Home / ಕವನ / ಕವಿತೆ / ಗುಡಿಯಾ

ಗುಡಿಯಾ

ಗುಡಿಯಾ ಆಟದ ಗೊಂಬೆಯಲ್ಲ
ರಕ್ತ ಮಾಂಸ ತುಂಬಿದ ಜೀವಂತ ಗೊಂಬೆ
ದುಃಖಕ್ಕೊಂದೇ ಹಕ್ಕು ಪಡೆದವಳು ಗುಡಿಯಾ
ನೋವಿನ ಕಡಲು ಒಡಲಲಿಟ್ಟುಕೊಂಡು
ನಾಪತ್ತೆಯಾದ ಪತಿ ಮರಳಿ ಬರುವ
ಹಾದಿ ಕಾಯ್ದಳು ದೀರ್‍ಘ ಕಾಲದ ತನಕ
ಕನಸು ಹುಸಿಹೋಯ್ತು ರೆಪ್ಪೆ ಭಾರವಾಯ್ತು.
ಹನಿಹನಿ ಉದುರಿಸಿ ಕಣ್ಣ ಕಿಂಡಿ ಬರಿದಾಯ್ತು
ಕೊನೆಗೆ ವಿದಾ ಹೇಳಿ ಮನದ ಕದವಿಟ್ಟುಕೊಂಡಳು.
ಮೌನ ಕಡಲಿಗೆ ಮರುಮಾತಿಲ್ಲದೆ ಶರಣಾದಳು
ಈಜಿದಳು ಭಯಂಕರ ಅಲೆಗಳಿಗೆ ಎದುರಾಗಿ
ನಕ್ಕಿದ್ದೇಷ್ಟೋ! ಬಿಕ್ಕಿದ್ದೆಷ್ಟೋ! ವಿರಹ
ಹಾಡಿದ್ದೇಷ್ಟೋ ಹಲುಬಿದ್ದೇಷ್ಟೋ ಗೀತೆ.

ಹರಿಯರಾಣತಿಯಂತೆ ಮರುಮದುವೆಯಾದಳು
ವಿಧಿಗೆ ತಲೆಬಾಗಿದಳು ಪುಟ್ಟ ಗುಡಿಯಾ
ಹೊತ್ತುನಿಂತಳು ಇವನ ಫಲಭಾರ
ಹೊಸ ಬದುಕಿನ ಬಾಗಿಲಲ್ಲಿ ಗಸ್ತುನಿಂತಳು.
ಮರಳಿ ಬಂದಿದ್ದ ಮೊದಲ ಪತಿ ಆರೀಫ್
ಮೈ ಮನಗಳಲ್ಲಿ ತೌಫಿಕನ ಬೆಳಕಿನ ಚುಳಕ
ವಿಧಿಯಾಟಕ್ಕೆ ಬೇಸ್ತು ಬಿದ್ದಳು ಗುಡಿಯಾ
ಸಂಕೀರ್‍ಣ ಬದುಕಿಗೆ ಎರವಾದಳು.

ಮೂಡಿದ ಮಿಡಿಗೆ ಅಗಲಿಕೆಯ ಭಯವೆ?
ಜೇನ ಸುರಿಯುವ ಬೊಚ್ಚು ಬಾಯಿಯ ಕೂಸು
ಹೆತ್ತಮ್ಮನ ಗುರುತಿಸಿ ಕೇಕೆ ಹಾಕುವ ಮುನ್ನ
ಒದ್ದು ಅಮ್ಮನ ಎದೆ ಹಾಲು ಹೆಕ್ಕುವ ಮುನ್ನ
ಜಮಾತಿನ ತೀರ್‍ಮಾನ ಹೊರಬಿತ್ತು
“ಕರುಳ ಬಳ್ಳಿಯನ್ನು ಇವನಿಗೊಪ್ಪಿಸಿ
ಮರಳಿ ಹೋಗಬೇಕು ಅವನಲ್ಲಿಗೆ”
ತೀರ್‍ಮಾನ ಕೇಳಿದ ಮೀನಾರಿನ ಮೈಕು
ಅಲ್ಲಾಹು ಎಂದು ಮೌನವಾಯಿತು.

ಭೂಮಿ ಎದೆ ಬರಿಯುವಂತೆ ರೊದಿಸಿದ
ಗುಡಿಯಾಳ ಆರ್‍ತ ಬಿಕ್ಕುಗಳ ಶಬ್ದ
ತಟ್ಟಲಿಲ್ಲವೆ ಜಮಾತಿನ ಹೃದಯಕೆ?
ಭೂಮಿ-ಆಗಸಕೆ, ತಾಯಿ ಮಗುವಿಗೆ
ಹಾಕಬಹುದೇ ಬಹಿಷ್ಕಾರ?
ಕಂಪಿಸಿದ ಗುಬ್ಬಿ ಹೃದಯ ಹಾಲಹಲ
ಕ್ರೌಂಚ ಪಕ್ಷಿಯ ಮೌನ ರೋದನ
ತಟ್ಟಲಾರದೇ ಜಮಾತಿನ ಕಟ್ಟೆಗೆ?

ಹೆಣ್ಣಿನ ಮಾತೃತ್ವ ಆಟದ ವಸ್ತುವೇನೆ?
ನಿಷೇಧದ ಬೇಲಿಗಳ ಕಿತ್ತೆಸೆದು
ಸೊಕ್ಕಿದ ಕೊಕ್ಕುಗಳ ಕತ್ತರಿಸಿ
ಶಕ್ತಿ ಒಗ್ಗೂಡಿಸಿ ಹೊರಗೆ ಬಾ ಗುಡಿಯಾ
ಬದುಕು ಮಾಧ್ಯಮದ ವಿಷಯವಲ್ಲ
ಚಪ್ಪರಿಸುವ ಸುದ್ದಿಯಲ್ಲ.
ಎದ್ದು ಹೇಳುಬಾ ನಿನ್ನದೇ ನಿರ್‍ಧಾರ.
ಕಿಕ್ಕಿರಿದ ಜಮಾತಿನ ಮಧ್ಯೆ
ಸಿಕ್ಕಲಾರರೇ ಒಬ್ಬರಾದರೂ ಸಂತರು
ನಿನ್ನ ನೋವ ಕರಗಿಸಿ
ಸಂತೈಸುವ ಪೈಗಂಬರರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...