Home / ಲೇಖನ / ವಿಜ್ಞಾನ / ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್‍ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡಿ ಇದೊಂದು ಮಾಂಸಾಹಾರಿಯೇ ಎಂದು ತಿರ್‍ಮಾನಿಸಲಾಗಿದೆ. ಮೊಟ್ಟೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಅಂದರೆ ಪ್ರತಿಶತ ೨೫೦ ಮಿ ಗ್ರಾಂನಿಂದ ೩೦೦ ಮಿ ಗ್ರಾಂ ನಷ್ಟು ಕೊಲಸ್ಟರಾಲ್ ಸಂಗ್ರಹವಿದೆ. ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ನಾರಿನಂಶ ಮೊಟ್ಟೆಯಲ್ಲಿ ಇಲ್ಲವೇ ಇಲ್ಲ. ಹಾಗೆಯೇ ಶಕ್ತಿಯ ಉತ್ಪಾದನೆಗೆ ಅಗತ್ಯವಾಗಿ ಬೇಕಾದ ಕಾರ್‍ಬೋಹೈಡ್ರೆಟ್ ಮೊಟ್ಟೆಯಲ್ಲಿ ಇಲ್ಲ. ನಿಸರ್‍ಗದಲ್ಲಿ ಮೊಟ್ಟೆ ತಿನ್ನುವ ಪ್ರಾಣಿ ಮಾನವನ್ನೊಬ್ಬನೇ ಎಂದು ವಿಜ್ಞಾನಿಗಳು ಹೇಳುತ್ತಾರೆ ಡಾ| ಇನ್ನಾ ಎಂಬ ಆಹಾರ ವಿಜ್ಞಾನಿಗಳ ಪ್ರಕಾರ ಮೊಟ್ಟೆ ವಿಷ ಆಹಾರವೆಂದು ಹೇಳಲಾಗುತ್ತದೆ. ಆದ್ದರಿಂದ ಸಸ್ಯಮೂಲದ ಪ್ರೋಟೀನ್, ವಿಟಮಿನ್, ಕಾರ್‍ಬೊಹೈಡ್ರೆಟ್, ನಾರಿನಂಶ, ಕೊಬ್ಬು ಪ್ರಕೃತಿಯಲ್ಲಿ ಸಾಕಷ್ಟು ಇರುವಾಗ ಆರೋಗ್ಯವನ್ನು ಹಾಳು ಮಾಡುವ ಮೊಟ್ಟೆಗಳನ್ನು ಸೇವಿಸುವುದು ಅಪಾಯವೆಂದು ಈ ವಿಜ್ಞಾನಿಗಳು ತಿಳಿಸುತ್ತಾರೆ. ಮೊಟ್ಟೆಯ ಹೊರಕವಚದಲ್ಲಿ ಸು. ೧೫ ರಿಂದ ೨೦ ಸಾವಿರ ಸೂಕ್ಷ್ಮರಂಧ್ರಗಳಿರುತ್ತವೆ. ಮೊಟ್ಟೆ ಮರಿಯಾಗಲು ಈ ಸೂಕ್ಷ್ಮ ರಂಧ್ರದ ಮೂಲಕ ಆಮ್ಲಜನಕ ಪೂರೈಕೆಯಾಗುತ್ತದೆ. ೨೪ ಗಂಟೆಗಳಿಗೂ ಅಧಿಕ ಕಾಲ ಮೊಟ್ಟೆಗಳನ್ನು ಶೇಖರಿಸಿಟ್ಟರೆ ಬ್ಯಾಕ್ಟೀರಿಯಾಗಳು ಮೊಟ್ಟೆಯ ಒಳಮೈ ಪ್ರವೇಶಿಸಿ ತಿನ್ನುವವರಿಗೆ ಕೂಡಲೇ ಅಪಾಯ ತರಬಹುದೆಂದು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...