Home / ಕವನ / ಕವಿತೆ / ಕಂಡಿದ್ದೇನೆ ನಾನು

ಕಂಡಿದ್ದೇನೆ ನಾನು

ಧರ್‍ಮದ ಠೇಕೇದಾರರಿಂದ
ಭೂಮಿಯ ಮೇಲೆ ದೆವ್ವದ ಕುಣಿತ
ನೋಡಿದ್ದೇನೆ ನಾನು!
ಗುಜರಾತಿನ ನರಮೇಧದಲ್ಲಿ
ಮನುಷ್ಯತ್ವದ ಕತ್ತು
ನಾಚಿಕೆಯಿಂದ ಕೆಳಗಾಗಿದ್ದನ್ನು
ಕಂಡಿದ್ದೇನೆ ನಾನು!
ಧರ್‍ಮ ರಾಜಕೀಯದಲಿ ಅಧರ್‍ಮದ
ಕತ್ತಿ ಝಾಳಪಿಸಿದ ಗುಜರಾತನು
ಕಣ್ಣಾರೆ ಕಂಡಿದ್ದೇನೆ ನಾನು!
ತುಂಬು ಗರ್‍ಭಿಣಿಯ ಹೊಟ್ಟೆಸೀಳಿ
ಹೊರ ತೆಗೆದ ಮಗುವಿಗೆ
ಚುಚ್ಚಿ ಚುಚ್ಚಿ ಸಾಯಿಸಿದ ಪಾತಕಿಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು
ಗುಜರಾತಿನ ರಾಜಬೀದಿಗಳಲ್ಲಿ
ಮಾನಿನಿಯ ಮಾನ ಹರಜಾದದ್ದನ್ನು
ಕಂಡಿದ್ದೇನೆ ನಾನು
ಯುವಕ, ಮುದುಕ, ಮಹಿಳೆಯರ
ರಕ್ತದ ಹೊಳೆ ಹರಿಸಿದ್ದನ್ನು
ಕಂಡಿದ್ದೇನೆ ನಾನು
ದೇಶ ವಿಭಜನೆಯಾದಾಗ
ತಾಪಿ, ನರ್‍ಮದೆಯ ಅಲೆಗಳಲ್ಲಿ
ತೇಲಿ ಹೋಗುತ್ತಿರುವ ಹೆಣಗಳನ್ನು
ಕಣ್ಣಾರೆ ಕಂಡಿದ್ದೇನೆ ನಾನು

ಸಾಯುವಾಗಿನ ನೋವಿನ ಆರ್‍ತನಾದ
ರಕ್ಷಕರ ಎದುರಿನಲ್ಲೇ ಬಿಕ್ಕುತ್ತಿರುವ
ಮನುಷ್ಯತ್ವದ ಕಂಡಿದ್ದೇನೆ ನಾನು
ಗುಜರಾತಿನ ಗಲ್ಲಿಗಳಲ್ಲಿ
ಸುಟ್ಟು ಕರಕಲಾಗುತ್ತಿರುವ
ಮನುಷ್ಯತ್ವ ಕಣ್ಣಾರೆ ಕಂಡಿದ್ದೇನೆ ನಾನು.

ಲೋಕವೇ ಕಣ್ಣಾರೆ ಕಂಡಿದೆ
ಗುಜರಾತಿನಲಿ ಕರಗಿ ಹೋದ
ಮಾನವೀಯತೆಯ ಚಿಗುರುಗಳ
ಅವನ ಅಂತ್ಯದ ದಿನಗಳಲಿ
ಕಟಕಟೆಯಲ್ಲಿ ನಿಲ್ಲಿಸಿ ಕೇಳುವೆ
ನಿರಪರಾಧಿಗಳ ರಕ್ತ ಹರಿಸಿದ್ದಕ್ಕೆ
ನಿನಗೆ ದೊರಕಿದ್ದಾದರೂ ಏನು?
ನಿನ್ನ ರಾಮನಿಗೆ ತೋರಿಸುವುದಕೆ
ನಿನಗೆ ಮುಖವಾದರೂ ಇದೆಯೇ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...