿ ಅಡಕೆ ಹಾಕಿಕೊಂಡು ಹೊಗೆಸೊಪ್ಪು ತಿಕ್ಕುತ್ತ ಕುಳಿ ತಿದ್ದ ಗೌಡನೊಬ್ಬನು “ಏನು ಕೆಂಪಕ್ಕ, ನಿಮಗೂ ಪಯಣವಂತೆ ?” ಅಂದನು.

ಅವಳು ತನ್ನ ಸಂತೋಷವನ್ನು ಮುಚ್ಚಿಕೊಳ್ಳಲಾರದೆ, ಹೊರ ಸೂಸುವವಳಂತೆ ಮೊರದಗಲವಾಗಿರುವ ಮೊಕದ ತುಂಬಾ ನಗುವನ್ನು ಹಿಡಿತವಾಗಿ ನಗುತ್ತಾ, “ಏನೋ ಹಿರೀಕರ ಪುಣ್ಯ ನಿಮ್ಮ ಪಾದ. ನಿಮ್ಮೂರು ಬಂದು ಸೇರಿದೋ ; ನಿಮ್ಮ ಹೊಟ್ಟೆಯಲ್ಲಿ ಇಟ್ಟು ಕೊಂಡು ಕಾಪಾಡುತಿದೀರಿ.” ಅಂದು ಮುಂದೆ ಹೊರಟು ಹೋದಳು.

ಇನ್ನೊಬ್ಬನು “ಏನೇ ಅನ್ನು, ಮಾನವಂತೆ, ಹಲ್ಕಾಗಿಲ್ಕಾ ಅಲ್ಲ !” ಅಂದನು.

“ಅಂತಾ ಚೆಲ್ಲಾಟ ಆಡಿದ್ದರೆ, ನಮ್ಮೂರಲ್ಲಿ ನಿಲ್ಲಾಕೇ ಆಗುತಿರಲಿಲ್ಲ. ಒಂದೇ ದಿನ. ಓಡಿಸಿ ಬುಡುತ್ತಿದ್ದೊ! ಅದೂ ನಾಯ ಬುಟ್ಟು? ಅಂದ ಇನ್ನೊಬ್ಬ.

ಆ ಕೊನೆಯಲ್ಲಿ ಕೂತಿದ್ದವನ್ಕು “ಅವಳ ಮೊಕದ ಮೇಲೆ ಆ ರೂಪಾಯಗಲದ ಕುಂಕುಮ ಮೊಕದ ತುಂಬಾ ಅರತಿಣ, ನೋಡಿದರೆ, ಎಷ್ಟು, ಸಂತೋಷವಾಗುತ್ತದೆ ಅಂತೀಯಾ ?” ಅಂದೆ.

“ಎಲಾ! ಬಿಸಿಲಾಯಿತು. ಇನ್ನು ಹೊಲಗದ್ದೆ ಕಡೆ ನೋಡಿ ಕೊಂಡು ಬಸೋಕಿಲ್ಲವಾ? ಏಳೇಳಿ. ಹಗಲ ಮಾತು ಕೆಲಸ ಗೇಡು.”

ಎಲ್ಲರೂ ಎದ್ದು ಒದರಿಕೊಂಡು ಹೊರಟರು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...