Home / ಕವನ / ಕವಿತೆ / ಮುನಿಯನ್ ಮೊಕ್ಕ್ ಮೂರ್ ನೀರು

ಮುನಿಯನ್ ಮೊಕ್ಕ್ ಮೂರ್ ನೀರು

ಕೊಕ್ರೆ ಮೀನ್ಗೆ ವೊಂಚ್ ಆಕ್ದಂಗೆ
ಕಪ್ಪೇಗ್ ಆವು ಕಾಯ್ಕೊಂಡಂಗೆ
ನಿಂತ್ಕಂಡೌನೆ ಮುನ್ಯ!
ಯೆಂಡಾ ಮಾರೋ ಗೆಣ್ಯ!
ಕುಡಿಯೋರ್‍ನ್ ಇಡದಿ ಸುಲದಾಕೋಕೆ
ಮಡಗೌನ್ ಎಂಡದ್ ಮನೆಯ! ೧

ಕುಡಿಯೋರ್‍ಗ್ ಎಂಗಿದ್ರೇನು! ಬುಂಡೆ
ತುಂಬಿದರಾಯ್ತ್ ಅಂದ್ ಮುನ್ಯ ಯೆಂಡಕ್
ನೀರ್ ಗೀರ್ ಬೆರಸಿ ಮಾರಿ
ತೊಟ್ ತೊಟ್ಗೂನೆ ವೋರಿ
ಬಡವನ್ ಜೀತದ್ ಪುಡಿಕಾಸ್ನೆಲ್ಲ
ಕೆರಕೋಂತೌನೆ ಗೋರಿ! ೨

ಮೈಯಿನ್ ರಕ್ತ ನೀರ್ ಮಾಡ್ಕೊಂಡಿ
ಬೆವರಿನ್ ಮಳೇಲ್ ಕಾಸ್ ಕೆರಕೊಂಡಿ
ನೆಟ್ಗೆ ಬಂದ್ರೆ ಇಲ್ಗೆ
ಮೋಸಮಾಡ್ತ ಮೆಲ್ಗೆ
ಬತ್ಕೊಂಡ್ ಒಟ್ಟೇನ್ ಬಗದಿರಕೋಳೊ
ಡೊಳ್ಳೀನ್ ಆಕ್ಬೇಕ್ ಗಲ್ಗೆ! ೩

ಕೊಟ್ಟಿದ್ನೆ ಯಿಂದಕ್ ಕೊಟ್ಟೋನು
ಕೊಟ್ಟಿದ್ಕಿಂತ ಯೆಚ್ ಕೊಟ್ಟೋನು
ಮನ್ಸಾನೆ ಅಂತಂದ್ರೆ-
ದೇವ್ರೆ ಔನ್ ಅಂತಂದ್ರೆ-
ಕೊಟ್ಟಿದ್ನೂನೆ ಕೊಡದಿದ್ದೋನ್ಗೆ
ಯೆಸರ್ ಇಕ್ಕೋದೆ ತೊಂದ್ರೆ! ೪

ಕಾಸ್ ಈಸ್ಕೊಂಡಿ ಕಸ ಕೊಟ್ಟಿ
ದರ್‍ಮ ಗಿರ್‍ಮ ಮೂಲೇಗ್ ಇಟ್ಟಿ
ದುಡ್ ಕೂಡಾಕೋನ್ ಯಾರು?
ಬೋಗಳ ತಿನ್ನೋನ್ ಯಾರು?
ಎಲ್ಲಾರೂನೆ ಯೋಳಾದಂದ್ರೆ
‘ಮುನಿಯನ್ ಮೊಕ್ಕ್ ಮೂರ್ ನೀರು!’ ೫

ಯಿಂದ್ ಇಬೀಸ್ನ ಕೈ ಕೈ ಮುಗದಿ
ರಾವಣಂಗ್ ಏಳ ಕಡೇಗ್ ಉಗದಿ
ಅನ್ಯಾಯ ಬೇಡಾಂತ!
ನ್ಯಾಯಾನೆ ಮಾಡಂತ!
ತಿಳದೋನ್ ಮಾತ್ರ ಮೂಲೇಗ್ ಆಕ್ದೋನ್
ಗತಿ ಏನಾಯ್ತೂಂತ! ೬

ಬಡವನ್ ತಿನ್ನೊ ಸಿರಿಮಂತಮ್ಮ
ಮುನಿಯಂಗ್ ಅಕ್ಕ! ಇವನೆ ತಮ್ಮ!
ಮುನಿಯಂಗ್ ಅಕ್ಕನ ಚಾಳಿ
ಮನೇ ಮುರಿಯೋ ಗಾಳಿ!
ಯೋಳಿದ್ ಕೇಳ್ದಿದ್ರ್ ಯಾರ್‍ಗೇನಂತೆ?
ಎಕ್ಕ ವುಟ್ಟೋಗ್ಲೇಳಿ! ೭
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...