Home / ಕವನ / ಕವಿತೆ / ಹುಲ್ಲು ಗರಿಕೆಯ ಆಸೆ

ಹುಲ್ಲು ಗರಿಕೆಯ ಆಸೆ

ರಕ್ತ ಸಿಕ್ತ ಕರ್‍ಬಲಾದ ಬೀದಿಗಳೇ
ನಿಮ್ಮೆದೆಯ ಕದವ ತೆರೆದು ಮಾತಾಡಿಸಿ
ಗಲೀಫ್ ತೊಟ್ಟ ಕಲ್ಲು ಗೋರಿಯಾಗಿಸದಿರಿ
ನಿಮ್ಮ ಮನೆ ಬಾಗಿಲಿಗೆ ಬಂದಿರುವೆನು.
ನಿಮ್ಮ ಮನೆ ಮುಂದೆಯೇ ರಕ್ತ ರಣರಂಗವಾಗುವಾಗ,
ನೀವೇಕೆ ಪ್ರತಿಭಟಿಸಲಿಲ್ಲ ಮಾತಾಡಿ ಮೀನಾರುಗಳೇ.
ನಿಮ್ಮ ಬಾಗಿಲ ಮುಂದೆಯೇ ಮನುಷ್ಯತ್ವದ
ಕೊಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವಾಗ
ನೀವೇಕೆ ಸುಮ್ಮನಿದ್ದೀರಿ ಹೇಳಿ ಮಂದಿರದ ಗೋಪುರಗಳೇ
ಕೊಲೆಯಾಗಿ ಬಿದ್ದ ಶವರಾಶಿಯಲ್ಲಿ
ಜಾತಿ ಹೆಕ್ಕುವವರನು ನಡುಬೀದಿಯಲಿನ ನಿಲ್ಲಿಸಿ ಕೇಳುವೆ
ಕೊಲೆಗಡುಕರೇ ವಿಶ್ವದ ಕಳಂಕಿತರೇ
ಮಂದಿರ, ಮಸೀದಿಯಲಿ ಕದನಕ್ಕೆ ಕಾಲುಕೆದರುವವರೇ,
ದೇಶಭಕ್ತಿಯ ಸೋಗಿನಲಿ ಮುಂದೆ ಬಂದವರೇ
ಹಾಡುಹಗಲೇ ನಿಮ್ಮ ಸೋದರಿ ವಿಧವೆಯಾದುದಕ್ಕೆ
ಧನದಾಹದ ಬೆಂಕಿಯಲ್ಲಿ ಬೆಂದುಹೋದುದಕ್ಕೆ
ದೇಗುಲ ಸಂಸ್ಕೃತಿಗೆ ತಳಪಾಯ ಹಾಕಿದುದಕ್ಕೆ
ಹೆಣ್ಣುಗಳ ಸಾಯಿಸಿ, ಹೊಟ್ಟೆ ಹೊರೆಯುತ್ತಿರುವುದಕ್ಕೆ
ಅವಳ ‘ಸತಿ’ ಗುಡಿಯ ಜೀರ್‍ಣೋದ್ಧಾರದ ಬಗ್ಗೆ
ಎಚ್ಚರ! ಸತಿಯಾದ ಗುಡಿಯ ಕಲ್ಲುಗಳೇ ಕೇಳುತ್ತವೆ
ಮುಂದೊಂದು ದಿನ ನಿಮ್ಮ ಕರ್‍ಮಕಾಂಡದ ಲೆಕ್ಕ
ಅವಳ ಖಾತೆ ಪುಸ್ತಕದಲ್ಲಿ ಬರೆದು
ನಿಮ್ಮನು ಕೋರ್‍ಟಿಗೆ ಎಳೆಯುತ್ತಾಳೆ.
ನಿಮ್ಮ ಮೇಲಿನ ಆರೋಪಪಟ್ಟಿ ಸಿದ್ಧಪಡಿಸುತ್ತಾಳೆ.
ದಾಸ್ತಾವೇಜುಗಳು ಸಾಬೀತಾದ ದಿನ
ಲೋಕದ ಜೈಲಿನ ಗೋಡೆಗಳು ಸಾಕಾಗಲಾರವು
ನಿಮ್ಮನ್ನು ಕೂಡಿ ಹಾಕಲು.
ನಿಮ್ಮ ಪಾಪದ ಬೆಳೆ ಬಾನೆತ್ತರಕ್ಕೆ ಬೆಳೆದು
ಬಹುದೂರ ನಿಮ್ಮ ಮೋಕ್ಷದ ದಾರಿ.
ಕಾವೇರಿ, ಗಂಗೆ, ತುಂಗೆ ಯಮುನೆಯರು
ಸಾಕಾಗುವುದಿಲ್ಲ ನಿಮ್ಮ ಪಾಪ ತೊಳೆಯಲು.
ಕಾವಿಗಳೆದೆಯಲ್ಲಿ ಮುಚ್ಚಿಟ್ಟ ಕೋವಿಗಳೇ
ಮಂದಿರ – ಮಸೀದಿಗಳಲ್ಲಿ ಅಡಗಿಸಿಟ್ಟ ಬಂದೂಕುಗಳೇ,
ಮದ್ದು ತುಂಬಿದ ಕುಂಡ ಕಮಂಡಲಗಳೇ,
ಆಧ್ಯಾತ್ಮದ ಗುಹೆಯಲ್ಲಿ ಮೊಳಕೆಯೊಡೆಯಲಾರಿರಿ
ಕಣ್ಣ ಬಿಂಬದ ತುಂಬ ವಸಂತ ಮೂಡಿಸಲಾರಿರಿ
ಹಸಿದ ಹೊಟ್ಟೆಗೆ ರೊಟ್ಟಿಯಾಗಲಾರಿರಿ
ಮಂತ್ರದುಗುಳಿನಲಿ ತೇಜಾಬು ಬೆರಸಿ
ಗರ್‍ಭಗುಡಿಯಲಿ ಒಳಸಂಚು ನಡೆಸಿ,
ವ್ಯಾಪಾರ ವಹಿವಾಟು ಕುದುರಿಸಲಾರಿರಿ
ಖಾದಿ, ಖಾಕಿ, ಕಾವಿಗಳಿಗೆ
ಅರ್‍ಪಿತ ದೆಹಲಿಯೆಂಬ ಬೆಲೆವಣ್ಣು
ಡಿಸೆಂಬರ್ ಆರು ಬಂತೆಂದರೆ ನಡುಗುತ್ತಾಳೆ
ಬಾಬ್ರಿ ಮಸೀದಿ ನೆಲಕ್ಕುರುಳಿ
ಇತಿಹಾಸದಲ್ಲಿ ಕಪ್ಪಾದ ಆ ದಿನ
ಗುಮ್ಮಟ ಉರುಳಿದ ದಿನ
ಜಟಕಾ ಬಂಡಿ ಸುಟ್ಟು ಹೋದ ದಿನ
ಕೂಲಿ ಬಡವರು ಕರಕಲಾದ ದಿನ
ಸಂಸ್ಕೃತಿಯೆಂಬ ಮಂತ್ರ ಉಗುಳುವ ನೀವು
ಸೌಹಾರ್‍ದ ಸಂಪತ್ತನು ಲೂಟಿ ಮಾಡಿದ ದಿನ
ಗಣಿ ಧೂಳಿನಲ್ಲಿ ಉಸಿರುಗಟ್ಟಿ
ನೆತ್ತರ ಪಸೆಯಲಿ ಮೊಳಕೆ ಹೆಪ್ಪುಗಟ್ಟಿದೆ.
ಬೆಂಕಿ ಬಿದ್ದ ಗುಡಿಸಲಲ್ಲಿ ಅಸ್ತಿಪಂಜರಗಳು
ಕರಕಲಾದ ಕನಸುಗಳಲಿ ಚಿಗುರು ಮೊಳೆತು
ಕೆಂಪು ಹೂವುಗಳು ಅರಳಿ ನಿಂತಾಗ

ಮಂದಿರ – ಮಸೀದಿಗಳ ಠೇಕೇದಾರರಿಗೆ
ಚೌಕದಲಿ ನಿಲ್ಲಿಸಿ ಕೇಳುತ್ತೇನೆ ಪಾಪಿಗಳೇ
ನೀವೆಷ್ಟೇ ಹೊಸಕಿ ಹಾಕಿದರೂ ನಾವು
ಮತ್ತೆ ಮತ್ತೆ ಕಂಪು ಬೀರುವ ಹೂವಾಗಿ
ಅರಳಿ ನಿಲ್ಲುತ್ತೇವೆ ಬಯಲು ನಾಡಿನ ತುಂಬ
ಹಚ್ಚ ಹಸುರಿನ ಆಸೆಯ ಹುಲ್ಲು ಗರಿಕೆಯಾಗಿ
ಸೌಹಾರ್‍ದ ಬದುಕಿಗೆ ನಾಂದಿಯಾಗಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...