Home / ಕವನ / ಕವಿತೆ / ಒಂದು ಸಾವಿನ ಸುತ್ತ

ಒಂದು ಸಾವಿನ ಸುತ್ತ

ಪತ್ರಿಕೆಗಳು ಸುದ್ದಿ ಮಾಡಿದವು
ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು
ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ
ರಾತ್ರಿ ಕತ್ತಲೆಯಲಿ ನಡದೇ ಹೋಯ್ತು
ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ
ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ
ಮೆಟ್ರೋ ಮಹಿಳೆಯರ ಮೈಯಲ್ಲಿ ನಡುಕ.

ಜಾಗತಿಕ ಗ್ರಾಹಕರ ನೇರ ಸಮರ್‍ಪಕ
ಕಾಲ್‌ ಸೆಂಟರ್‌ಗಳ ಲೋಕ ಭಾವನಾತ್ಮಕ
ಹೈಟೆಕ್ ಸಂಸ್ಕೃತಿಗಳ ಹಿಂದೆ ಅಡಗಿರುವ
ನೂರಾರು ಗೈರತ್ತು-ಶಿಸ್ತಿನ ಕೊಕ್ಕುಗಳು
ದಾಟಲಾಗದು ಡೆಡ್‌ಲೈನ್‌ಗಳು
ಜೀವ ಹೋದರೂ ಸರಿಯೇ
ಹೊತ್ತಲ್ಲದ ಹೊತ್ತಿನಲ್ಲಿ ನಿರಂತರ ದುಡಿತ
ಮಾನಸಿಕ ಒತ್ತಡ, ರಕ್ಷಣೆ ಕೇಳಿದರೆ
ಕೆಲಸ ಹೋಗುವ ಭಯ
ದುಡಿಯಲೇಬೇಕಿದೆ ಹೊಟ್ಟೆಪಾಡಿದೆಯಲ್ಲ?
ಸಮಾನತೆಯ ಸೂತ್ರದಲ್ಲಿ ಬಂಧಿಸಿಯಾಗಿಸಿ
ಅವಳನು ಆಪತ್ತಿನ ಬಾಯಿಗೆ ದೂಡುವುದೇಕೆ?
ಜೀವನದಿಯಾಗಿ ತುಂಬಿ ಹರಿದವಳು
ಕರ್‍ಮ ಕಾಂಡಗಳ ಸಹಿಸಿ ಬತ್ತಬೇಕೇಕೆ?
ಸೂರ್‍ಯಶಿಕಾರಿಗೆ ಹೊರಟವಳ
ದಾರಿಗೆ, ಅಡ್ಡಗೋಡೆಗಳ ಒಡ್ಡುವುದೇಕೆ?
ಎಲ್ಲ ಸಾದಿಸಲು ಹೊರಟವಳಿಗೆ
ಇಲ್ಲವಾಗಿಸುವ ಹುನ್ನಾರವೇಕೆ?
ಅವಳ ಶ್ರಮ ಕಂಪನಿಗಳ ಲಾಭಕ್ಕಲ್ಲವೇ?
ಇರಲಿ ನಮ್ಮವನೇ ಚಾಲಕ ನಮ್ಮದೇ ಕಂಪನಿ
ವಿದೇಶಿಯರ ಲಾಭಕ್ಕೆ ಇನ್ನೆಷ್ಟು ಬಲಿಗಳು?
ಕತ್ತಲೆಯ ಗೋರಿಯಿಂದ ಎದ್ದು ಬಾರಮ್ಮ
ಅವರ ಪಾತಕದ ಒಂದೊಂದು ಬಿಲ್ಲೆಯ
ಲೆಕ್ಕವನೂ ಬಿಡದೇ ಕೇಳು ಬಾರಮ್ಮ
ಇಲ್ಲವಾದರೆ ಹೆಣ್ಣಗಳು ಹೇಗೆ ದುಡಿದಾರು?
ಭೂಮಿ ಮೇಲೆ ತಮ್ಮ ತುತ್ತನ್ನು
ತಾವು ಹೇಗೆ ಗಳಿಸಿಯಾರು?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...