Home / ಕವನ / ಕವಿತೆ / ಸ್ವಾತಂತ್ರ್ಯ ಎಂದರೇನು

ಸ್ವಾತಂತ್ರ್ಯ ಎಂದರೇನು

ಅವರು ಹೆತ್ತು ಹೆತ್ತು ನಲುಗಿದ ಹೆಣ್ಣುಗಳು
ದುಡಿದು ದುಡಿದು ಸವೆದು ಹೋದ ದೇಹಗಳು
ಸಹಿಸಿ ಸಹಿಸಿ ಸುಣ್ಣವಾದ ಅವರ ಮನಸುಗಳು
ಸುತ್ತಲೂ ಎತ್ತರೆತ್ತರದ ಪಹರೆ ಗೋಡೆಗಳು
ಉಸಿರುಗಟ್ಟಿಸುವ ನಿಯಮಗಳು
ನಡುವೆ ಸಮಾಧಿಯಾದ ಬದುಕು.
ಗೋಡೆಯಾಚೆ ತೂಗುತ್ತಿದೆ ನೋಡು
ನಿರಂತರ ತಲ್ಲಾಖಿನ ಕತ್ತಿ
ಅದು ಯಾವಾಗ ಬೇಕಾದರೂ
ಅವಳ ಕತ್ತು ಕೊಯ್ಯುತ್ತದೆ.
ಪ್ರಪಂಚದ ಓದು ಅವಳಿಗೇಕೆ?
ಖುರಾನ್ ಓದು ಸಾಕು.
ಧರ್‍ಮ ಉಸ್ತುವಾರಿಯ ನಡುವೆ
ನಲುಗಿದ ಅವಳ ಬಾಲ್ಯ,
ನಾಟಿ ಕೋಳಿಗೆ ದಕ್ಕುವ
ವಿವಿಧ ಕಾಳಿನ ವೈವಿಧ್ಯ
ಹೆಕ್ಕಿ ತಿನ್ನುವ ಅವಕಾಶ
ಫಾರಂ ಕೋಳಿಗೆ ಎಲ್ಲಿ?
ಹಾಕಿದ ಫೀಡ್ಸ್, ನಿಂತ ನೀರನ್ನೇ ಕುಡಿದು,
ಪಂಜರದಲ್ಲಿ ಬಂಧಿ ಅವಳಿಗೆ
ಹೇಗೆ ದಕ್ಕಿತು ಸ್ವಾತಂತ್ರ್ಯ
ಬೆಳ್ಳಗೆ ಫಾರಮ್‌ ಕೋಳಿಯಂತಹ
ಬಿಳಿ ಹೆಂಡತಿ ಅವನ ಹೆಮ್ಮೆಯ ಆಯ್ಕೆ ನಿಜ.
ಇವಳಲ್ಲ, ಇನ್ನೊಬ್ಬಳು ಇದ್ದೇ ಇದೆಯಲ್ಲ!
ನಾಲ್ಕರತನಕದ ಗಡುವು ನಿರಾಳ
ಫಾರಂ ಕೋಳಿಗೆ ಕತ್ತಲ
ಗವಿಯ ಇಕ್ಕಟ್ಟಿನ ಬದುಕು
ಸೂರ್‍ಯ ಕಿರಣ ತಾಕದೇ
ವಿದ್ಯುತ್‌ ಬಲ್ಬಿನ ಬೆಳಕು
ಯಾವ ವಸಂತದ ರುಚಿಯೂ ಕಾಣದಿರುವ
ಅದರ ಬದುಕು ನಿರ್‍ಬಂಧಿತ
ಸರಪಳಿಗಳು, ಸರಹದ್ದುಗಳ ಮಧ್ಯ
ಶುದ್ಧ ಗಾಳಿ, ಬೆಳಕು ನಿಶಿದ್ಧ ವಲಯದಲಿ
ಅರಳಲಾರದೇ, ಮುದುಡಿದ ಕೆಂಪು ತಾವರೆ
ಚೌಕಟ್ಟಿನಲಿ ಬಂಧಿತ
ಕಪ್ಪು ಬಿಳುಪಿನ ಭಾವಚಿತ್ರದಲ್ಲಿ
ಮೂಡಲಾರದು ವೈವಿಧ್ಯತೆಯ ಬಣ್ಣಗಳು,
ಆಯ್ಕೆಯಿಲ್ಲ, ಇಚ್ಛೆಯಿಲ್ಲ.
ಕತ್ತಲ ಗವಿಯಲ್ಲಿ ಬೇತಾಳ
ಕಿಟಕಿಯಾಚೆ ಪರದೆ ಸರಿಸಿ ಇಣುಕಿದರೆ,
ಶೂನ್ಯ ತುಂಬಿದ ಆಕಾಶದಲ್ಲಿ
ದುಃಖದ ಕಾರ್‍ಮೋಡ ಚೆಲ್ಲಾಡಿ
ಆದರೂ ರೆಕ್ಕೆ ಪುಕ್ಕ ಹಚ್ಚಿಕೊಂಡು ಆಕಾಶದಲ್ಲಿ
ಹೂರ್‌ಪರಿ’ಯಂತೆ ಹಾರುತ್ತೇನೆ.
ಬಂಧನದ ಸರಪಳಿ ಕಿತ್ತೆಸೆದು ಬೆಳ್ಳಕ್ಕಿ
ನಿರಾಂತಕ ಹಾರಾಡುತ್ತೇನೆ.
ನಾನು ಅನುಭವಿಸಿದ ಬಂಧನದ ನರಕಯಾತನೆ
ಕೆಲ ದಿನಗಳಾದರೂ ಅವನೂ ಅನುಭವಿಸಲಿ
ಆಗ ತಿಳಿಯುತ್ತದೆ ಅವನಿಗೆ
ಸ್ವಾತಂತ್ರ ಎಂದರೇನೆಂದು.
*****
(ಹೂ‌ರ್ ಪರಿ-ದೇವಕನ್ಯೆ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...