ಕಳೆದು ಹೋದವರು

ಐ.ಟಿ., ಬಿ.ಟಿ. ಕಂಪನಿಗಳು
ನಗರದ ಜನಜಂಗುಳಿ
ಝಗಝಗಿಸುವ ದೀಪಾಲಂಕಾರ
ಕಣ್ಣು ಕುಕ್ಕುವ ಬೆಳಕು
ತಲೆಸುತ್ತುವ ಎತ್ತರದ ಬಂಗಲೆಗಳು.

ಗಿಜಿಗುಡುವ ಜನಜಂಗುಳಿಯ ಮಧ್ಯೆ
ಏಕಾಂಗಿಯಾಗಿದೆ ಒಂಟಿ ಬದುಕು
ಮನುಜ ಮನುಜರ ಮದ್ಯ
ತುಂಬಲಾಗದ ಆಳ ಕಂದಕ
ಎಷ್ಟೊಂದು ಗಹನ?

ಬೇಸರ ಕಳೆಯಲು
ಸಂಗಾತಿ ಪಡೆಯಲು
ನಾಯಿ ಸಾಕುತ್ತಾರೆ ಇಲ್ಲಿ
ಬೆಕ್ಕುಗಳ ಒಡನಾಟ
ಟಿ.ವಿ, ಮೊಬೈಲ್‌ಗಳ ಆತ್ಮಸಂಗಾತ
ನಗರದ ಅಸಂಖ್ಯ ಜನರ
ನಡುವೆ ಏಕಾಂಗಿ ಬದುಕು
ಅತ್ತರೂ ಒಬ್ಬರೆ ಅಳಬೇಕು
ಗೋಳು ಕೇಳುವವರಾರು
ಸಾಂತ್ವನಕ್ಕೆ ಸಮಯವಿಲ್ಲ ಇಲ್ಲಿ
ಎಲ್ಲರೂ ಬಿಝಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲೆಕ್ಟ್ರೋ ಸೋಲಾರ ಬೈಕ್
Next post ಅವರು

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…