Home / ಕವನ / ಕವಿತೆ / ಸ್ವಾತಂತ್ರ್ಯ ಎಂದರೇನು

ಸ್ವಾತಂತ್ರ್ಯ ಎಂದರೇನು

ಅವರು ಹೆತ್ತು ಹೆತ್ತು ನಲುಗಿದ ಹೆಣ್ಣುಗಳು
ದುಡಿದು ದುಡಿದು ಸವೆದು ಹೋದ ದೇಹಗಳು
ಸಹಿಸಿ ಸಹಿಸಿ ಸುಣ್ಣವಾದ ಅವರ ಮನಸುಗಳು
ಸುತ್ತಲೂ ಎತ್ತರೆತ್ತರದ ಪಹರೆ ಗೋಡೆಗಳು
ಉಸಿರುಗಟ್ಟಿಸುವ ನಿಯಮಗಳು
ನಡುವೆ ಸಮಾಧಿಯಾದ ಬದುಕು.
ಗೋಡೆಯಾಚೆ ತೂಗುತ್ತಿದೆ ನೋಡು
ನಿರಂತರ ತಲ್ಲಾಖಿನ ಕತ್ತಿ
ಅದು ಯಾವಾಗ ಬೇಕಾದರೂ
ಅವಳ ಕತ್ತು ಕೊಯ್ಯುತ್ತದೆ.
ಪ್ರಪಂಚದ ಓದು ಅವಳಿಗೇಕೆ?
ಖುರಾನ್ ಓದು ಸಾಕು.
ಧರ್‍ಮ ಉಸ್ತುವಾರಿಯ ನಡುವೆ
ನಲುಗಿದ ಅವಳ ಬಾಲ್ಯ,
ನಾಟಿ ಕೋಳಿಗೆ ದಕ್ಕುವ
ವಿವಿಧ ಕಾಳಿನ ವೈವಿಧ್ಯ
ಹೆಕ್ಕಿ ತಿನ್ನುವ ಅವಕಾಶ
ಫಾರಂ ಕೋಳಿಗೆ ಎಲ್ಲಿ?
ಹಾಕಿದ ಫೀಡ್ಸ್, ನಿಂತ ನೀರನ್ನೇ ಕುಡಿದು,
ಪಂಜರದಲ್ಲಿ ಬಂಧಿ ಅವಳಿಗೆ
ಹೇಗೆ ದಕ್ಕಿತು ಸ್ವಾತಂತ್ರ್ಯ
ಬೆಳ್ಳಗೆ ಫಾರಮ್‌ ಕೋಳಿಯಂತಹ
ಬಿಳಿ ಹೆಂಡತಿ ಅವನ ಹೆಮ್ಮೆಯ ಆಯ್ಕೆ ನಿಜ.
ಇವಳಲ್ಲ, ಇನ್ನೊಬ್ಬಳು ಇದ್ದೇ ಇದೆಯಲ್ಲ!
ನಾಲ್ಕರತನಕದ ಗಡುವು ನಿರಾಳ
ಫಾರಂ ಕೋಳಿಗೆ ಕತ್ತಲ
ಗವಿಯ ಇಕ್ಕಟ್ಟಿನ ಬದುಕು
ಸೂರ್‍ಯ ಕಿರಣ ತಾಕದೇ
ವಿದ್ಯುತ್‌ ಬಲ್ಬಿನ ಬೆಳಕು
ಯಾವ ವಸಂತದ ರುಚಿಯೂ ಕಾಣದಿರುವ
ಅದರ ಬದುಕು ನಿರ್‍ಬಂಧಿತ
ಸರಪಳಿಗಳು, ಸರಹದ್ದುಗಳ ಮಧ್ಯ
ಶುದ್ಧ ಗಾಳಿ, ಬೆಳಕು ನಿಶಿದ್ಧ ವಲಯದಲಿ
ಅರಳಲಾರದೇ, ಮುದುಡಿದ ಕೆಂಪು ತಾವರೆ
ಚೌಕಟ್ಟಿನಲಿ ಬಂಧಿತ
ಕಪ್ಪು ಬಿಳುಪಿನ ಭಾವಚಿತ್ರದಲ್ಲಿ
ಮೂಡಲಾರದು ವೈವಿಧ್ಯತೆಯ ಬಣ್ಣಗಳು,
ಆಯ್ಕೆಯಿಲ್ಲ, ಇಚ್ಛೆಯಿಲ್ಲ.
ಕತ್ತಲ ಗವಿಯಲ್ಲಿ ಬೇತಾಳ
ಕಿಟಕಿಯಾಚೆ ಪರದೆ ಸರಿಸಿ ಇಣುಕಿದರೆ,
ಶೂನ್ಯ ತುಂಬಿದ ಆಕಾಶದಲ್ಲಿ
ದುಃಖದ ಕಾರ್‍ಮೋಡ ಚೆಲ್ಲಾಡಿ
ಆದರೂ ರೆಕ್ಕೆ ಪುಕ್ಕ ಹಚ್ಚಿಕೊಂಡು ಆಕಾಶದಲ್ಲಿ
ಹೂರ್‌ಪರಿ’ಯಂತೆ ಹಾರುತ್ತೇನೆ.
ಬಂಧನದ ಸರಪಳಿ ಕಿತ್ತೆಸೆದು ಬೆಳ್ಳಕ್ಕಿ
ನಿರಾಂತಕ ಹಾರಾಡುತ್ತೇನೆ.
ನಾನು ಅನುಭವಿಸಿದ ಬಂಧನದ ನರಕಯಾತನೆ
ಕೆಲ ದಿನಗಳಾದರೂ ಅವನೂ ಅನುಭವಿಸಲಿ
ಆಗ ತಿಳಿಯುತ್ತದೆ ಅವನಿಗೆ
ಸ್ವಾತಂತ್ರ ಎಂದರೇನೆಂದು.
*****
(ಹೂ‌ರ್ ಪರಿ-ದೇವಕನ್ಯೆ)

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...