Home / ಕವನ / ಕವಿತೆ / ಹುಲ್ಲು ಗರಿಕೆಯ ಆಸೆ

ಹುಲ್ಲು ಗರಿಕೆಯ ಆಸೆ

ರಕ್ತ ಸಿಕ್ತ ಕರ್‍ಬಲಾದ ಬೀದಿಗಳೇ
ನಿಮ್ಮೆದೆಯ ಕದವ ತೆರೆದು ಮಾತಾಡಿಸಿ
ಗಲೀಫ್ ತೊಟ್ಟ ಕಲ್ಲು ಗೋರಿಯಾಗಿಸದಿರಿ
ನಿಮ್ಮ ಮನೆ ಬಾಗಿಲಿಗೆ ಬಂದಿರುವೆನು.
ನಿಮ್ಮ ಮನೆ ಮುಂದೆಯೇ ರಕ್ತ ರಣರಂಗವಾಗುವಾಗ,
ನೀವೇಕೆ ಪ್ರತಿಭಟಿಸಲಿಲ್ಲ ಮಾತಾಡಿ ಮೀನಾರುಗಳೇ.
ನಿಮ್ಮ ಬಾಗಿಲ ಮುಂದೆಯೇ ಮನುಷ್ಯತ್ವದ
ಕೊಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವಾಗ
ನೀವೇಕೆ ಸುಮ್ಮನಿದ್ದೀರಿ ಹೇಳಿ ಮಂದಿರದ ಗೋಪುರಗಳೇ
ಕೊಲೆಯಾಗಿ ಬಿದ್ದ ಶವರಾಶಿಯಲ್ಲಿ
ಜಾತಿ ಹೆಕ್ಕುವವರನು ನಡುಬೀದಿಯಲಿನ ನಿಲ್ಲಿಸಿ ಕೇಳುವೆ
ಕೊಲೆಗಡುಕರೇ ವಿಶ್ವದ ಕಳಂಕಿತರೇ
ಮಂದಿರ, ಮಸೀದಿಯಲಿ ಕದನಕ್ಕೆ ಕಾಲುಕೆದರುವವರೇ,
ದೇಶಭಕ್ತಿಯ ಸೋಗಿನಲಿ ಮುಂದೆ ಬಂದವರೇ
ಹಾಡುಹಗಲೇ ನಿಮ್ಮ ಸೋದರಿ ವಿಧವೆಯಾದುದಕ್ಕೆ
ಧನದಾಹದ ಬೆಂಕಿಯಲ್ಲಿ ಬೆಂದುಹೋದುದಕ್ಕೆ
ದೇಗುಲ ಸಂಸ್ಕೃತಿಗೆ ತಳಪಾಯ ಹಾಕಿದುದಕ್ಕೆ
ಹೆಣ್ಣುಗಳ ಸಾಯಿಸಿ, ಹೊಟ್ಟೆ ಹೊರೆಯುತ್ತಿರುವುದಕ್ಕೆ
ಅವಳ ‘ಸತಿ’ ಗುಡಿಯ ಜೀರ್‍ಣೋದ್ಧಾರದ ಬಗ್ಗೆ
ಎಚ್ಚರ! ಸತಿಯಾದ ಗುಡಿಯ ಕಲ್ಲುಗಳೇ ಕೇಳುತ್ತವೆ
ಮುಂದೊಂದು ದಿನ ನಿಮ್ಮ ಕರ್‍ಮಕಾಂಡದ ಲೆಕ್ಕ
ಅವಳ ಖಾತೆ ಪುಸ್ತಕದಲ್ಲಿ ಬರೆದು
ನಿಮ್ಮನು ಕೋರ್‍ಟಿಗೆ ಎಳೆಯುತ್ತಾಳೆ.
ನಿಮ್ಮ ಮೇಲಿನ ಆರೋಪಪಟ್ಟಿ ಸಿದ್ಧಪಡಿಸುತ್ತಾಳೆ.
ದಾಸ್ತಾವೇಜುಗಳು ಸಾಬೀತಾದ ದಿನ
ಲೋಕದ ಜೈಲಿನ ಗೋಡೆಗಳು ಸಾಕಾಗಲಾರವು
ನಿಮ್ಮನ್ನು ಕೂಡಿ ಹಾಕಲು.
ನಿಮ್ಮ ಪಾಪದ ಬೆಳೆ ಬಾನೆತ್ತರಕ್ಕೆ ಬೆಳೆದು
ಬಹುದೂರ ನಿಮ್ಮ ಮೋಕ್ಷದ ದಾರಿ.
ಕಾವೇರಿ, ಗಂಗೆ, ತುಂಗೆ ಯಮುನೆಯರು
ಸಾಕಾಗುವುದಿಲ್ಲ ನಿಮ್ಮ ಪಾಪ ತೊಳೆಯಲು.
ಕಾವಿಗಳೆದೆಯಲ್ಲಿ ಮುಚ್ಚಿಟ್ಟ ಕೋವಿಗಳೇ
ಮಂದಿರ – ಮಸೀದಿಗಳಲ್ಲಿ ಅಡಗಿಸಿಟ್ಟ ಬಂದೂಕುಗಳೇ,
ಮದ್ದು ತುಂಬಿದ ಕುಂಡ ಕಮಂಡಲಗಳೇ,
ಆಧ್ಯಾತ್ಮದ ಗುಹೆಯಲ್ಲಿ ಮೊಳಕೆಯೊಡೆಯಲಾರಿರಿ
ಕಣ್ಣ ಬಿಂಬದ ತುಂಬ ವಸಂತ ಮೂಡಿಸಲಾರಿರಿ
ಹಸಿದ ಹೊಟ್ಟೆಗೆ ರೊಟ್ಟಿಯಾಗಲಾರಿರಿ
ಮಂತ್ರದುಗುಳಿನಲಿ ತೇಜಾಬು ಬೆರಸಿ
ಗರ್‍ಭಗುಡಿಯಲಿ ಒಳಸಂಚು ನಡೆಸಿ,
ವ್ಯಾಪಾರ ವಹಿವಾಟು ಕುದುರಿಸಲಾರಿರಿ
ಖಾದಿ, ಖಾಕಿ, ಕಾವಿಗಳಿಗೆ
ಅರ್‍ಪಿತ ದೆಹಲಿಯೆಂಬ ಬೆಲೆವಣ್ಣು
ಡಿಸೆಂಬರ್ ಆರು ಬಂತೆಂದರೆ ನಡುಗುತ್ತಾಳೆ
ಬಾಬ್ರಿ ಮಸೀದಿ ನೆಲಕ್ಕುರುಳಿ
ಇತಿಹಾಸದಲ್ಲಿ ಕಪ್ಪಾದ ಆ ದಿನ
ಗುಮ್ಮಟ ಉರುಳಿದ ದಿನ
ಜಟಕಾ ಬಂಡಿ ಸುಟ್ಟು ಹೋದ ದಿನ
ಕೂಲಿ ಬಡವರು ಕರಕಲಾದ ದಿನ
ಸಂಸ್ಕೃತಿಯೆಂಬ ಮಂತ್ರ ಉಗುಳುವ ನೀವು
ಸೌಹಾರ್‍ದ ಸಂಪತ್ತನು ಲೂಟಿ ಮಾಡಿದ ದಿನ
ಗಣಿ ಧೂಳಿನಲ್ಲಿ ಉಸಿರುಗಟ್ಟಿ
ನೆತ್ತರ ಪಸೆಯಲಿ ಮೊಳಕೆ ಹೆಪ್ಪುಗಟ್ಟಿದೆ.
ಬೆಂಕಿ ಬಿದ್ದ ಗುಡಿಸಲಲ್ಲಿ ಅಸ್ತಿಪಂಜರಗಳು
ಕರಕಲಾದ ಕನಸುಗಳಲಿ ಚಿಗುರು ಮೊಳೆತು
ಕೆಂಪು ಹೂವುಗಳು ಅರಳಿ ನಿಂತಾಗ

ಮಂದಿರ – ಮಸೀದಿಗಳ ಠೇಕೇದಾರರಿಗೆ
ಚೌಕದಲಿ ನಿಲ್ಲಿಸಿ ಕೇಳುತ್ತೇನೆ ಪಾಪಿಗಳೇ
ನೀವೆಷ್ಟೇ ಹೊಸಕಿ ಹಾಕಿದರೂ ನಾವು
ಮತ್ತೆ ಮತ್ತೆ ಕಂಪು ಬೀರುವ ಹೂವಾಗಿ
ಅರಳಿ ನಿಲ್ಲುತ್ತೇವೆ ಬಯಲು ನಾಡಿನ ತುಂಬ
ಹಚ್ಚ ಹಸುರಿನ ಆಸೆಯ ಹುಲ್ಲು ಗರಿಕೆಯಾಗಿ
ಸೌಹಾರ್‍ದ ಬದುಕಿಗೆ ನಾಂದಿಯಾಗಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...