Home / ಕವನ / ಕವಿತೆ / ಪರದೆಯ ಹಿಂದೆ

ಪರದೆಯ ಹಿಂದೆ

ದರ್‍ಗಾದ ಎರಡು ಘನ ಗಂಭೀರ
ಮೀನಾರುಗಳ ಮುಂದೆ ಸಾಲು ಸಾಲು ಮನೆಗಳು
ಬಾಗಿಲಿಗೆ ಕಟ್ಟಿದ ಗೋಣಿ ತಟ್ಟಿನ ಪರದೆಗಳು
ಬಣ್ಣಗಳಿಲ್ಲ ಚಿತ್ತಾರಗಳಿಲ್ಲ, ಭಣಗುಟ್ಟುವ
ಬದುಕನು ಸಾರಿ ಸಾರಿ ಹೇಳುತ್ತಿದ್ದವು.
ಹಬ್ಬ ಹುಣ್ಣಿಮೆ ಬಂದಾಗ ಒಳಬಾಗಿಲಿಗೆ
ಅಮ್ಮಿ ಕಟ್ಟುತ್ತಿದ್ದಳು ಕಸೂತಿ ಹಾಕಿದ ಚಿತ್ತಾರದ
ರಂಗುರಂಗಿನ ಬಾಗಿಲ ಪರದೆಗಳು.
ಅದಕ್ಕೆ ಇಳಿಬಿಟ್ಟ ಬಣ್ಣ ಬಣ್ಣದ ಕುಚ್ಚುಗಳು
ನಾನೂ ಕ್ರೋಶಾದಲಿ ಹೆಣೆಯುವಾಸೆ
ಬಣ್ಣ ಬಣ್ಣದ ದಾರಗಳ ಚಿತ್ತಾಕರ್‍ಷಕ ಪರದೆ
ನನಗೇನು ಗೊತ್ತಿತ್ತು ಮುಂದೊಂದು ದಿನ
ಈ ಪರದೆಯೇ ನನ್ನ ಮುಖಕ್ಕೆ
ಮರೆ ಮಾಡುವ ನಖಾಬ್ ಆಗುತ್ತದೆ ಎಂದು?

ಮೊದಲ ಬಾರಿ ಈ ಹಿಜಾಬು ಧರಿಸಿದಾಗ
ಶಕೆಯಿಂದ ಸಿಡಿಮಿಡಿಗೊಂಡು ತಲೆ ಸುತ್ತು ಬಂದು
ನನಗರಿವಿಲ್ಲದಂತೆಯೇ ಕಿತ್ತು ಬಿಸಾಕಿದ್ದೆ.
ಬುದ್ಧಿ ಹೇಳಿದ ಬಂಧು ಬಾಂಧವರು
ಇದು ನಮ್ಮ ಧರ್‍ಮದ ಪವಿತ್ರ ಉಡುಪು
ಬಿಡುವುದು ಅಲ್ಲಾಹನಿಗೆ ಸುತಾರಾಂ ಇಷ್ಟವಿಲ್ಲ.
ಮತ್ತೆ ಪರದೆಯ ಹಿಂದೆ ದೂಡಿದರು.
ಬುರ್‍ಖಾದ ಜಾಳಿಗೆ ನನ್ನ ಕಣ್ಣನ್ನು ಮುಚ್ಚಿದಾಗ
ಇಡೀ ಲೋಕವೇ ಕಪ್ಪಾಗಿ ಕಂಡಿತ್ತು.
ಸಾಕಿದ ಬೆಕ್ಕು, ನಾಯಿಗಳಿಗೆ ನೆರೆಹೊರೆಯವರಿಗೆ,
ಶಾಲೆಯ ಸೀತೆಗೂ ನಾನು ಅಪರಿಚಿತಳಾಗಿದ್ದೆ.
ಆಗ ಸಹಚರರೆಲ್ಲ ದೂರವಾದಂತೆ ಭಾಸವಾಗಿತ್ತು.
ನನ್ನ ಜಗತ್ತಿನಲಿ ಕತ್ತಲಾವರಿಸಿದಂತಾಗಿತ್ತು.
ಪರದೆ ನನ್ನ ಸುತ್ತಲೂ ಬೇಲಿ ತನ್ನಷ್ಟಕ್ಕೇ ನಿರ್‍ಮಿಸಿತ್ತು.

ರಕ್ಷಣೆಯ ಕ್ರೂರ ಪಹರೆಯ ಗೋಡೆ
ಬೇಸಿಗೆ ಬಿಸಿಲಿಗೆ ಬೆವರಿನ ತೊಪ್ಪೆ,
ಯಮಯಾತನೆಗೆ ಉಸಿರುಗಟ್ಟುವ ಹಿಂಸೆ.
ಪಹರೆ ಗೋಡೆಗಳ ಮಧ್ಯೆ ಚಹರೆ ಮುಸುಕಿನಲಿ
ಪರದೆ ಹೊದ್ದು ಮಾಂಸದ ಮುದ್ದೆಯಾಗಿದ್ದೆ.
ಜೀವಪೋಷಕ ಧಾತುವಿನ ಸತುವು ನಾನು
ಪೋಷಿಸಬಲ್ಲೆ ಲೋಕವನ್ನು ಸಾಯಿಸಲಾರೆ.
ಜೀವನದಿಯಾಗಿ ಹರಿದು ತಪ್ತ ಆತ್ಮಗಳಿಗೆ
ತಂಪನ್ನೆರೆದು ಅಮೃತ ಸಿಂಚನಗೈದಳು
ಶತಮಾನಗಳಿಂದ ಕಾದು ಕೆಂಪಾದ ಧರೆಗೆ
ಮಳೆಯ ಸಿಂಚನವಾಗಿ ತಣ್ಣಗಾಗಿಸಿದವಳು.
ನನಗೆ ಗೊತ್ತಿದೆ ಬದುಕುವುದು ಹೇಗೆಂದು
ನಿರ್‍ಬಂಧಗಳ ಸರಹದ್ದು ಮೀರುವುದು ಹೇಗೆಂದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...