Home / ಲೇಖನ / ವಿಜ್ಞಾನ / ಪ್ಲೋರೋ ಕಾರ್‍ಬನ್ ಹೊಸ ರಕ್ತ

ಪ್ಲೋರೋ ಕಾರ್‍ಬನ್ ಹೊಸ ರಕ್ತ

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ್ಸ್‌ನಂತ ಮಹಾರೋಗ ತಗುಲಬಹುದು ಮತ್ತು ದುಬಾರಿ ಬೆಲೆ ಕೊಟ್ಟು ಬಡವರಿಗೆ ಕೊಳ್ಳಲಾಗದಿರಬಹುದು. ಇಂಥಹ ಅಡ್ಡಪರಿಣಾಮಗಳನ್ನು ಹೋಗಲಾಡಿಸಲೆಂದೇ ವಿಜ್ಞಾವಿಗಳು ‘ಪ್ಲೋರೋ ಕಾರ್‍ಬನ್’ ನಿಂದ ರೋಗಿಗೆ ರಕ್ತವೃದ್ಧಿಯಾಗುವ ಸಂಶೋಧನೆಯನ್ನು ಮಾಡಿದ್ದಾರೆ. (ಇಲ್ಲಿ ರಕ್ತದ ವರ್‍ಗ ಸಹಿತ ಬದಲಾಗಬಹುದು)

ಅಮೇರಿಕಾದ ವಿಜ್ಞಾನಿಗಳಾದ ಡಾ|| ಪ್ರಾಂಕ್‌ಗೊರನ್ ಮತ್ತು ಡಾ|| ರೆಲ್ಯಾಂಡ್ ಕ್ಲಾರ್‍ಕ್‌ರು ಇದರ ಅದ್ಭುತ ಗುಣವನ್ನು ಬಯಲಿಗೆಳೆದರು. ಫ್ಲೂರೋ ಕಾರ್‍ಬನನ್ನು ದೇಹಕ್ಕೆ ಸೇರಿಸಿದರೆ ಅಡ್ಡಪರಿಣಾಮಗಳಾಗದೇ ಅದು ರಕ್ತವು ಎಷ್ಟು ಅಂಗಾರಾಮ್ಲ, ಆಮ್ಲಜನಕಗಳನ್ನು ಹೀರಿಕೊಳ್ಳುವುದೋ ಅದರ ೧೫ ಪಾಲಿನಷ್ಟು ಅಧಿಕವಾಗಿ ಹೀರಿಕೊಂಡು ರೋಗಿ ಸಾಯುವುದನ್ನು ತಪ್ಪಿಸಬಲ್ಲದು ಎಂದು ದೃಧೀಕರಿಸುತ್ತಾರೆ.

೧೯೭೨ ರಲ್ಲಿ ಅಮೇರಿಕಾದ ಡಾ || ವಿಲಿಯಂ ಕೋಸೆನ್‌ಬಾಂ ಅವರು ಇಲಿಗಳ ಮೇಲೆ ಅವುಗಳ ರಕ್ತದ ಪ್ರತಿಶತ ೭೫ ರಷ್ಟು ಪ್ರಮಾಣದಲ್ಲಿ ಫ್ಲೂರೋ ಕಾರ್‍ಬನನ್ನೂ ಪೂರೈಸಿ ನೋಡಿದರು. ಅದರಿಂದ ಇಲಿಗಳ ಮಿದುಳು ಮತ್ತು ಹೃದಯದ ಕ್ರಿಯೆಗಳಲ್ಲಿ ವ್ಯತ್ಯಾಸವುಂಟಾಗಲಿಲ್ಲ. ಬಹುಬೇಗನೆ ಫ್ಲೂರೋಕಾರ್ಬನ್ ಅಂಶ ದೇಹದಿಂದ ಮಾಯವಾಗಿ ರಕ್ತವು ಅಧಿಕಗೊಳ್ಳುತ್ತಿರುವುದು ಕಂಡು ಬಂದಿತು. ಇಲಿ ಮತ್ತು ನಾಯಿಗಳ ದೇಹಕ್ಕೆ ಫ್ಲೂರೋಕಾರ್‍ಬನನ್ನು ಪ್ರಯೋಗಿಸಿ ಅವು ದೀರ್‍ಘಕಾಲ ಏನೂ ತೊಂದರೆ ಇಲ್ಲದೇ ಬದುಕಿದ್ದನ್ನು ಮನಗಂಡರು.

ಹಾರ್ವರ್ಡ್‌ ವಿಶ್ವವಿದ್ಯಾಲಯರಲ್ಲಿ ೧,೫೦೦ ಕ್ಕಿಂತ ಹೆಚ್ಚುರ ರೀತಿ ಫ್ಲೂರೋ ಕಾರ್‍ಬನ ಮಾದರಿ ಚುಚ್ಚು ಮದ್ದುಗಳನ್ನು ತಯಾರಿಸಿ ಅಧ್ಯಯನ ಮಾಡುವ ಕಾರ್‍ಯ ಮುಂದುವರೆದಿದೆ. ಇದರಲ್ಲಿ ಯಾವ ಮಾದರಿಯ ಪ್ರಯೋಗದಿಂದ ಬಲುಬೇಗನೆ ತಾನಾಗಿ ರಕ್ತತುಂಬಿಗೊಳ್ಳುತ್ತದೆ ಎಂಬುದರ ಸೂಕ್ಷ್ಮ ಪರೀಕ್ಷೆಯೂ ನಡೆಯುತ್ತದೆ. ಈ ಶತಮಾನದ ಕೊನೆಗೆ ರಕ್ತಹಾನಿಯ ಅಗತ್ಯವಿಲ್ಲದೇ ನಿಜರಕ್ತವಿಲ್ಲದೇ ಹೊಸ ಮಾದರಿಯ ರಕ್ತ ಗಳಿಸುವ ಸಂಶೋಧನೆ ಬೆಳಕಿಗೆ ಬರುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...