ಮಲ್ಲಿ – ೩

ಮಲ್ಲಿ – ೩

ಡೆಪ್ಯುಟೀಕಮೀಷನರ್ ಸ್ವಂತವಾಗಿ ಸೈನ್ಮಾಡಿರುವ ಪತ್ರ ಬಂದಿದೆ ಪಟೇಲರಿಗೆ. ಊರಿಗೆ ಊರೇ ಬೆರೆತುಕೊಂಡುಹೋಗಿದೆ. “ರಾಣಿ ಮೊಮ್ಮಗ ಬರುತಾರಂತೆ : ಈಗ ನಮ್ಮ ಬುದ್ದಿಯವರು ಹೋಗಬೇಕಂತೆ” ಎಂದು ಊರಿನವರಿಗೆಲ್ಲಾ ಸಂತೋಷ. “ಏನೇ ಅನ್ನು, ದೊಡ್ಮಬುದ್ಧಿಯವರಂಗಲ್ಲ ಇವರು. ಅವರು ಊರುಬಿಟ್ಟು ಇನ್ನೆಲ್ಲೂ ಹೋಗುತ್ತಲೇ ಇರಲಿಲ್ಲ. ಇರೋವರೆಗೂ ಎಲೇಮರೇ ಕಾಯಂಗೆ ಇದ್ದು ಶಿನನ ಪಾದ ಸೇರಿದರು. ಇವರು ಹಂಗಲ್ಲ. ನೋಡು ಸುಬೇದಾರ್ರು, ಸಬ್ಡಿನಿರ್ಜರು, ದುಪಟೀಕಮೀಷನ್ರವರೆಗೂ ಹತ್ತಿ ಬುಟ್ಟವರೆ. ಈಗ ರಾಣಿ ಮೊಮ್ಮಗನ್ನೇ ನೋಡತಾರೆ ಅಂದಮೇಲೆ ಮಹಾರಾಜರವರೆಗೂ ಹೋಗಲೇಬೇಕೋ? ಹುಟ್ಟಿದರೂ ಇಂತಾ ಮಗ ಹುಟ್ಟಬೇಕು ಮನೇಲಿ. ನೋಡು ಆನೇಕಾಡನೋರ ಮನೆತನ ಎಂಥಾದ್ದು ಅಂತ ಭೂಲೋಕಕ್ಕೆಲ್ಲ ಹಬ್ಬಿ ಬಿಡುತದೋ! ಭಲೇ ಭಲೇ” ಎಂದು ಒಬ್ಬ ಮುದುಕ ಅಂದ.

“ಈ ನಮ್ಮ ಬುದ್ಧಿ ಯೋರಿಗೆ ಇಂಗ್ಲೀಷು ಅಷ್ಟು ಬಂದಿರೋದಲ್ಲಾ ಬೇಕಾದರೆ ರೆವಿನ್ಯೂ ಕಮಿರ್ಷರು, ಕೌನ್ಸಿಲ್ಲರು, ಕೊನೆಗೆ ದಿವಾನ್ಗಿರಿ ಕೂಡ ಮಾಡೇ ಮಾಡೋ ಬುದ್ದಿ. ಏನು ಮಾಡೋದು ; ಕಲೀಲಿಲ್ಲ.”

” ಹಂಗಂತ ಅವರಿಗೇನಾ ಕಮ್ಮಿಯಾಗಿರೋದು ? ಈ ಸುತ್ತ ಮುತ್ತಲಿನಲ್ಲಿ, ಯಳಂದೂರು ಜಹಗೀರುದಾರನ್ನ ಬಿಟ್ಟರೆ, ಈ ಗತ್ತು, ಈ ಗಮ್ಮತ್ತು, ಯಾರಿಗುಂಟು ? ಅವರಿಗೆ ಇಂಗ್ಲೀಷ್ ಬಂದು ಅವರು ಅಧಿಕಾರ ಮಾಡಿದ್ದರೆ, ಅದು ನಮ್ಮ ಪುಣ್ಯಕ್ಕೆ ಆಯಿತಿತ್ತು.”

” ಈಗತಾನೇ ಏನಂತೆ ? ಇನ್ನೂ ಅವರಿಗೆ ಮುವ್ವತ್ತೋ ಮುವ್ವ ತ್ತೈದೋ ? ಈಗಲೂ ಕಲೀಬೇಕು ಅಂದರೆ ಬಹಳ ದೊಡ್ಡದಾ! ಅವರು ಮನಸ್ಸು ಮಾಡಲಿ. ಈ ಠಸ್ ಪುಸ್ ಹ್ಯಾಟ್ ಬೂಟ್ ಎಲ್ಲಾ ಒಂದೇ ವರುಷದಲ್ಲಿ ಕಲೀದಿದ್ದರೆ, ನನ್ನ ಹೆಸರು ಬೇರೆ ಇಡು.”

ಹೀಗೆ ಊರ ಅರಳಿಯ ಕಟ್ಟೆಯಮೇಲೆ ಎಲ್ಲರೂ ಎಳೆ ಬಿಸಿಲು ಕಾಯಿಸಿಕೊಳ್ಳುತ್ತ ಹರಟೆ ಹೊಡೆಯುತ್ತ ಕುಳಿತಿರುವಾಗ, ಕೆಂಪಿಯು ಅತ್ತ ಕಡೆ ನೀರಿಗೆ ಹರವಿ ತಕೊಂಡು ಹೊರಟಿದ್ದಳು. ಊರ ಗೌಡರೆಲ್ಲ ಕೂತಿರುವಾಗ ತಾನು ಬಿರುಬೀಸಾಗಿ ಹೊರಟರೆ ಆದೀತೆ ? ಮುಸುಕು ನೇರವಾಗಿ ತಲೆತುಂಬಾ ಹೊದೆದುಕೊಂಡು, ಸೆರಗು ಎಳೆದು ಕೊಂಡು ಮೈ ತುಂಬಾ ಹೊಡೆದುಕೊಂಡು, ತಲೆ ಬಗ್ಗಿಸಿಕೊಂಡು ಹೊರ ಟಳು. ಅಲ್ಲಿ ಅಡಕೆ ಹಾಕಿಕೊಂಡು ಹೊಗೆಸೊಪ್ಪು ತಿಕ್ಕುತ್ತ ಕುಳಿ ತಿದ್ದ ಗೌಡನೊಬ್ಬನು “ಏನು ಕೆಂಪಕ್ಕ, ನಿಮಗೂ ಪಯಣವಂತೆ ?” ಅಂದನು.

ಅವಳು ತನ್ನ ಸಂತೋಷವನ್ನು ಮುಚ್ಚಿಕೊಳ್ಳಲಾರದೆ, ಹೊರ ಸೂಸುವವಳಂತೆ ಮೊರದಗಲವಾಗಿರುವ ಮೊಕದ ತುಂಬಾ ನಗುವನ್ನು ಹಿಡಿತವಾಗಿ ನಗುತ್ತಾ, “ಏನೋ ಹಿರೀಕರ ಪುಣ್ಯ ನಿಮ್ಮ ಪಾದ. ನಿಮ್ಮೂರು ಬಂದು ಸೇರಿದೋ ; ನಿಮ್ಮ ಹೊಟ್ಟೆಯಲ್ಲಿ ಇಟ್ಟು ಕೊಂಡು ಕಾಪಾಡುತಿದೀರಿ.” ಅಂದು ಮುಂದೆ ಹೊರಟು ಹೋದಳು.

ಇನ್ನೊಬ್ಬನು “ಏನೇ ಅನ್ನು, ಮಾನವಂತೆ, ಹಲ್ಕಾಗಿಲ್ಕಾ ಅಲ್ಲ !” ಅಂದನು.

“ಅಂತಾ ಚೆಲ್ಲಾಟ ಆಡಿದ್ದರೆ, ನಮ್ಮೂರಲ್ಲಿ ನಿಲ್ಲಾಕೇ ಆಗುತಿರಲಿಲ್ಲ. ಒಂದೇ ದಿನ. ಓಡಿಸಿ ಬುಡುತ್ತಿದ್ದೊ! ಅದೂ ನಾಯ ಬುಟ್ಟು? ಅಂದ ಇನ್ನೊಬ್ಬ.

ಆ ಕೊನೆಯಲ್ಲಿ ಕೂತಿದ್ದವನ್ಕು “ಅವಳ ಮೊಕದ ಮೇಲೆ ಆ ರೂಪಾಯಗಲದ ಕುಂಕುಮ ಮೊಕದ ತುಂಬಾ ಅರತಿಣ, ನೋಡಿದರೆ, ಎಷ್ಟು, ಸಂತೋಷವಾಗುತ್ತದೆ ಅಂತೀಯಾ ?” ಅಂದೆ.

“ಎಲಾ! ಬಿಸಿಲಾಯಿತು. ಇನ್ನು ಹೊಲಗದ್ದೆ ಕಡೆ ನೋಡಿ ಕೊಂಡು ಬಸೋಕಿಲ್ಲವಾ? ಏಳೇಳಿ. ಹಗಲ ಮಾತು ಕೆಲಸ ಗೇಡು.”

ಎಲ್ಲರೂ ಎದ್ದು ಒದರಿಕೊಂಡು ಹೊರಟರು.
*****
ಮುಂದುವರೆಯುವುದು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಿಂಸೆ ಏಕೆ!
Next post ಕೋಲಾಟದ ತುಂಡು ಪದಗಳು (ಕೊಳೂಲಾಟ ಕೊಳೂಲಾಟ)

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…