Home / ಕವನ / ಕವಿತೆ / ಮುಮ್ತಾಜಳ ಮಹಲು

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಭವ್ಯ ಇಮಾರತ್ತು ಕಟ್ಟಿಸಿ
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು.
ಆದರೆ ನನ್ನ ಪ್ರಿಯತಮನ
ಹೃದಯದಲೇ ಕಟ್ಟಿಸಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್
ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್‍ಪದ ಮೊಹರುಗಳು ಕಂಡಾವು
ಯಮುನೆಯ ತೀರದಲ್ಲೊಮ್ಮೆ
ನಿಂತು ಕಣ್ಣುಬಿಟ್ಟು ಸುತ್ತಲೂ
ನೋಡು ಮುಮ್ತಾಜ್
ಅಲ್ಲಿ ನಿನಗೆ ತಿಳಿಜಲದ ಯಮುನೆ
ಶಹೀದಾದ ವೀರ ಸೈನಿಕರ ರಕ್ತದಿಂದ
ಕೆಂಪುದಾದ ಕಂಡೀತು!
ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಏನೆಂದು
ಎಲ್ಲರಿಗೂ ಗೊತ್ತು
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೆಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತ ಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡ ಶಿಲ್ಪಿಗಳ ಆಕ್ರಂಧನಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಭವ್ಯ ತಾಜಮಹಲಿನ
ಮೀನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಗೋರಿಗಳಲ್ಲಿ ಗುನುಗುಟ್ಟುತ್ತದೆ
ನಿನ್ನ ಬಾದಶಹನ ಹೃದಯದಲಿ
ನಿನೊಬ್ಬಳೇನೂ ಅಲ್ಲ ಮುಮ್ತಾಜ್
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲಿ ಮೈಮರೆವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕೀಕತ್ತುಗಳಿಂದ
ಸುತ್ತುವರಿದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...