Home / ಕಥೆ / ಆತ್ಮ ಕಥೆ / ಕಾಡುತಾವ ನೆನಪುಗಳು – ೧೪

ಕಾಡುತಾವ ನೆನಪುಗಳು – ೧೪

“ನೀವೇನೂ ಹೆದರೋದು ಬೇಡಾ. Stomach Wash ಕೊಟ್ಟಿದ್ದೇವೆ. ಎಲ್ಲಾ ಮಾತ್ರೆಗಳು ಹೊರಬಂದಿವೆ…”

“ನಮ್ಮ ಹುಡುಗ ಆಗ ಹೋಗಿರದಿದ್ದರೆ ಅಪಾಯವಾಗುತ್ತಿತ್ತು”.

“ಮುಂದಿನ ವಾರ Tubetemy Camp ಇತ್ತು. ಅದಕ್ಕೆ ಇವರ ಸಹಿ ಮಾಡಿಸಿಕೊಳ್ಳಲು ಹೋಗಿದ್ದ. ಹೀಗಾಗಿ ಈ ವಿಷಯ ತಿಳಿದಿತ್ತು. ಡ್ರಿಪ್ಸ್ ಮುಗಿದ ನಂತರ ಮನೆಗೆ ಕರೆದುಕೊಂಡು ಹೋಗಿ… ಒಂದೆರಡು ದಿನ ವಿಶ್ರಾಂತಿ ತೆಗೆದುಕೊಂಡರೆ ಸಾಕು…”

ಎನ್ನುತ್ತಾ ಹಣೆಯನ್ನು ತಟ್ಟಿ ನನ್ನನ್ನು ಮಾತನಾಡಿಸುವ ಪ್ರಯತ್ನ ನಡೆಸಿದ್ದರು. ನಾನು “ಆಂ…? ಹೂಂ…” ಎಂದು ಪ್ರತಿಕ್ರಿಯೆ ನೀಡುತ್ತಿದ್ದೆ. ನಂತರ ನನ್ನನ್ನು ಕಾರಿನಲ್ಲಿ ಕರೆದುಕೊಂಡು ಮನೆ ತಲುಪಿಸಿದ್ದರು. ನಾನು ಸತ್ತಿರಲಿಲ್ಲವೆಂಬುದು ತಿಳಿದಿತ್ತು…!

ಅವ್ವನಿಗೆ ಹೇಳಿ ಕಳುಹಿಸಿದ್ದರೂಂತ ಕಾಣುತ್ತೆ. ಅವ್ವ ನನ್ನ ಆರೈಕೆಗೆ ಪಕ್ಕದಲ್ಲಿಯೇ ಇದ್ದಳು. ಅರ್ಧ ನಿದ್ದೆ ಅರ್ಧಮಂಪರು. ಗಂಜಿ ಕುಡಿಸುತ್ತಿದ್ದಳು, ಎಳೆನೀರು ಕುಡಿಸುತ್ತಿದ್ದಳು. ನನಗೆ ಪೂರ್ತಿ ಎಚ್ಚರವಾಗಿದ್ದು ರಾತ್ರಿಯೇ. ಅವ್ವ ಗಂಭೀರವಾಗಿ ನನ್ನ ಪಕ್ಕದಲ್ಲಿ ಕುಳಿತಿದ್ದಳು. ಊರಿಗೆ ಕರೆದುಕೊಂಡು ಹೋಗಿರಲಿಲ್ಲ. ಮರುದಿನ ಬೆಳಿಗ್ಗೆ ಸಂಪೂರ್ಣವಾಗಿ ಎಚ್ಚರವಾಗಿತ್ತು.

“ಯಾಕೆ ಹೀಗ್ ಮಾಡ್ಕೊಂಡೆ?” ಅವ್ವನ ಗಂಭೀರ ಪ್ರಶ್ನೆ.

“…..”

“ನಂಗೆ ನಿನ್ನಾಟ ಅರ್ಥವಾಗ್ತಿದೆ”.

“ಯಾರವನು? ಎರಡು ತಿಂಗಳಿಂದ ಓಡಾಟ, ಚೆಲ್ಲಾಟ ನಡೆಸಿದ್ದು ನನಗೆ ತಿಳಿದಿದೆ…”

“…..”

“ಹೀಗೆ ಮಾಡೋ ಬದ್ಲು ಮದ್ದೇನೇ ಮಾಡೋಬಹುದಿತ್ತು…

“…..”

“ನಿನ್ನನ್ನು ಗಂಡು ಹುಡುಗಾಂತ ಅಂದ್ಕೊಂಡ್ ತಪ್ಪು ಮಾಡಿಬಿಟ್ಟೆ, ಎಲ್ಲಾ ನನ್ನ ಕರ್ಮ. ಆಡ್ಕೊಳ್ಳರ ಮುಂದೆ ಹಡೆದ ಹಾಗಾಗಿದೆ ನಮ್ಮ ಪರಿಸ್ಥಿತಿ…”

ನನ್ನ ಕಣ್ಣುಗಳಿಂದ ನೀರು ಹರಿಯತೊಡಗಿತ್ತು.

“ಈ ಸ್ಥಿತೀನಾ ಮನೆ ಮಕ್ಕಳು ನೋಡ್ತಾರ್ದೂಂತ ಇಲ್ಲಿಗೇ ಕಕ್ಕೊಂಡು ಬಂದೆ. ನನ್ನ ಕನಸುಗಳನ್ನು ನೀರಿನಲ್ಲಿ ಕದಡಿ ರಾಡಿ ಮಾಡ್ಬಿಟ್ಟೆ. ನೀನಿದ್ದರೂ ಒಂದೇ ಸತ್ತರೂ ಒಂದೇ…” ಅವ್ವನ ಕಂಠ ಗದ್ಗದವಾಗಿತ್ತೆನಿಸಿತ್ತು. ಅವ್ವನತ್ತ ನೋಡಿದ್ದೆ.

“ನೀನು ಈಗ ಸತ್ತು ಹೋಗದೇ ಇರಬಹುದು. ನನ್ನ ಪಾಲಿಗೆ ಇವತ್ತಿನಿಂದ ನೀನು ಸತ್ತು ಹೋದೇಂತಾ ಅಂದ್ಕೋ…”

ಅಲ್ಲಿಗೆ ನನ್ನ ತವರು ಮನೆಯ, ಅವ್ವನ ಸಂಬಂಧ ಕಡಿದ ಹಾಗೇ ಆಗಿತ್ತು. ಅವ್ವ ಹಠಮಾರಿ ಹೆಣ್ಣಾಗಿದ್ದಳು. ಆಕೆಗೆ ‘Will Power’ ಜಾಸ್ತಿಯಿತ್ತು. ಆದರೆ Reasoning ಅಂದರೆ ‘ಅರ್ಥೈಸಿಕೊಳ್ಳುವ ಬಗ್ಗೆ’ ಅರಿವಿರಲಿಲ್ಲ. ತಿಳಿದವರು ಹೇಳಿದರೂ ಆಕೆ ಕೇಳುತ್ತಿರಲಿಲ್ಲ. ತನ್ನದೇ ಸರಿ ಎನ್ನುವ ಮೊಂಡುವಾದ, ಹಠಮಾರಿತನ. ಇದೆಲ್ಲವೂ ನನಗೆ ಗೊತ್ತಿತ್ತಾದುದರಿಂದ ಏನೂ ಮಾತನಾಡದೇನೇ ಮೌನವಹಿಸಿಬಿಟ್ಟಿದ್ದೆ.

ನೋಡು, ಸಾವಿಗೂ ನನ್ನಂತಹ ಅಪವಿತ್ರಳ ಬಳಿಗೆ ಬರಲು ಅಸಹ್ಯವಾಗಿತ್ತು ಎಂದುಕೊಂಡು ಅತ್ತಿದ್ದೆ. ಅಷ್ಟು ಹೆಚ್ಚು ಜನರಿಗೆ ನನ್ನ ಆತ್ಮಹತ್ಯೆಯ ಯತ್ನ ಮತ್ತು ಅದಕ್ಕೇ ಕಾರಣದ ಬಗ್ಗೆ ಗೊತ್ತಾಗಿರಲಿಲ್ಲವೆಂದು ಕೊಂಡಿದ್ದೆ. ಆದರೆ, ನಾನು ಕೆಲಸ ನಿರ್ವಹಿಸುತ್ತಿದ್ದ ಆಸ್ಪತ್ರೆಯಲ್ಲಿ ಕೆಲವು ದಿನಗಳು ‘ಗುಸು…’ ‘ಗುಸು…’ ಮಾತನಾಡಿ ಸುಮ್ಮನಾಗಿಬಿಟ್ಟಿದ್ದರು. ಅಲ್ಲಿ ನನಗಾಗುತ್ತಿದ್ದ ಅವಮಾನ, ನೋವುಗಳಿಗೆ ನೊಂದು ಆ ರೀತಿ ಮಾಡಿಕೊಂಡಿದ್ದೆ ಎಂದು ಭಾವಿಸಿದ್ದರು. ಆದರೂ ಕೆಲವರಿಗೆ ‘ಆ ವ್ಯಕ್ತಿ…’ಯೊಡನೆಯಿದ್ದ ಸಂಪರ್ಕ ತಿಳಿದಿತ್ತು. ಅವಮಾನಗಳಿಗೆಲ್ಲಾ ಹೀಗೆ ಮಾಡಿಕೊಳ್ಳುವ ಪ್ರಾಣಿ ಇದಲ್ಲವೆಂದು ಗೊತ್ತಿತ್ತು…!

ಮುಂದಿನ ದಿನಗಳಲ್ಲಿ ಆಸ್ಪತ್ರೆಯ ಕೆಲಸಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೆ. ಕ್ಯಾಂಪ್‌ಗಳಿಗೆ ಹೋಗಿ ಶಸ್ತ್ರ ಕ್ರಿಯೆಗಳನ್ನು ಮಾಡಿಬರುತ್ತಿದ್ದೆ. ಹೆಚ್ಚಿನ ಕೆಲಸಗಳನ್ನು ಮೈಗಚ್ಚಿಕೊಂಡಿದ್ದೆ. ಆದರೆ ಮನೆಗೆ ಬಂದ ನಂತರ, ಆ ರಾತ್ರಿಗಳು ನನ್ನ ಬದುಕನ್ನು ‘ಅಸಹ್ಯ…’ಗೊಳಿಸಿದ ದಿನಗಳಿಂದ ಮನ ನೋಯುವಂತೆ ಮಾಡುತ್ತಿದ್ದವು. ಹೀಗಿರಲೊಂದು ದಿನ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ನನ್ನನ್ನು ಸುಮ್ಮನೆ ಬಿಡಬಾರದೆಂದು ‘ವಿಧಿ’ ಸಂಚು ಹೂಡಿತ್ತು. ನಾನು ಯಾರ ನೆನಪು ಬೇಡವೆಂದುಕೊಂಡು ಮರೆಯಲು ಪ್ರಯತ್ನಿಸುತ್ತಿದ್ದೆನೋ ಆ ವ್ಯಕ್ತಿಯ ಅಣ್ಣ ಅತ್ತಿಗೆ, ಜೊತೆಗೆ ಅವನ ತಮ್ಮನನ್ನು ನನ್ನ ಬಳಿಗೆ ಕಳುಹಿಸಿತ್ತು. ಆತನ ಅಣ್ಣ ಆಯುರ್ವೇದದಲ್ಲಿ ವೈದ್ಯಕೀಯ ಶಾಸ್ತ್ರ ಮುಗಿಸಿದ್ದ. ಆತನ ಊರಿನಲ್ಲಿ Practice ಮಾಡಲು, ಹಣ ಸಂಪಾದಿಸಲು ಸಾಧ್ಯವಾಗುತ್ತಿರಲಿಲ್ಲವಂತೆ, ದೂರದೂರಿನಲ್ಲಿ ‘ಕ್ಲಿನಿಕ್’ ತೆಗೆದು ಹಣ ಸಂಪಾದಿಸಲು ಬಂದಿದ್ದರು. ಅದಕ್ಕೆ ನನ್ನ ಸಹಾಯ ಕೋರಿದ್ದರು. ಹತ್ತಿರದ ಯಾವುದಾದರೊಂದು ಹಳ್ಳಿಯಲ್ಲಿ ‘ಕ್ಲಿನಿಕ್’ ತೆರೆಯಲು ಸಹಾಯ ಕೇಳಿದ್ದರು. ನನಗೆ ನಿರಾಕರಿಸಲಾಗಿರಲಿಲ್ಲ. ಪಕ್ಕದ ಹಳ್ಳಿಯೊಂದರ ಊರ ಗೌಡರ ಬಳಿ ಮಾತನಾಡಿ ಅಲ್ಲಿಯೇ ಕ್ಲಿನಿಕ್ ಮತ್ತು ವಾಸವಾಗಿರಲು ಮನೆಯೊಂದನ್ನು ಕೊಡುವಂತೆ ಕೇಳಿಕೊಂಡಿದ್ದೆ. ತಮ್ಮ ಹಳ್ಳಿಗೊಬ್ಬ ವೈದ್ಯ ಬರುತ್ತಾನೆಂದು ಅವರಿಗೂ ಸಂತೋಷವಾಗಿತ್ತು. ಆಗಾಗ್ಗೆ ನಾನೂ ಸಹ ‘Consultant’ ಆಗಿ ಬರುತ್ತೇನೆಂದು ಹೇಳಿದ ನಂತರ ಅವರಿಗೆ ಸಮಾಧಾನವಾಗಿತ್ತು. ಹಾಗೆಯೇ ಮೊದಲು ಹೋಗಿಬರುತ್ತಿದ್ದೆ ಕೂಡಾ. ನಂತರದ ದಿನಗಳಲ್ಲಿ ಸಾಧ್ಯವಾಗದೇ ಬಿಟ್ಟುಬಿಟ್ಟೆ. ಆಸ್ಪತ್ರೆಯ ಕೆಲಸಗಳು ಹೆಚ್ಚಾಗಿದ್ದವು ಮತ್ತು ಅವರಿಗೂ ಆ ಹಳ್ಳಿಯಲ್ಲಿ ‘Practice’ ಸುಗಮವಾಗಿ ಮುಂದುವರೆದಿತ್ತು. ಅತಿ ಹೆಚ್ಚಿನ ಕೆಲಸಗಳಿಂದ ನಾನು ಒಮ್ಮೊಮ್ಮೆ ಬಳಲುತ್ತಿದ್ದೆ. ಆದರೆ ಆ ಬಳಲಿಕೆಯಿಂದ ನನಗೆ ನಿದ್ದೆ ಬರುತ್ತಿತ್ತು ಎಂಬುದನ್ನು ಮನಗಂಡಿದ್ದೆ. ತಮಗೆ ತಿಳಿಯದ ರೋಗಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸುತ್ತಿದ್ದರು… ಹೀಗಾಗಿ ಅವರಿಗೆ ಆ ಹಳ್ಳಿಯಲ್ಲಿ ಒಳ್ಳೆಯ ಹೆಸರೂ ಬಂದಿತ್ತು. ನಾನು ಹೆಚ್ಚಿನದೇನನ್ನು ಕೇಳುತ್ತಿರಲಿಲ್ಲ. ವೃತ್ತಿ ಬದುಕಿನಲ್ಲಿ ಎಷ್ಟು ಬೇಕೋ ಅಷ್ಟು ಎಂಬಂತಿದ್ದೆವು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...