Home / ಕಥೆ / ಕಾದಂಬರಿ / ಮಲ್ಲಿ – ೩

ಮಲ್ಲಿ – ೩

ಡೆಪ್ಯುಟೀಕಮೀಷನರ್ ಸ್ವಂತವಾಗಿ ಸೈನ್ಮಾಡಿರುವ ಪತ್ರ ಬಂದಿದೆ ಪಟೇಲರಿಗೆ. ಊರಿಗೆ ಊರೇ ಬೆರೆತುಕೊಂಡುಹೋಗಿದೆ. “ರಾಣಿ ಮೊಮ್ಮಗ ಬರುತಾರಂತೆ : ಈಗ ನಮ್ಮ ಬುದ್ದಿಯವರು ಹೋಗಬೇಕಂತೆ” ಎಂದು ಊರಿನವರಿಗೆಲ್ಲಾ ಸಂತೋಷ. “ಏನೇ ಅನ್ನು, ದೊಡ್ಮಬುದ್ಧಿಯವರಂಗಲ್ಲ ಇವರು. ಅವರು ಊರುಬಿಟ್ಟು ಇನ್ನೆಲ್ಲೂ ಹೋಗುತ್ತಲೇ ಇರಲಿಲ್ಲ. ಇರೋವರೆಗೂ ಎಲೇಮರೇ ಕಾಯಂಗೆ ಇದ್ದು ಶಿನನ ಪಾದ ಸೇರಿದರು. ಇವರು ಹಂಗಲ್ಲ. ನೋಡು ಸುಬೇದಾರ್ರು, ಸಬ್ಡಿನಿರ್ಜರು, ದುಪಟೀಕಮೀಷನ್ರವರೆಗೂ ಹತ್ತಿ ಬುಟ್ಟವರೆ. ಈಗ ರಾಣಿ ಮೊಮ್ಮಗನ್ನೇ ನೋಡತಾರೆ ಅಂದಮೇಲೆ ಮಹಾರಾಜರವರೆಗೂ ಹೋಗಲೇಬೇಕೋ? ಹುಟ್ಟಿದರೂ ಇಂತಾ ಮಗ ಹುಟ್ಟಬೇಕು ಮನೇಲಿ. ನೋಡು ಆನೇಕಾಡನೋರ ಮನೆತನ ಎಂಥಾದ್ದು ಅಂತ ಭೂಲೋಕಕ್ಕೆಲ್ಲ ಹಬ್ಬಿ ಬಿಡುತದೋ! ಭಲೇ ಭಲೇ” ಎಂದು ಒಬ್ಬ ಮುದುಕ ಅಂದ.

“ಈ ನಮ್ಮ ಬುದ್ಧಿ ಯೋರಿಗೆ ಇಂಗ್ಲೀಷು ಅಷ್ಟು ಬಂದಿರೋದಲ್ಲಾ ಬೇಕಾದರೆ ರೆವಿನ್ಯೂ ಕಮಿರ್ಷರು, ಕೌನ್ಸಿಲ್ಲರು, ಕೊನೆಗೆ ದಿವಾನ್ಗಿರಿ ಕೂಡ ಮಾಡೇ ಮಾಡೋ ಬುದ್ದಿ. ಏನು ಮಾಡೋದು ; ಕಲೀಲಿಲ್ಲ.”

” ಹಂಗಂತ ಅವರಿಗೇನಾ ಕಮ್ಮಿಯಾಗಿರೋದು ? ಈ ಸುತ್ತ ಮುತ್ತಲಿನಲ್ಲಿ, ಯಳಂದೂರು ಜಹಗೀರುದಾರನ್ನ ಬಿಟ್ಟರೆ, ಈ ಗತ್ತು, ಈ ಗಮ್ಮತ್ತು, ಯಾರಿಗುಂಟು ? ಅವರಿಗೆ ಇಂಗ್ಲೀಷ್ ಬಂದು ಅವರು ಅಧಿಕಾರ ಮಾಡಿದ್ದರೆ, ಅದು ನಮ್ಮ ಪುಣ್ಯಕ್ಕೆ ಆಯಿತಿತ್ತು.”

” ಈಗತಾನೇ ಏನಂತೆ ? ಇನ್ನೂ ಅವರಿಗೆ ಮುವ್ವತ್ತೋ ಮುವ್ವ ತ್ತೈದೋ ? ಈಗಲೂ ಕಲೀಬೇಕು ಅಂದರೆ ಬಹಳ ದೊಡ್ಡದಾ! ಅವರು ಮನಸ್ಸು ಮಾಡಲಿ. ಈ ಠಸ್ ಪುಸ್ ಹ್ಯಾಟ್ ಬೂಟ್ ಎಲ್ಲಾ ಒಂದೇ ವರುಷದಲ್ಲಿ ಕಲೀದಿದ್ದರೆ, ನನ್ನ ಹೆಸರು ಬೇರೆ ಇಡು.”

ಹೀಗೆ ಊರ ಅರಳಿಯ ಕಟ್ಟೆಯಮೇಲೆ ಎಲ್ಲರೂ ಎಳೆ ಬಿಸಿಲು ಕಾಯಿಸಿಕೊಳ್ಳುತ್ತ ಹರಟೆ ಹೊಡೆಯುತ್ತ ಕುಳಿತಿರುವಾಗ, ಕೆಂಪಿಯು ಅತ್ತ ಕಡೆ ನೀರಿಗೆ ಹರವಿ ತಕೊಂಡು ಹೊರಟಿದ್ದಳು. ಊರ ಗೌಡರೆಲ್ಲ ಕೂತಿರುವಾಗ ತಾನು ಬಿರುಬೀಸಾಗಿ ಹೊರಟರೆ ಆದೀತೆ ? ಮುಸುಕು ನೇರವಾಗಿ ತಲೆತುಂಬಾ ಹೊದೆದುಕೊಂಡು, ಸೆರಗು ಎಳೆದು ಕೊಂಡು ಮೈ ತುಂಬಾ ಹೊಡೆದುಕೊಂಡು, ತಲೆ ಬಗ್ಗಿಸಿಕೊಂಡು ಹೊರ ಟಳು. ಅಲ್ಲಿ ಅಡಕೆ ಹಾಕಿಕೊಂಡು ಹೊಗೆಸೊಪ್ಪು ತಿಕ್ಕುತ್ತ ಕುಳಿ ತಿದ್ದ ಗೌಡನೊಬ್ಬನು “ಏನು ಕೆಂಪಕ್ಕ, ನಿಮಗೂ ಪಯಣವಂತೆ ?” ಅಂದನು.

ಅವಳು ತನ್ನ ಸಂತೋಷವನ್ನು ಮುಚ್ಚಿಕೊಳ್ಳಲಾರದೆ, ಹೊರ ಸೂಸುವವಳಂತೆ ಮೊರದಗಲವಾಗಿರುವ ಮೊಕದ ತುಂಬಾ ನಗುವನ್ನು ಹಿಡಿತವಾಗಿ ನಗುತ್ತಾ, “ಏನೋ ಹಿರೀಕರ ಪುಣ್ಯ ನಿಮ್ಮ ಪಾದ. ನಿಮ್ಮೂರು ಬಂದು ಸೇರಿದೋ ; ನಿಮ್ಮ ಹೊಟ್ಟೆಯಲ್ಲಿ ಇಟ್ಟು ಕೊಂಡು ಕಾಪಾಡುತಿದೀರಿ.” ಅಂದು ಮುಂದೆ ಹೊರಟು ಹೋದಳು.

ಇನ್ನೊಬ್ಬನು “ಏನೇ ಅನ್ನು, ಮಾನವಂತೆ, ಹಲ್ಕಾಗಿಲ್ಕಾ ಅಲ್ಲ !” ಅಂದನು.

“ಅಂತಾ ಚೆಲ್ಲಾಟ ಆಡಿದ್ದರೆ, ನಮ್ಮೂರಲ್ಲಿ ನಿಲ್ಲಾಕೇ ಆಗುತಿರಲಿಲ್ಲ. ಒಂದೇ ದಿನ. ಓಡಿಸಿ ಬುಡುತ್ತಿದ್ದೊ! ಅದೂ ನಾಯ ಬುಟ್ಟು? ಅಂದ ಇನ್ನೊಬ್ಬ.

ಆ ಕೊನೆಯಲ್ಲಿ ಕೂತಿದ್ದವನ್ಕು “ಅವಳ ಮೊಕದ ಮೇಲೆ ಆ ರೂಪಾಯಗಲದ ಕುಂಕುಮ ಮೊಕದ ತುಂಬಾ ಅರತಿಣ, ನೋಡಿದರೆ, ಎಷ್ಟು, ಸಂತೋಷವಾಗುತ್ತದೆ ಅಂತೀಯಾ ?” ಅಂದೆ.

“ಎಲಾ! ಬಿಸಿಲಾಯಿತು. ಇನ್ನು ಹೊಲಗದ್ದೆ ಕಡೆ ನೋಡಿ ಕೊಂಡು ಬಸೋಕಿಲ್ಲವಾ? ಏಳೇಳಿ. ಹಗಲ ಮಾತು ಕೆಲಸ ಗೇಡು.”

ಎಲ್ಲರೂ ಎದ್ದು ಒದರಿಕೊಂಡು ಹೊರಟರು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...