Home / ಲೇಖನ / ವಿಜ್ಞಾನ / ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್‍ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡಿ ಇದೊಂದು ಮಾಂಸಾಹಾರಿಯೇ ಎಂದು ತಿರ್‍ಮಾನಿಸಲಾಗಿದೆ. ಮೊಟ್ಟೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಂದರೆ ಪ್ರತಿಶತ ೨೫೦ ಮಿ ಗ್ರಾಂನಿಂದ ೩೦೦ ಮಿ ಗ್ರಾಂ ನಷ್ಟು ಕೊಲಸ್ಟರಾಲ್ ಸಂಗ್ರಹವಿದೆ. ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ನಾರಿನಂಶ ಮೊಟ್ಟೆಯಲ್ಲಿ ಇಲ್ಲವೇ ಇಲ್ಲ. ಹಾಗೆಯೇ ಶಕ್ತಿಯ ಉತ್ಪಾದನೆಗೆ ಅಗತ್ಯವಾಗಿ ಬೇಕಾದ ಕಾರ್‍ಬೋಹೈಡ್ರೆಟ್ ಮೊಟ್ಟೆಯಲ್ಲಿ ಇಲ್ಲ. ನಿಸರ್‍ಗದಲ್ಲಿ ಮೊಟ್ಟೆ ತಿನ್ನುವ ಪ್ರಾಣಿ ಮಾನವನ್ನೊಬ್ಬನೇ ಎಂದು ವಿಜ್ಞಾನಿಗಳು ಹೇಳುತ್ತಾರೆ ಡಾ| ಇನ್ನಾ ಎಂಬ ಆಹಾರ ವಿಜ್ಞಾನಿಗಳ ಪ್ರಕಾರ ಮೊಟ್ಟೆ ವಿಷ ಆಹಾರವೆಂದು ಹೇಳಲಾಗುತ್ತದೆ. ಆದ್ದರಿಂದ ಸಸ್ಯಮೂಲದ ಪ್ರೋಟೀನ್, ವಿಟಮಿನ್, ಕಾರ್‍ಬೊಹೈಡ್ರೆಟ್, ನಾರಿನಂಶ, ಕೊಬ್ಬು ಪ್ರಕೃತಿಯಲ್ಲಿ ಸಾಕಷ್ಟು ಇರುವಾಗ ಆರೋಗ್ಯವನ್ನು ಹಾಳು ಮಾಡುವ ಮೊಟ್ಟೆಗಳನ್ನು ಸೇವಿಸುವುದು ಅಪಾಯವೆಂದು ಈ ವಿಜ್ಞಾನಿಗಳು ತಿಳಿಸುತ್ತಾರೆ. ಮೊಟ್ಟೆಯ ಹೊರಕವಚದಲ್ಲಿ ಸು. ೧೫ ರಿಂದ ೨೦ ಸಾವಿರ ಸೂಕ್ಷ್ಮರಂಧ್ರಗಳಿರುತ್ತವೆ. ಮೊಟ್ಟೆ ಮರಿಯಾಗಲು ಈ ಸೂಕ್ಷ್ಮ ರಂಧ್ರದ ಮೂಲಕ ಆಮ್ಲಜನಕ ಪೂರೈಕೆಯಾಗುತ್ತದೆ. ೨೪ ಗಂಟೆಗಳಿಗೂ ಅಧಿಕ ಕಾಲ ಮೊಟ್ಟೆಗಳನ್ನು ಶೇಖರಿಸಿಟ್ಟರೆ ಬ್ಯಾಕ್ಟೀರಿಯಾಗಳು ಮೊಟ್ಟೆಯ ಒಳಮೈ ಪ್ರವೇಶಿಸಿ ತಿನ್ನುವವರಿಗೆ ಕೂಡಲೇ ಅಪಾಯ ತರಬಹುದೆಂದು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...