ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್‍ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡಿ ಇದೊಂದು ಮಾಂಸಾಹಾರಿಯೇ ಎಂದು ತಿರ್‍ಮಾನಿಸಲಾಗಿದೆ. ಮೊಟ್ಟೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಂದರೆ ಪ್ರತಿಶತ ೨೫೦ ಮಿ ಗ್ರಾಂನಿಂದ ೩೦೦ ಮಿ ಗ್ರಾಂ ನಷ್ಟು ಕೊಲಸ್ಟರಾಲ್ ಸಂಗ್ರಹವಿದೆ. ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ನಾರಿನಂಶ ಮೊಟ್ಟೆಯಲ್ಲಿ ಇಲ್ಲವೇ ಇಲ್ಲ. ಹಾಗೆಯೇ ಶಕ್ತಿಯ ಉತ್ಪಾದನೆಗೆ ಅಗತ್ಯವಾಗಿ ಬೇಕಾದ ಕಾರ್‍ಬೋಹೈಡ್ರೆಟ್ ಮೊಟ್ಟೆಯಲ್ಲಿ ಇಲ್ಲ. ನಿಸರ್‍ಗದಲ್ಲಿ ಮೊಟ್ಟೆ ತಿನ್ನುವ ಪ್ರಾಣಿ ಮಾನವನ್ನೊಬ್ಬನೇ ಎಂದು ವಿಜ್ಞಾನಿಗಳು ಹೇಳುತ್ತಾರೆ ಡಾ| ಇನ್ನಾ ಎಂಬ ಆಹಾರ ವಿಜ್ಞಾನಿಗಳ ಪ್ರಕಾರ ಮೊಟ್ಟೆ ವಿಷ ಆಹಾರವೆಂದು ಹೇಳಲಾಗುತ್ತದೆ. ಆದ್ದರಿಂದ ಸಸ್ಯಮೂಲದ ಪ್ರೋಟೀನ್, ವಿಟಮಿನ್, ಕಾರ್‍ಬೊಹೈಡ್ರೆಟ್, ನಾರಿನಂಶ, ಕೊಬ್ಬು ಪ್ರಕೃತಿಯಲ್ಲಿ ಸಾಕಷ್ಟು ಇರುವಾಗ ಆರೋಗ್ಯವನ್ನು ಹಾಳು ಮಾಡುವ ಮೊಟ್ಟೆಗಳನ್ನು ಸೇವಿಸುವುದು ಅಪಾಯವೆಂದು ಈ ವಿಜ್ಞಾನಿಗಳು ತಿಳಿಸುತ್ತಾರೆ. ಮೊಟ್ಟೆಯ ಹೊರಕವಚದಲ್ಲಿ ಸು. ೧೫ ರಿಂದ ೨೦ ಸಾವಿರ ಸೂಕ್ಷ್ಮರಂಧ್ರಗಳಿರುತ್ತವೆ. ಮೊಟ್ಟೆ ಮರಿಯಾಗಲು ಈ ಸೂಕ್ಷ್ಮ ರಂಧ್ರದ ಮೂಲಕ ಆಮ್ಲಜನಕ ಪೂರೈಕೆಯಾಗುತ್ತದೆ. ೨೪ ಗಂಟೆಗಳಿಗೂ ಅಧಿಕ ಕಾಲ ಮೊಟ್ಟೆಗಳನ್ನು ಶೇಖರಿಸಿಟ್ಟರೆ ಬ್ಯಾಕ್ಟೀರಿಯಾಗಳು ಮೊಟ್ಟೆಯ ಒಳಮೈ ಪ್ರವೇಶಿಸಿ ತಿನ್ನುವವರಿಗೆ ಕೂಡಲೇ ಅಪಾಯ ತರಬಹುದೆಂದು ಹೇಳುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಂಗಸು
Next post ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…