Home / ಕವನ / ಕವಿತೆ / ಮಿಲೆ ಸುರ್ ಮೇರಾ ತುಮ್ಹಾರಾ

ಮಿಲೆ ಸುರ್ ಮೇರಾ ತುಮ್ಹಾರಾ

ಗಾನ ಗಂಧರ್‍ವ ಸೃಷ್ಟಿಸಿದ
ಸಂಗೀತ ಲೋಕದಲ್ಲಿ ಎದ್ದೆದ್ದು
ಬಡಿದ ಘನ ಗಂಭೀರ
ಸಮುದ್ರದಲೆಗಳು ಸ್ಥಬ್ಧವಾಗಿವೆ.

ಮಿಲೆ ಸುರ್ ಮೇರ್ ತುಮ್ಹಾರಾ
ತೊ ಸುರ್ ಬನೇ ಹಮಾರಾ
ಭಾರತವನ್ನೊಂದುಗೂಡಿಸಿದ ತತ್ವ
ಎಂತಹ ಮೋಡಿ ಆ ಗಾರುಡಿಗನದು?

ರೋಣದ ನೆಲದಲ್ಲಿ ಹುಟ್ಟಿದ
ಭಾರತ ರತ್ನದ ಧ್ವನಿಗೆ
ಬೇರೆ ಸರಿಸಾಟಿ ಬೇಕೆ?
ತನ್ನ ಧ್ವನಿಗೆ ತಾನೇ ಒಡೆಯ.

ನಾದ ದೇವತೆಯನು ನಂಬಿ
ಭಾಗ್ಯದ ಲಕ್ಷ್ಮೀಯನ್ನು ಕರೆದು
ಲೀನವಾದ ನಾದ ಬ್ರಹ್ಮ
ದೇಶದಲಿ ಆತ್ಮಸಾಕ್ಷಿ ಬಿಂಬಿಸಿದ
ತಕರಾರಿಲ್ಲದ ಸೌಜನ್ಯವಂತ ಸಂತ.

ಸುಡುಬಿಸಿಲಲಿ ಬರಿಗಾಲಿನ
ನಡಿಗೆ, ಗುರುಮನೆಗೆ ನೀರುಹೊತ್ತು
ಸಂಗೀತ ಕಲಿತ ಆ ಭೀಮ
ಶರೀರ ವೃದ್ಧವಾದರೇನಂತೆ
ಗಾಯಕನಿಗೆ ವೃದ್ಧಾಪ್ಯವಿಲ್ಲ.

ಬಡಕಲು ಶರೀರದ ಭೀಮ
ನಾದಬ್ರಹ್ಮನ ಕಿರುಣಾ ಘರಾಣಾ
ಭಾವಕ್ಕೆ ದನಿ ತುಂಬಿದ ಅಮರ ಕಾವ್ಯ
ಪರವಶಗೊಳಿಸಿದ ಬಂದಿಶ್ ಮಾಂತ್ರಿಕ.

ನಾದದಲಿ ಭೀಷ್ಮ ಪಿತಾಮಹ
ಸಂಗೀತ ಲೋಕದ ತಾನಸೇನ
ಭೈರವಿ ಹಾಡಿ ಬದುಕಿಗೆ ವಿದಾಯ
ಹೃದಯದಲಿ ನೆಲೆ ನಿಂತವನು
ಗಡಿಗಳ ಸಿಮೋಲ್ಲಂಘನ.

ಮರೆಯದ ಮಾಣಿಕ್ಯದ ಕಣ್ಮರೆ
ನಾದ ಲೋಕವೊಂದರ ಯುಗಾಂತ್ಯ
ಮಾಧುಟ್ಯ ಸೂರ್‍ಯನ ಅಂತ್ಯ
ಸಾಧನೆಗೆ ಸೀಮೆಗಳ ನಿರ್‍ಬಂಧವಿಲ್ಲ
ಗಾಯನಶಾಶ್ವತ, ದೇಹ ನಶ್ಚರ.

ಮೌನವಾಗಿ ಲೀನವಾಗಿದೆ
ಹಿಮಾಲಯದ ಮೇರು ಶಿಖರ.
ಸೂರ್‍ಯ ಅಸ್ತಂಗತನಾದ ಸುದ್ದಿ ಕೇಳಿ
ಅಲ್ಲಾಡದೇ ನಿಂತಿವೆ ನೋಡು
ಗಿರಿ, ಶಿಖರ, ಗಾಳಿ, ನದಿ, ಲೋಕ
ಸಾವು ನಿಶ್ಚಿತ, ಧ್ವನಿ ಅಮರ.
*****
(ಭೀಮ್‌ ಸೇನ್ ಜೋಶಿಯವರು ನಿಧನರಾದ ಸಂದರ್‍ಭ)

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...